AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಯುಗಾದಿ ಹಬ್ಬದ ನಿಮಿತ್ತ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಹೋಗಿ ಎಸ್​ಬಿಐ ನೌಕರ ಸಾವು

ಯುಗಾದಿ ಹಬ್ಬದ ನಿಮಿತ್ತ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆ ಹೋಗಿದ್ದ ಎಸ್​ಬಿಐ(SBI) ನೌಕರ ನದಿಯಲ್ಲಿ ಮುಳುಗಿ ಸಾವನ್ನಪಿದ್ದಾರೆ.

ಮೈಸೂರು: ಯುಗಾದಿ ಹಬ್ಬದ ನಿಮಿತ್ತ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಹೋಗಿ ಎಸ್​ಬಿಐ ನೌಕರ ಸಾವು
ಮೃತ ವ್ಯಕ್ತಿ
ಕಿರಣ್ ಹನುಮಂತ್​ ಮಾದಾರ್
|

Updated on: Mar 22, 2023 | 12:52 PM

Share

ಮೈಸೂರು: ಯುಗಾದಿ ಹಬ್ಬದ ನಿಮಿತ್ತ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆ ಹೋಗಿದ್ದ ಎಸ್​ಬಿಐ(SBI) ನೌಕರ ಸಾವನ್ನಪಿದ್ದಾರೆ. ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ನಿವಾಸಿ ಗಂಗಾಧರ್ ಮೃತ ರ್ದುದೈವಿ. ಇಂದು ನಾಡಿನಾದ್ಯಂತ ಯುಗಾದಿ ಹಬ್ಬ ಅದ್ದೂರಿಯಾಗಿ ನಡೆಯುತ್ತಿದ್ದು, ಈ ಹಿನ್ನಲೆ ಟಿ.ನರಸೀಪುರದಲ್ಲಿರುವ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಈ ವೇಳೆ ಸ್ನಾನಕ್ಕೆಂದು ನದಿಗೆ ಇಳಿದಾಗ ಮುಳುಗಿ ಸಾವನ್ನಪಿದ್ದಾರೆ. ಈ ಕುರಿತು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಟೈನರ್​ಗೆ ವಿದ್ಯುತ್ ತಂತಿ ತಗುಲಿ ಗಾಯಗೊಂಡಿದ್ದ ಚಾಲಕ ಸಾವು

ಬೆಂಗಳೂರು ಗ್ರಾಮಾಂತರ: ಚಲಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಾಕಿದ ಪರಿಣಾಮ ಕಂಟೇನರ್ ಸ್ಥಳದಲ್ಲೇ ಹೊತ್ತಿ ಉರಿದು ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದ. ಬಳಿಕ ಆತನನ್ನ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯ ಖಾಸಗಿ ಆಸ್ಪತ್ರೆಗೆ ಆತನನ್ನ ಸೇರಿಸಲಾಗಿತ್ತು. ಇದೀಗ ಜಿಗಣಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಚಾಲಕ ಸಾವನ್ನಪಿದ್ದಾನೆ.

ಇದನ್ನೂ ಓದಿ:ಕೋಲಾರ: ಮಗಳನ್ನು ಏರ್​ಪೋರ್ಟ್​ಗೆ ಬಿಟ್ಟು ಬರುವಾಗ ಕಾರು ಅಪಘಾತ; ತಂದೆ ತಾಯಿ ಸ್ಥಳದಲ್ಲೇ ಸಾವು

ಅಕ್ರಮವಾಗಿ ಮದ್ಯ ಸೇವಿಸಿ ವ್ಯಕ್ತಿ ಸಾವು ಆರೋಪ; ಮೃತದೇಹವಿಟ್ಟು ಗ್ರಾಮಸ್ಥರಿಂದ ಧರಣಿ

ಚಿಕ್ಕಮಗಳೂರು: ಅಕ್ರಮವಾಗಿ ಮದ್ಯ ಸೇವಿಸಿ ಪುಟ್ಟೇಗೌಡ(60) ಎಂಬಾತ ಸಾವನ್ನಪ್ಪಿದ್ದು, ಆತನ ಮೃತದೇಹ ಇಟ್ಟು ಕೊಪ್ಪ ತಾಲೂಕಿನ ಹಿತ್ಲೆಗುಳಿ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ(ಮಾ.21) ಸಂಜೆ ಮದ್ಯ ಸೇವಿಸಿ ಗ್ರಾಮದ ಪುಟ್ಟೇಗೌಡ ಮೃತಪಟ್ಟಿದ್ದಾನೆ. ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಇದು ಸೇರಿ ಮೂರನೇ ವ್ಯಕ್ತಿ ಸಾವನ್ನಪಿದ್ದು, ಅಕ್ರಮವಾಗಿ ಮಾರುತ್ತಿರುವ ಮದ್ಯ ಸೇವನೆಯೇ ಈ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕದೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ, ಎಸ್​ಪಿ ಬರುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಚಿಕ್ಕಕೆರೆ ಸೇತುವೆ ಬಳಿ ಬೈಕ್​ನಿಂದ ಬಿದ್ದು ಇಬ್ಬರು ಸಾವು

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಚಿಕ್ಕಕೆರೆ ಸೇತುವೆ ಬಳಿ ಬೈಕ್​ನಿಂದ ಬಿದ್ದು ಕುಣಿಗಲ್​ ನಿವಾಸಿಗಳಾದ ಚೇತನ್​(28), ಕಿರಣ್​(19) ಸಾವನ್ನಪಿದ್ದಾರೆ. ಕುಣಿಗಲ್​ನಿಂದ ಹುಲಿಯೂರುದುರ್ಗದ ಕಡೆಗೆ ಹೋಗುತ್ತಿದ್ದಾಗ ಬೈಕ್​​​ನಲ್ಲಿ ನಿಯಂತ್ರಣ ತಪ್ಪಿ ಬಿದ್ದು ಸಾವಿಗೀಡಾಗಿದ್ದಾರೆ. ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್