AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಜಿಲ್ಲೆಯಲ್ಲಿ ಜೀತ ಪದ್ಧತಿ ಇನ್ನೂ ಜೀವಂತ: ಜೀತಕ್ಕಿಟ್ಟುಕೊಂಡು ಕೂಡಿಹಾಕಿದ್ದ ತಾಯಿ, ಮಕ್ಕಳ ರಕ್ಷಣೆ

Mysore News: ಮೈಸೂರು ಜಿಲ್ಲೆಯಲ್ಲಿ ಜೀತ ಪದ್ಧತಿ ಇನ್ನೂ ಜೀವಂತವಾಗಿದೆ. ಜೀತಕ್ಕಿಟ್ಟುಕೊಂಡು ತೋಟದಲ್ಲಿ ಕೂಡಿಹಾಕಿದ್ದ ನೇಪಾಳ ಮೂಲದ ಮಹಿಳೆ, ಇಬ್ಬರು ಮಕ್ಕಳನ್ನು ತಾಲೂಕು ಆಡಳಿತ ರಕ್ಷಣೆ ಮಾಡಿರುವಂತಹ ಘಟನೆ ಹೆಚ್​.ಡಿ.ಕೋಟೆ ತಾಲೂಕಿನ ಕೈಲಾಸಪುರ ಗ್ರಾಮದಲ್ಲಿ ನಡೆದಿದೆ. ಇಡೀ ದಿನ ಕೂಲಿ ಕೆಲಸ ಮಾಡುವ ಮಹಿಳೆಗೆ ಹಲವು ಭಾರಿ ಹಲ್ಲೆ ನಡೆಸಿದ್ದು, ಅಲ್ಲದೇ ಪುಟಾಣಿ ಮಕ್ಕಳಿಂದಲೂ ದುಡಿಸಿಕೊಳ್ಳುತ್ತಿದ್ದ ಎಂದು ಆರೋಪಿಸಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಜೀತ ಪದ್ಧತಿ ಇನ್ನೂ ಜೀವಂತ: ಜೀತಕ್ಕಿಟ್ಟುಕೊಂಡು ಕೂಡಿಹಾಕಿದ್ದ ತಾಯಿ, ಮಕ್ಕಳ ರಕ್ಷಣೆ
ನೇಪಾಳ ಮೂಲದ ಮಹಿಳೆಯೊಂದಿಗೆ ತಾಲೂಕು ಆಡಳಿತ ಅಧಿಕಾರಿಗಳು
ರಾಮ್​, ಮೈಸೂರು
| Edited By: |

Updated on: Dec 08, 2023 | 7:44 AM

Share

ಮೈಸೂರು, ಡಿಸೆಂಬರ್​​ 08: ಜಿಲ್ಲೆಯಲ್ಲಿ ಜೀತ ಪದ್ಧತಿ ಇನ್ನೂ ಜೀವಂತ ಇರುವ ಘಟನೆಯೊಂದು ಬೆಳಕಿಗೆ ಬಂದಿದೆ. ಜೀತಕ್ಕಿಟ್ಟುಕೊಂಡು ತೋಟದಲ್ಲಿ ಕೂಡಿಹಾಕಿದ್ದ ನೇಪಾಳ (Nepal) ಮೂಲದ ತಾಯಿ ಮತ್ತು ಇಬ್ಬರು ಮಕ್ಕಳ ರಕ್ಷಣೆ ಮಾಡಿರುವಂತಹ ಘಟನೆ ಹೆಚ್ ಡಿ ಕೋಟೆ ತಾಲ್ಲೂಕಿನ ಕೈಲಾಸಪುರ ಗ್ರಾಮದಲ್ಲಿ ನಡೆದಿದೆ.  ಎಚ್.ಬಿ.ಬಸವರಾಜು ಅವರ ಮಾಹಿತಿ ಮೇರೆಗೆ ಸ್ಥಳಕ್ಕೆ ತಹಶೀಲ್ದಾರ್ ಶ್ರೀನಿವಾಸ್, ಸಿಡಿಪಿಒ ಆಶಾ, ಸಮಾಜ ಕಲ್ಯಾಣ ಇಲಾಖೆ ರಾಮಸ್ವಾಮಿ, ಗಿರಿಜನ ಅಭಿವೃದ್ದಿ ಇಲಾಖೆ ನಾರಾಯಣಸ್ವಾಮಿ ಭೇಟಿ ನೀಡಿ ರೈತ ಈರೇಗೌಡರ ಜಮೀನಿನಲ್ಲಿದ್ದ ಮಹಿಳೆ ಮತ್ತು ಮಕ್ಕಳ ರಕ್ಷಣೆ ಮಾಡಿ ಸಿಡಿಪಿಒ ವಶಕ್ಕೆ ನೀಡಲಾಗಿದೆ.

ಜಮೀನಿನಲ್ಲಿ ಪುಟಾಣಿ ಮಕ್ಕಳೊಟ್ಟಿಗೆ ದನ ಕಾಯುತ್ತಿದ್ದ ನೇಪಾಳ ಮೂಲದ ಮಹಿಳೆ ನಿರ್ಮಲಾ, ಅಧಿಕಾರಿಗಳ ತಂಡ ಕಂಡು ಭಯಭೀತರಾಗಿದ್ದಾರೆ. ಮಧ್ಯವರ್ತಿಯೊಬ್ಬರ ಮೂಲಕ ಪತಿ ಗೋಪಾಲ್ ಇಬ್ಬರು ಮಕ್ಕಳೊಂದಿಗೆ ಈರೇಗೌಡ ಎಂಬುವವರ ಜಮೀನಿನ ತೋಟದ ಮನೆಯಲ್ಲಿ ಒಂದುವರೆ ವರ್ಷದಿಂದ ಕೆಲಸ ಮಾಡುದ್ದರು.

ಇದನ್ನೂ ಓದಿ: ಮುರಿದ ಗುಡಿಸಿಲಿನಲ್ಲಿದೆ ಆ ಅಂಗನವಾಡಿ, ಹೆಗ್ಗಣಗಳು ಅಲ್ಲಲ್ಲಿ ಕೊರೆದು ಹಾಕಿವೆ, ಆದರೂ ಮೈಸೂರು ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ!

ಪತ್ನಿ 200ರೂ, ಪತಿಗೆ 300 ರೂ. ದಿನಕ್ಕೆ ಕೂಲಿ ಆಧಾರದ ಮೇಲೆ ಜಮೀನಿನ ಕೆಲಸಕ್ಕೆ ಸೇರಿಸಿಕೊಂಡಿದ್ದ ಈರೇಗೌಡ, ಬೆಳಗ್ಗೆ ನಾಲ್ಕು ಗಂಟೆಯಿಂದ ರಾತ್ರಿ 8 ಗಂಟೆ ತನಕ ವಿವಿಧ ಕಾಯಕದಲ್ಲಿ ದುಡಿಸಿಕೊಳ್ಳುತ್ತಿದ್ದ ಎಂಬ ಆರೋಪ ಮಾಡಲಾಗಿದೆ. ಹೆಚ್ಚಿನ ಸಮಯದ ಕೆಲಸ ವಿರೋಧಿಸಿದ್ದಕ್ಕೆ ನಾಲ್ಕು ತಿಂಗಳಿಂದ ದಂಪತಿಯನ್ನು ಬೇರ್ಪಡಿಸಿ ಪತಿಯನ್ನು ಕೊಡಗಿನಲ್ಲಿರಿಸಿದ್ದ. ಪತಿ, ಪತ್ನಿ ಭೇಟಿ ಮತ್ತು ಮೊಬೈಲ್ ಮಾತುಕತೆಗೂ ಅವಕಾಶ ಕಲ್ಪಿಸದ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಆಯುಷ್ಮಾನ್‌ ಭಾರತ್ ಯೋಜನೆಯಡಿ ಪ್ರತಿದಿನ 50ಕ್ಕೂ ಅಧಿಕ ಜನರಿಗೆ ಹೃದಯ ಚಿಕಿತ್ಸೆ

ಇಡೀ ದಿನ ಕೂಲಿ ಕೆಲಸ ಮಾಡುವ ಮಹಿಳೆಗೆ ಹಲವು ಭಾರಿ ಹಲ್ಲೆ ನಡೆಸಿ ಊಟಕ್ಕೂ ನೀಡದೆ ಉಪವಾಸ ಇರಿಸಲಾಗಿದೆ. ಅಲ್ಲದೇ ಪುಟಾಣಿ ಮಕ್ಕಳಿಂದಲೂ ದುಡಿಸಿಕೊಳ್ಳುತ್ತಿದ್ದ ಎಂದು ಆರೋಪಿಸಲಾಗಿದೆ. ಸ್ವಗ್ರಾಮಕ್ಕೆ ತೆರಳಲು ಬಿಡದೆ ಬಲವಂತವಾಗಿ ಕೆಲಸ ಮಾಡಿಸುತ್ತಿದ್ದ. ಸದ್ಯ ವಾಸ ಇದ್ದ ತೋಟದ ಮನೆಯಿಂದ ಮಹಿಳೆ ಮತ್ತು ಇಬ್ಬರು ಮಕ್ಕಳ ರಕ್ಷಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು