AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಜಿಲ್ಲೆಯಲ್ಲಿ ಜೀತ ಪದ್ಧತಿ ಇನ್ನೂ ಜೀವಂತ: ಜೀತಕ್ಕಿಟ್ಟುಕೊಂಡು ಕೂಡಿಹಾಕಿದ್ದ ತಾಯಿ, ಮಕ್ಕಳ ರಕ್ಷಣೆ

Mysore News: ಮೈಸೂರು ಜಿಲ್ಲೆಯಲ್ಲಿ ಜೀತ ಪದ್ಧತಿ ಇನ್ನೂ ಜೀವಂತವಾಗಿದೆ. ಜೀತಕ್ಕಿಟ್ಟುಕೊಂಡು ತೋಟದಲ್ಲಿ ಕೂಡಿಹಾಕಿದ್ದ ನೇಪಾಳ ಮೂಲದ ಮಹಿಳೆ, ಇಬ್ಬರು ಮಕ್ಕಳನ್ನು ತಾಲೂಕು ಆಡಳಿತ ರಕ್ಷಣೆ ಮಾಡಿರುವಂತಹ ಘಟನೆ ಹೆಚ್​.ಡಿ.ಕೋಟೆ ತಾಲೂಕಿನ ಕೈಲಾಸಪುರ ಗ್ರಾಮದಲ್ಲಿ ನಡೆದಿದೆ. ಇಡೀ ದಿನ ಕೂಲಿ ಕೆಲಸ ಮಾಡುವ ಮಹಿಳೆಗೆ ಹಲವು ಭಾರಿ ಹಲ್ಲೆ ನಡೆಸಿದ್ದು, ಅಲ್ಲದೇ ಪುಟಾಣಿ ಮಕ್ಕಳಿಂದಲೂ ದುಡಿಸಿಕೊಳ್ಳುತ್ತಿದ್ದ ಎಂದು ಆರೋಪಿಸಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಜೀತ ಪದ್ಧತಿ ಇನ್ನೂ ಜೀವಂತ: ಜೀತಕ್ಕಿಟ್ಟುಕೊಂಡು ಕೂಡಿಹಾಕಿದ್ದ ತಾಯಿ, ಮಕ್ಕಳ ರಕ್ಷಣೆ
ನೇಪಾಳ ಮೂಲದ ಮಹಿಳೆಯೊಂದಿಗೆ ತಾಲೂಕು ಆಡಳಿತ ಅಧಿಕಾರಿಗಳು
ರಾಮ್​, ಮೈಸೂರು
| Edited By: |

Updated on: Dec 08, 2023 | 7:44 AM

Share

ಮೈಸೂರು, ಡಿಸೆಂಬರ್​​ 08: ಜಿಲ್ಲೆಯಲ್ಲಿ ಜೀತ ಪದ್ಧತಿ ಇನ್ನೂ ಜೀವಂತ ಇರುವ ಘಟನೆಯೊಂದು ಬೆಳಕಿಗೆ ಬಂದಿದೆ. ಜೀತಕ್ಕಿಟ್ಟುಕೊಂಡು ತೋಟದಲ್ಲಿ ಕೂಡಿಹಾಕಿದ್ದ ನೇಪಾಳ (Nepal) ಮೂಲದ ತಾಯಿ ಮತ್ತು ಇಬ್ಬರು ಮಕ್ಕಳ ರಕ್ಷಣೆ ಮಾಡಿರುವಂತಹ ಘಟನೆ ಹೆಚ್ ಡಿ ಕೋಟೆ ತಾಲ್ಲೂಕಿನ ಕೈಲಾಸಪುರ ಗ್ರಾಮದಲ್ಲಿ ನಡೆದಿದೆ.  ಎಚ್.ಬಿ.ಬಸವರಾಜು ಅವರ ಮಾಹಿತಿ ಮೇರೆಗೆ ಸ್ಥಳಕ್ಕೆ ತಹಶೀಲ್ದಾರ್ ಶ್ರೀನಿವಾಸ್, ಸಿಡಿಪಿಒ ಆಶಾ, ಸಮಾಜ ಕಲ್ಯಾಣ ಇಲಾಖೆ ರಾಮಸ್ವಾಮಿ, ಗಿರಿಜನ ಅಭಿವೃದ್ದಿ ಇಲಾಖೆ ನಾರಾಯಣಸ್ವಾಮಿ ಭೇಟಿ ನೀಡಿ ರೈತ ಈರೇಗೌಡರ ಜಮೀನಿನಲ್ಲಿದ್ದ ಮಹಿಳೆ ಮತ್ತು ಮಕ್ಕಳ ರಕ್ಷಣೆ ಮಾಡಿ ಸಿಡಿಪಿಒ ವಶಕ್ಕೆ ನೀಡಲಾಗಿದೆ.

ಜಮೀನಿನಲ್ಲಿ ಪುಟಾಣಿ ಮಕ್ಕಳೊಟ್ಟಿಗೆ ದನ ಕಾಯುತ್ತಿದ್ದ ನೇಪಾಳ ಮೂಲದ ಮಹಿಳೆ ನಿರ್ಮಲಾ, ಅಧಿಕಾರಿಗಳ ತಂಡ ಕಂಡು ಭಯಭೀತರಾಗಿದ್ದಾರೆ. ಮಧ್ಯವರ್ತಿಯೊಬ್ಬರ ಮೂಲಕ ಪತಿ ಗೋಪಾಲ್ ಇಬ್ಬರು ಮಕ್ಕಳೊಂದಿಗೆ ಈರೇಗೌಡ ಎಂಬುವವರ ಜಮೀನಿನ ತೋಟದ ಮನೆಯಲ್ಲಿ ಒಂದುವರೆ ವರ್ಷದಿಂದ ಕೆಲಸ ಮಾಡುದ್ದರು.

ಇದನ್ನೂ ಓದಿ: ಮುರಿದ ಗುಡಿಸಿಲಿನಲ್ಲಿದೆ ಆ ಅಂಗನವಾಡಿ, ಹೆಗ್ಗಣಗಳು ಅಲ್ಲಲ್ಲಿ ಕೊರೆದು ಹಾಕಿವೆ, ಆದರೂ ಮೈಸೂರು ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ!

ಪತ್ನಿ 200ರೂ, ಪತಿಗೆ 300 ರೂ. ದಿನಕ್ಕೆ ಕೂಲಿ ಆಧಾರದ ಮೇಲೆ ಜಮೀನಿನ ಕೆಲಸಕ್ಕೆ ಸೇರಿಸಿಕೊಂಡಿದ್ದ ಈರೇಗೌಡ, ಬೆಳಗ್ಗೆ ನಾಲ್ಕು ಗಂಟೆಯಿಂದ ರಾತ್ರಿ 8 ಗಂಟೆ ತನಕ ವಿವಿಧ ಕಾಯಕದಲ್ಲಿ ದುಡಿಸಿಕೊಳ್ಳುತ್ತಿದ್ದ ಎಂಬ ಆರೋಪ ಮಾಡಲಾಗಿದೆ. ಹೆಚ್ಚಿನ ಸಮಯದ ಕೆಲಸ ವಿರೋಧಿಸಿದ್ದಕ್ಕೆ ನಾಲ್ಕು ತಿಂಗಳಿಂದ ದಂಪತಿಯನ್ನು ಬೇರ್ಪಡಿಸಿ ಪತಿಯನ್ನು ಕೊಡಗಿನಲ್ಲಿರಿಸಿದ್ದ. ಪತಿ, ಪತ್ನಿ ಭೇಟಿ ಮತ್ತು ಮೊಬೈಲ್ ಮಾತುಕತೆಗೂ ಅವಕಾಶ ಕಲ್ಪಿಸದ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಆಯುಷ್ಮಾನ್‌ ಭಾರತ್ ಯೋಜನೆಯಡಿ ಪ್ರತಿದಿನ 50ಕ್ಕೂ ಅಧಿಕ ಜನರಿಗೆ ಹೃದಯ ಚಿಕಿತ್ಸೆ

ಇಡೀ ದಿನ ಕೂಲಿ ಕೆಲಸ ಮಾಡುವ ಮಹಿಳೆಗೆ ಹಲವು ಭಾರಿ ಹಲ್ಲೆ ನಡೆಸಿ ಊಟಕ್ಕೂ ನೀಡದೆ ಉಪವಾಸ ಇರಿಸಲಾಗಿದೆ. ಅಲ್ಲದೇ ಪುಟಾಣಿ ಮಕ್ಕಳಿಂದಲೂ ದುಡಿಸಿಕೊಳ್ಳುತ್ತಿದ್ದ ಎಂದು ಆರೋಪಿಸಲಾಗಿದೆ. ಸ್ವಗ್ರಾಮಕ್ಕೆ ತೆರಳಲು ಬಿಡದೆ ಬಲವಂತವಾಗಿ ಕೆಲಸ ಮಾಡಿಸುತ್ತಿದ್ದ. ಸದ್ಯ ವಾಸ ಇದ್ದ ತೋಟದ ಮನೆಯಿಂದ ಮಹಿಳೆ ಮತ್ತು ಇಬ್ಬರು ಮಕ್ಕಳ ರಕ್ಷಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!