AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day 2022 Parade: ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್​ನಲ್ಲಿ ಎನ್​ಸಿಸಿ ನೇತೃತ್ವ ವಹಿಸಿದ ಮೈಸೂರು ವಿದ್ಯಾರ್ಥಿನಿ

ಮೈಸೂರಿನಿಂದ ಒಟ್ಟು 19 ಕೆಡೆಟ್​ಗಳಲ್ಲಿ 10 ಯುವಕರು ಮತ್ತು 9 ಯುವತಿಯರು ಕರ್ನಾಟಕ ಮತ್ತು ಗೋವಾ ಎನ್​ಸಿಸಿ ಡೈರೆಕ್ಟೊರೇಟ್ ಪಡೆಯನ್ನು ಪ್ರತಿನಿಧಿಸಿದ್ದಾರೆ. ದೆಹಲಿಯಲ್ಲಿ ಪ್ರತಿವರ್ಷ ಗಣರಾಜ್ಯೋತ್ಸವ ಕ್ಯಾಂಪ್ಗಾಗಿ ಭಾರತದ 17 ಡೈರೆಕ್ಟೊರೇಟ್​ಗಳಿಂದ ಕೆಡೆಟ್​ಗಳನ್ನ ಆಯ್ಕೆ ಮಾಡಲಾಗುತ್ತದೆ.

Republic Day 2022 Parade: ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್​ನಲ್ಲಿ ಎನ್​ಸಿಸಿ ನೇತೃತ್ವ ವಹಿಸಿದ ಮೈಸೂರು ವಿದ್ಯಾರ್ಥಿನಿ
ಎನ್​ಸಿಸಿ ಸೀನಿಯರ್ ಅಂಡರ್​ ಆಫೀಸರ್ ಪ್ರಮೀಳಾ ಕುನಾವರ್
TV9 Web
| Edited By: |

Updated on:Jan 26, 2022 | 2:46 PM

Share

ಮೈಸೂರು: ದೆಹಲಿಯಲ್ಲಿ ಇಂದು (ಜ.26) ನಡೆದ 73ನೇ ಗಣರಾಜ್ಯೋತ್ಸವದ (Republic Day) ಐತಿಹಾಸಿಕ ಪರೇಡ್​ನಲ್ಲಿ (Parade) ಭಾಗವಹಿಸಿದ್ದ ಎನ್​ಸಿಸಿ (NCC) ತಂಡವನ್ನು ಮೈಸೂರಿನ ವಿದ್ಯಾರ್ಥಿನಿ ಮುನ್ನಡೆಸಿದ್ದಾರೆ. ಮೈಸೂರಿನ ಮಹಾರಾಣಿ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ ಪ್ರಮೀಳಾ ಕುವರ್ ನೇತೃತ್ವದ ಎನ್​ಸಿಸಿ ತಂಡ ಪಥಸಂಚಲನದಲ್ಲಿ ಭಾಗಿಯಾಗಿದೆ. ಮೈಸೂರಿನ ವಿವಿ ಮೊಹಲ್ಲಾದ ನಿವಾಸಿಯಾಗಿರುವ ಪ್ರತಾಪ್ ಸಿಂಗ್ ಮತ್ತು ಪುಷ್ಪಾ ಕುವರ್ ದಂಪತಿಯ ಪುತ್ರಿಯಾಗಿರುವ ಪ್ರಮಿಳಾ, ಎನ್​ಸಿಸಿ ಸೀನಿಯರ್ ಅಂಡರ್ ಆಫೀಸರ್ ಆಗಿದ್ದಾರೆ.

ಪ್ರಮೀಳಾ ಅವರ ತಂದೆ ನಗರದ ಕಾಳಿದಾಸ ರಸ್ತೆಯಲ್ಲಿ ಟೀ ಅಂಗಡಿ ಇಟ್ಟುಕೊಂಡು ಮಗಳನ್ನು ಓದಿಸುತ್ತಿದ್ದಾರೆ. 2018 ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಎನ್​ಸಿಸಿ ತಂಡದ ನೇತೃತ್ವ ವಹಿಸಿಕೊಂಡು ಯಶಸ್ವಿಯಾಗಿ ಮುನ್ನಡೆಸಿದ್ದ ಪ್ರಮೀಳಾ ಅವರಿಗೆ 2022ರ ಗಣರಾಜ್ಯೋತ್ಸವ ಪರೇಡ್​ನಲ್ಲಿ ಎನ್​ಸಿಸಿ ತಂಡದ ನೇತೃತ್ವ ವಹಿಸಿರುವುದು ಪೋಷಕರಲ್ಲಿ ಸಂತಸವನ್ನುಂಟು ಮಾಡಿದೆ.

ಮೈಸೂರಿನಿಂದ ಒಟ್ಟು 19 ಕೆಡೆಟ್​ಗಳಲ್ಲಿ 10 ಯುವಕರು ಮತ್ತು 9 ಯುವತಿಯರು ಕರ್ನಾಟಕ ಮತ್ತು ಗೋವಾ ಎನ್​ಸಿಸಿ ಡೈರೆಕ್ಟೊರೇಟ್ ಪಡೆಯನ್ನು ಪ್ರತಿನಿಧಿಸಿದ್ದಾರೆ. ದೆಹಲಿಯಲ್ಲಿ ಪ್ರತಿವರ್ಷ ಗಣರಾಜ್ಯೋತ್ಸವ ಕ್ಯಾಂಪ್ಗಾಗಿ ಭಾರತದ 17 ಡೈರೆಕ್ಟೊರೇಟ್​ಗಳಿಂದ ಕೆಡೆಟ್​ಗಳನ್ನ ಆಯ್ಕೆ ಮಾಡಲಾಗುತ್ತದೆ. ಕ್ಯಾಂಪ್​ನಲ್ಲಿ ಇವರು ವ್ಯಾಯಾಮ, ಸಾಂಸ್ಕೃತಿಕ ಚಟುವಟಿಕೆಗಳು, ಫ್ಯಾಗ್ ಏರಿಯಾ ಮತ್ತು ಬೆಸ್ಟ್ ಕೆಡೆಟ್ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾರೆ.

ಕೊರೊನಾ ಪಿಡುಗಿನಿಂದಾಗಿ ಕಳೆದ ವರ್ಷ ಮತ್ತು ಈ ವರ್ಷ ಎನ್​ಸಿಸಿ ಕ್ಯಾಂಪ್​ಗೆ ಆಯ್ಕೆ ಮಾಡುವ ಕೆಡೆಟ್ಗಳ ಸಂಖ್ಯೆಯನ್ನು ಅರ್ಧದಷ್ಟು ಕಡಿಮೆ ಮಾಡಲಾಗಿದೆ. ಪ್ರಸಕ್ತ ವರ್ಷ ಕರ್ನಾಟಕ ಮತ್ತು ಗೋವಾ ಡೈರೆಕ್ಟೋರೇಟ್ ನಿಂದ ಒಟ್ಟು 54 ಕೆಡೆಟ್​ಗಳನ್ನ ಆಯ್ಕೆ ಮಾಡಲಾಗಿದ್ದು, 2 ತಿಂಗಳ ಹಿಂದೆಯೇ ದೆಹಲಿ ತಲುಪಿದ್ದರು.

NSS

ಪ್ರಮೀಳಾ ಕುವರ್

ಭಾರತದ ಹುತಾತ್ಮ ಯೋಧರಿಗೆ ಮೋದಿ ನಮನ: ರಾಜ್‌ಪಥ್‌ನಲ್ಲಿ ಬೆಳಿಗ್ಗೆ 10:30 ಕ್ಕೆ ಮೆರವಣಿಗೆ ಪ್ರಾರಂಭವಾಯಿತು, ಉತ್ತಮ ಗೋಚರತೆಗಾಗಿ ಸಾಮಾನ್ಯಕ್ಕಿಂತ ಅರ್ಧ-ಗಂಟೆ ತಡವಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಭಾರತದ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಗೌರವ ವಂದನೆಯೊಂದಿಗೆ ಮೆರವಣಿಗೆ ಆರಂಭವಾಯಿತು. ಪರಮವೀರ ಚಕ್ರ ಮತ್ತು ಅಶೋಕ ಚಕ್ರ ಸೇರಿದಂತೆ ದೇಶದ ಅತ್ಯುನ್ನತ ಶೌರ್ಯ ಪ್ರಶಸ್ತಿಗಳ ವಿಜೇತರು ತಂಡವನ್ನು ಮುನ್ನಡೆಸಿದರು. ಪರೇಡ್‌ನಲ್ಲಿ ಭಾರತೀಯ ಸೇನೆಯಿಂದ ಆರು ಕವಾಯತು ತುಕಡಿಗಳು, 96 ಯುವ ನಾವಿಕರು ಮತ್ತು ನೌಕಾ ತುಕಡಿಯ ನಾಲ್ವರು ಅಧಿಕಾರಿಗಳು ಮತ್ತು 96 ಏರ್‌ಮೆನ್‌ಗಳು ಮತ್ತು ವಾಯುಪಡೆಯ ನಾಲ್ವರು ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಇದನ್ನೂ ಓದಿ

ಸಕ್ಕರೆ ಕಾಯಿಲೆ ಲಕ್ಷಣಗಳೇನು? ಆರೋಗ್ಯ ಕಾಪಾಡುವುದು ಹೇಗೆ? ಡಯಾಬಿಟೀಸ್ ಇರುವವರಿಗೆ ವೈದ್ಯರ ಸಲಹೆಗಳು

ಹಳದಿಯಾದ ಹಲ್ಲುಗಳನ್ನು ಬಿಳಿಯಾಗಿಸುವುದು ಹೇಗೆ? ಇಲ್ಲಿದೆ ಮನೆಮದ್ದು

Published On - 1:16 pm, Wed, 26 January 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ