ಮೈಸೂರು; ಜನರ ನಿದ್ದೆ ಕೆಡಿಸಿದ್ದ ಹುಲಿ ಕೊನೆಗೂ ಬೋನಿಗೆ; ಮತ್ತೆ ಕಾಡಿಗೆ ಬಿಡಲು ಅರಣ್ಯ ಇಲಾಖೆ ನಿರ್ಧಾರ.

ನಿನ್ನೆಯಷ್ಟೇ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಬನ್ನೂರು ಪಟ್ಟಣದ ಸೇತುವೆ ಬಳಿ ತೋಟಗಾರಿಕೆ ಇಲಾಖೆಯ ಸಂಶೋಧನಾ ಕೇಂದ್ರದ ಬಳಿಯಿರುವ ಕುಮಾರ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಹುಲಿ ಪ್ರತ್ಯಕ್ಷವಾಗಿತ್ತು. ಇದೀಗ ಸರಗೂರು ತಾಲೂಕಿನ ಚಿಕ್ಕನಹಳ್ಳಿ ಅರಣ್ಯ ಬಳಿಯ ಜಮೀನೊಂದರಲ್ಲಿ ಇರಿಸಲಾಗಿದ್ದ ಬೋನಿಗೆ ಹುಲಿ ಬಿದ್ದಿದ್ದು, ಅದಕ್ಕೆ ರೇಡಿಯೋ ಕಾಲರ್ ಅಳವಡಿಕೆ ಮಾಡಿ ಹುಲಿಯನ್ನು ಮತ್ತೆ ಕಾಡಿಗೆ ಬಿಡಲು ನಿರ್ಧರಿಸಲಾಗಿದೆ.

ಮೈಸೂರು; ಜನರ ನಿದ್ದೆ ಕೆಡಿಸಿದ್ದ ಹುಲಿ ಕೊನೆಗೂ ಬೋನಿಗೆ; ಮತ್ತೆ ಕಾಡಿಗೆ ಬಿಡಲು ಅರಣ್ಯ ಇಲಾಖೆ ನಿರ್ಧಾರ.
ಮೈಸೂರು ಜಿಲ್ಲೆಯಲ್ಲಿ ಬೋನಿಗೆ ಬಿದ್ದ ಹುಲಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Feb 15, 2024 | 3:13 PM

ಮೈಸೂರು, ಫೆ.15: ಜಿಲ್ಲೆಯ ಜನರ ನಿದ್ದೆಗೆಡಿಸಿದ್ದ ಹುಲಿ(Tiger)ಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಸರಗೂರು ತಾಲೂಕಿನ ಚಿಕ್ಕನಹಳ್ಳಿ ಅರಣ್ಯ ಬಳಿಯ ಜಮೀನೊಂದರಲ್ಲಿ ಇರಿಸಲಾಗಿದ್ದ ಬೋನಿಗೆ ಹುಲಿ ಬಿದ್ದಿದೆ. ಮೈಸೂರು ತಾಲೂಕಿನ ಚಿಕ್ಕಕಾನ್ಯ ಬಳಿ ಹುಲಿ ಕಾಣಿಸಿಕೊಂಡು ಆತಂಕ ಸೃಷ್ಟಿ ಮಾಡಿತ್ತು. ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಿದ್ದ ಹಿನ್ನಲೆ ಹುಲಿ ಸೆರೆಗೆ ಹಲವು ಕಡೆ ಬೋನನ್ನು ಇರಿಸಲಾಗಿತ್ತು. ಇದೀಗ ಐದು ವರ್ಷದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ.

ಹುಲಿಗೆ ರೇಡಿಯೋ ಕಾಲರ್ ಅಳವಡಿಸಿ ಕಾಡಿಗೆ ಬಿಡಲು ನಿರ್ಧಾರ

ಸಾಮಾನ್ಯವಾಗಿ ಹುಲಿಗಳು ಬೋನಿಗೆ ಬೀಳುವುದು ಅಪರೂಪದಲ್ಲೆ ಅಪರೂಪ ಪ್ರಕರಣವಾಗಿದೆ. ಈ ಸೆರೆ ಸಿಕ್ಕ ಹುಲಿಯನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದು ಪರಿಶೀಲನೆ ನಡೆಸಲಾಗುತ್ತಿದ್ದು, ಸದ್ಯ ಸ್ಥಳಕ್ಕೆ ಮೈಸೂರು ವೃತ್ತದ ಸಿ.ಎಫ್ ಡಾ. ಮಾಲ ತಿಪ್ರಿಯಾ, ಡಿ.ಸಿ.ಎಫ್ ಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೀಗ ಹುಲಿ ಆರೋಗ್ಯವಾಗಿರುವುದರಿಂದ ಮತ್ತು ಹುಲಿಯ ವಯಸ್ಸು ಚಿಕ್ಕದಾಗಿದ್ದರಿಂದ ಹುಲಿಯ ಚಲನವಲನ ಗಮನಿಸುವ ಸಲುವಾಗಿ ರೇಡಿಯೋ ಕಾಲರ್ ಅಳವಡಿಕೆ ಮಾಡಿ ಹುಲಿಯನ್ನು ಮತ್ತೆ ಕಾಡಿಗೆ ಬಿಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ:ಮೈಸೂರು ಜಿಲ್ಲೆಯಲ್ಲಿ ಹುಲಿ ಪ್ರತ್ಯಕ್ಷ: ಅರಣ್ಯ ಇಲಾಖೆ ಸಿಬ್ಬಂದಿ‌ಗಳಿಂದ ಕೂಂಬಿಂಗ್ ಕಾರ್ಯಾಚರಣೆ ಆರಂಭ

ಇನ್ನು ನಿನ್ನೆಯಷ್ಟೇ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಬನ್ನೂರು ಪಟ್ಟಣದ ಸೇತುವೆ ಬಳಿ ತೋಟಗಾರಿಕೆ ಇಲಾಖೆಯ ಸಂಶೋಧನಾ ಕೇಂದ್ರದ ಬಳಿಯಿರುವ ಕುಮಾರ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಹುಲಿ ಪ್ರತ್ಯಕ್ಷವಾಗಿತ್ತು. ಜೊತೆಗೆ ಹುಲಿಯನ್ನು ಕಣ್ಣಾರೆ ಕಂಡ ದಿವಾಕರ್ ಎಂಬುವವರು ಛಾಯಾಚಿತ್ರ ತೆಗೆದು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ರವಾನೆ ಮಾಡಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಟಿ ನರಸೀಪುರ ವಲಯದಲ್ಲಿ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Follow Us