AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರುಪಾಲಾಗಿದ್ದ ಮೂವರು ಮಾಲಾಧಾರಿಗಳಲ್ಲಿ ಓರ್ವನ ರಕ್ಷಣೆ, ಮತ್ತೋರ್ವನ ಮೃತದೇಹ ಪತ್ತೆ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಪಿಲಾ ನದಿಯಲ್ಲಿ ಮುಳುಗಿದ್ದ ಮೂವರು ಅಯ್ಯಪ್ಪ ಮಾಲಾಧಾರಿಗಳಲ್ಲಿ ಓರ್ವನನ್ನು ರಕ್ಷಣೆ ಮಾಡಿದ್ದು, ಮತ್ತೋರ್ವನ ಮೃತ ದೇಹ ಪತ್ತೆಯಾಗಿದೆ. ಇನ್ನು ಮಗದೋರ್ವನಿಗಾಗಿ ಹುಡುಕಾಟ ಮುಂದುವರೆದಿದೆ.

ನೀರುಪಾಲಾಗಿದ್ದ ಮೂವರು ಮಾಲಾಧಾರಿಗಳಲ್ಲಿ ಓರ್ವನ ರಕ್ಷಣೆ, ಮತ್ತೋರ್ವನ ಮೃತದೇಹ ಪತ್ತೆ
ಶೋಧಕಾರ್ಯ
ದಿಲೀಪ್​, ಚೌಡಹಳ್ಳಿ
| Edited By: |

Updated on:Jan 19, 2024 | 12:30 PM

Share

ಮೈಸೂರು, ಜನವರಿ 19: ಕಪಿಲಾ ನದಿಯಲ್ಲಿ (Kapila River) ಮುಳುಗಿದ್ದ ಮೂವರು ಅಯ್ಯಪ್ಪ (Ayyappa) ಮಾಲಾಧಾರಿಗಳಲ್ಲಿ ಓರ್ವನನ್ನು ರಕ್ಷಣೆ ಮಾಡಿದ್ದು, ಮತ್ತೋರ್ವನ ಮೃತ ದೇಹ ಪತ್ತೆಯಾಗಿದೆ. ಇನ್ನು ಮಗದೋರ್ವನಿಗಾಗಿ ಹುಡುಕಾಟ ಮುಂದುವರೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗವಿರಂಗ, ರಾಕೇಶ್ (19), ಅಪ್ಪು (16) ನೀರು ಪಾಲಾಗಿದ್ದರು. ಇದೀಗ ಗವಿರಂಗ ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಬಾಲಕ ಅಪ್ಪು ಮೃತ ದೇಹ ಪತ್ತೆಯಾಗಿದೆ. ಇವರನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಂಟು ಜನ ಅಯ್ಯಪ್ಪ ಮಾಲಾಧಾರಿಗಳು ಕಳೆದ ಮೂರು ದಿನಗಳ ಹಿಂದೆ ಶಬರಿ ಮಲೆಗೆ ತೆರಳಿದ್ದರು. ಅಯ್ಯಪ್ಪನ ದರ್ಶನ ಮುಗಿಸಿಕೊಂಡು ಮಾಲಧಾರಿಗಳು ನಂಜನಗೂಡಿಗೆ ಬಂದಿದ್ದಾರೆ. ಇಲ್ಲೇ ಮಾಲೆ ತೆಗೆದಯಲು ನಿಶ್ಚಯಿಸಿದ್ದರು. ಹೀಗಾಗಿ ಐವರು ಕಪಿಲಾ ನದಿಯ ಹೆಜ್ಜಿಗೆ ಸೇತುವೆ ಬಳಿ ಸ್ನಾನಕ್ಕೆ ಹೋಗಿದ್ದರು. ಸ್ನಾನ ಮಾಡುವಾಗ ಮೂವರು ನೀರು ಪಾಲಾಗಿದ್ದಾರೆ. ಇಬ್ಬರು ಈಜಿ ದಡ ಸೇರಿದ್ದಾರೆ. ಬಳಿಕ ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ.

ಪದವಿ ವಿದ್ಯಾರ್ಥಿನಿ‌ ನೇಣು ಬಿಗಿದುಕೊಂಡು ಆತ್ಮಹತ್ಯೆ

ಶಿವಮೊಗ್ಗ: ಪದವಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  ತೀರ್ಥಹಳ್ಳಿ ತಾಲೂಕಿನ ಬಿಳುಕೊಪ್ಪ ಗ್ರಾಮದಲ್ಲಿ ನಡೆದಿದೆ. ಅಧೀಕ್ಷಾ (20) ನೇಣಿಗೆ ಶರಣಾದ ವಿದ್ಯಾರ್ಥಿನಿ. ನಿನ್ನೆ (ಜ.17)ರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತೀರ್ಥಹಳ್ಳಿ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ತೀರ್ಥಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:15 pm, Fri, 19 January 24

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!