AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರುಪಾಲಾಗಿದ್ದ ಮೂವರು ಮಾಲಾಧಾರಿಗಳಲ್ಲಿ ಓರ್ವನ ರಕ್ಷಣೆ, ಮತ್ತೋರ್ವನ ಮೃತದೇಹ ಪತ್ತೆ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಪಿಲಾ ನದಿಯಲ್ಲಿ ಮುಳುಗಿದ್ದ ಮೂವರು ಅಯ್ಯಪ್ಪ ಮಾಲಾಧಾರಿಗಳಲ್ಲಿ ಓರ್ವನನ್ನು ರಕ್ಷಣೆ ಮಾಡಿದ್ದು, ಮತ್ತೋರ್ವನ ಮೃತ ದೇಹ ಪತ್ತೆಯಾಗಿದೆ. ಇನ್ನು ಮಗದೋರ್ವನಿಗಾಗಿ ಹುಡುಕಾಟ ಮುಂದುವರೆದಿದೆ.

ನೀರುಪಾಲಾಗಿದ್ದ ಮೂವರು ಮಾಲಾಧಾರಿಗಳಲ್ಲಿ ಓರ್ವನ ರಕ್ಷಣೆ, ಮತ್ತೋರ್ವನ ಮೃತದೇಹ ಪತ್ತೆ
ಶೋಧಕಾರ್ಯ
ದಿಲೀಪ್​, ಚೌಡಹಳ್ಳಿ
| Edited By: |

Updated on:Jan 19, 2024 | 12:30 PM

Share

ಮೈಸೂರು, ಜನವರಿ 19: ಕಪಿಲಾ ನದಿಯಲ್ಲಿ (Kapila River) ಮುಳುಗಿದ್ದ ಮೂವರು ಅಯ್ಯಪ್ಪ (Ayyappa) ಮಾಲಾಧಾರಿಗಳಲ್ಲಿ ಓರ್ವನನ್ನು ರಕ್ಷಣೆ ಮಾಡಿದ್ದು, ಮತ್ತೋರ್ವನ ಮೃತ ದೇಹ ಪತ್ತೆಯಾಗಿದೆ. ಇನ್ನು ಮಗದೋರ್ವನಿಗಾಗಿ ಹುಡುಕಾಟ ಮುಂದುವರೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗವಿರಂಗ, ರಾಕೇಶ್ (19), ಅಪ್ಪು (16) ನೀರು ಪಾಲಾಗಿದ್ದರು. ಇದೀಗ ಗವಿರಂಗ ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಬಾಲಕ ಅಪ್ಪು ಮೃತ ದೇಹ ಪತ್ತೆಯಾಗಿದೆ. ಇವರನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಂಟು ಜನ ಅಯ್ಯಪ್ಪ ಮಾಲಾಧಾರಿಗಳು ಕಳೆದ ಮೂರು ದಿನಗಳ ಹಿಂದೆ ಶಬರಿ ಮಲೆಗೆ ತೆರಳಿದ್ದರು. ಅಯ್ಯಪ್ಪನ ದರ್ಶನ ಮುಗಿಸಿಕೊಂಡು ಮಾಲಧಾರಿಗಳು ನಂಜನಗೂಡಿಗೆ ಬಂದಿದ್ದಾರೆ. ಇಲ್ಲೇ ಮಾಲೆ ತೆಗೆದಯಲು ನಿಶ್ಚಯಿಸಿದ್ದರು. ಹೀಗಾಗಿ ಐವರು ಕಪಿಲಾ ನದಿಯ ಹೆಜ್ಜಿಗೆ ಸೇತುವೆ ಬಳಿ ಸ್ನಾನಕ್ಕೆ ಹೋಗಿದ್ದರು. ಸ್ನಾನ ಮಾಡುವಾಗ ಮೂವರು ನೀರು ಪಾಲಾಗಿದ್ದಾರೆ. ಇಬ್ಬರು ಈಜಿ ದಡ ಸೇರಿದ್ದಾರೆ. ಬಳಿಕ ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ.

ಪದವಿ ವಿದ್ಯಾರ್ಥಿನಿ‌ ನೇಣು ಬಿಗಿದುಕೊಂಡು ಆತ್ಮಹತ್ಯೆ

ಶಿವಮೊಗ್ಗ: ಪದವಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  ತೀರ್ಥಹಳ್ಳಿ ತಾಲೂಕಿನ ಬಿಳುಕೊಪ್ಪ ಗ್ರಾಮದಲ್ಲಿ ನಡೆದಿದೆ. ಅಧೀಕ್ಷಾ (20) ನೇಣಿಗೆ ಶರಣಾದ ವಿದ್ಯಾರ್ಥಿನಿ. ನಿನ್ನೆ (ಜ.17)ರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತೀರ್ಥಹಳ್ಳಿ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ತೀರ್ಥಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:15 pm, Fri, 19 January 24

Follow Us
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ