AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ನುಗು ಡ್ಯಾಂನ ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವು

ನುಗು ಡ್ಯಾಂನ ಬಲದಂಡೆ ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ‌.ಕೋಟೆ ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೈಸೂರು: ನುಗು ಡ್ಯಾಂನ ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವು
ಶೋಧಕಾರ್ಯದಲ್ಲಿ ತೊಡಗಿರುವ ಅಗ್ನಿಶಾಮಕ ಸಿಬ್ಬಂದಿ
ದಿಲೀಪ್​, ಚೌಡಹಳ್ಳಿ
| Updated By: ವಿವೇಕ ಬಿರಾದಾರ|

Updated on:Oct 01, 2023 | 9:19 AM

Share

ಮೈಸೂರು ಅ.01: ನುಗು ಡ್ಯಾಂನ ಬಲದಂಡೆ ನಾಲೆಗೆ (Canal) ಬಿದ್ದು ಒಂದೇ ಕುಟುಂಬದ (Family) ಮೂವರು ಮೃತಪಟ್ಟಿರುವ ಘಟನೆ ಹೆಚ್.ಡಿ‌.ಕೋಟೆ (HD Kote) ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪ್ಪ ಮಹಮ್ಮದ್ ಕಪೀಲ್ (42), ಅಮ್ಮ ಶಾವರ ಭಾನು (35), ಶಾಹೀರಾ ಭಾನು (20) ಮೃತ ದುರ್ದೈವಿಗಳು. ಅಜ್ಜಿಯ ತಿಥಿ ಕಾರ್ಯ ಮುಗಿಸಿ ಪುತ್ರಿ ಶಾಹೀರಾ ಭಾನು ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋಗಿದ್ದರು. ಈ ವೇಳೆ ಕಾಲು ಜಾರಿ ನಾಲೆಯಲ್ಲಿ ಬಿದ್ದಿದ್ದಾರೆ.

ಇದನ್ನು ಕಂಡ ರಕ್ಷಣೆಗೆ ಹೋದ ಅಪ್ಪ, ಅಮ್ಮ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಭೇಟಿ ನೀಡಿ ಮೂವರ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೈಕ್​, ಆಟೋ ಮತ್ತು ಲಾರಿ ಮಧ್ಯೆ ಅಪಘಾತ; ಕಾಲು ಕಳೆದುಕೊಂಡ ಯುವತಿ

ಮೈಮೇಲೆ ಕಂಬ ಬಿದ್ದು ರೈತ ಸಾವು

ಕಂಬ ಬಿದ್ದ ಪರಿಣಾಮ ರೈತ ಮೃತಪಟ್ಟಿರುವ ಘಟನೆ  ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕು ಬಾಡಗ ಗ್ರಾಮದಲ್ಲಿ ನಡೆದಿದೆ. ಬಾಡಗ ಗ್ರಾಮದ ಸಿದ್ದಪ್ಪ (46) ಮೃತ ರೈತ. ಬಾಡಗ ಗ್ರಾಮದ ಶಿಕ್ಷಕಿ ಶಾರದ ಎಂಬುವರ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಂಬ ಮುರಿದು ರಸ್ತೆಯಲ್ಲಿ ಹೋಗುತ್ತಿದ್ದ ಸಿದ್ದಪ್ಪ ಅವರ ಮೇಲೆ ಬಿದ್ದಿದೆ.

ಇದರಿಂದ ಗಾಯಗೊಂಡ ಸಿದ್ದಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಿದ್ದಪ್ಪ ಮೃತಪಟ್ಟಿದ್ದಾನೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:40 am, Sun, 1 October 23