AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಸಾರ್ವಜನಿಕರು ಹುಲಿ ಕಾಣಿಸಿದರೆ ಏನು ಮಾಡಬೇಕು? ಅರಣ್ಯ ಇಲಾಖೆ ಸಲಹೆ ಇಲ್ಲಿದೆ

ಕಳೆದ ಹಲವು ದಿನಗಳಿಂದ ಮೈಸೂರು ಜಿಲ್ಲೆಯಲ್ಲಿ ಮಾನವ ಮತ್ತು ಪ್ರಾಣಿ ನಡುವೆ ಸಂಘರ್ಷ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ಹಾಗೂ ಅರಣ್ಯ ಸಿಬ್ಬಂದಿಗಳು ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಿದ್ದಾರೆ. ದಡದಹಳ್ಳಿಯ ತೋಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನ ಸಾರ್ವಜನಿಕರು ಹುಲಿ ಕಾಣಿಸಿದರೆ ಏನು ಮಾಡಬೇಕು? ಅರಣ್ಯ ಇಲಾಖೆ ಸಲಹೆ ಇಲ್ಲಿದೆ
ಅರಣ್ಯ ಇಲಾಖೆ ಪ್ರಕಟಣೆ, ಹುಲಿ (ಸಾಂದರ್ಭಿಕ ಚಿತ್ರ)
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ|

Updated on:Dec 15, 2023 | 7:44 AM

Share

ಮೈಸೂರು, ಡಿಸೆಂಬರ್​​ 15: ಕಳೆದ ಹಲವು ದಿನಗಳಿಂದ ಮೈಸೂರು (Mysore) ಜಿಲ್ಲೆಯಲ್ಲಿ ಮಾನವ ಮತ್ತು ಪ್ರಾಣಿ ನಡುವೆ ಸಂಘರ್ಷ ನಡೆಯುತ್ತಿದೆ. ಇತ್ತೀಚಿಗೆ ನಂಜನಗೂಡು (Najangudu) ತಾಲೂಕಿನ ಗ್ರಾಮವೊಂದರಲ್ಲಿ ಹುಲಿ (Tiger) ದಾಳಿ ನಡೆಸಿತ್ತು. ಹುಲಿ ದಾಳಿಗೆ ಓರ್ವ ಮಹಿಳೆ ಮೃತಪಟ್ಟಿದ್ದರು. ಇದಾದ ಬೆನ್ನಲ್ಲೇ ಮೈಸೂರು ತಾಲೂಕಿನ ದಡದಹಳ್ಳಿ ಗ್ರಾಮದ ತೋಟವೊಂದರಲ್ಲಿ ಹುಲಿ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ಹಾಗೂ ಅರಣ್ಯ ಸಿಬ್ಬಂದಿಗಳು ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಿದ್ದಾರೆ. ದಡದಹಳ್ಳಿಯ ತೋಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಚಲನವಲನ ಪತ್ತೆಗೆ ಟ್ರ್ಯಾಪ್ ಕ್ಯಾಮರಾ, ನೆಟ್​ವರ್ಕ್ ಕ್ಯಾಮರಾ, ಐಆರ್ ಕ್ಯಾಮರಾ ಅಳವಡಿಸಲಾಗಿದೆ. ಹಾಗೂ ಹುಲಿ ಸೆರೆಗೆ ಬೋನ್​​ ಇಡಲಾಗಿದೆ. ಅಲ್ಲದೆ ಹುಲಿ ಕಾಣಿಸಿಕೊಂಡರೆ ಸಹಾಯವಾಣಿ ಸಂಖ್ಯೆ 1926ಗೆ ಕರೆ ಮಾಡಿ ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಅರಣ್ಯ ಇಲಾಖೆ ಸಿಬ್ಬಂದಿ ಹರಸಾಸಹ, 15 ದಿನವಾದರೂ ಸೆರೆ ಸಿಕ್ಕದ ಹುಲಿ

ಹುಲಿ ಕಾಣಿಸಿಕೊಂಡ ಬಗ್ಗೆ ಯಾರೂ ಸುಳ್ಳು ಸುದ್ದಿ ಹಬ್ಬಿಸಬಾರದು. ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಗೆ ಸಹಕಾರ ನೀಡಬೇಕು ಎಂದು ಮೈಸೂರು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಹುಲಿ ದಾಳಿಗೆ ಓರ್ವ ಮಹಿಳೆ ಸಾವು

ನ.24ರಂದು ಹೆಡಿಯಾಲ ವಲಯ ಅರಣ್ಯ ವ್ಯಾಪ್ತಿಯಲ್ಲಿ ಬಳ್ಳೂರು ಹುಂಡಿ ಬಳಿ ದನ ಮೇಯಿಸಲು ಹೋಗಿದ್ದ ರತ್ನಮ್ಮ (55) ಎಂಬ ಮಹಿಳೆಯ ಮೇಲೆ ಹುಲಿ ದಾಳಿ ನಡೆಸಿ ಆಕೆಯನ್ನು ಕೊಂದು ಹಾಕಿತ್ತು. ಅಲ್ಲದೇ ದೇಹದ ಭಾಗವನ್ನೂ ತಿಂದು ಹಾಕಿತ್ತು. ಮರು ದಿನ ಅದೇ ಗ್ರಾಮದ ಹಸುವೊಂದರ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ನಂತರ ಜನರಲ್ಲಿ ಆತಂಕ ಹೆಚ್ಚಾಗಿ ಅರಣ್ಯ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.

ಪಿರಿಯಾಪಟ್ಟಣದಲ್ಲಿ ರೈತನ ಮೇಲೆ ಚಿರತೆ ದಾಳಿ

ಡಿಸೆಂಬರ್​ 11 ರಂದು ಪರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ರೈತ ರಾಜೇಶ್ ಎಂಬುವರ ಮೇಲೆ ಚಿರತೆ ದಾಳಿ ಮಾಡಿತ್ತು. ರಾಜೇಶ್​ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಚಿರತೆ ದಾಳಿ ನಡೆಸಿತ್ತು. ದಾಳಿಯಲ್ಲಿ ರಾಜೇಶ್​ ಅವರ ಕಿವಿ ಹಾಗೂ ತಲೆ ಭಾಗಕ್ಕೆ ಗಾಯಗಳಾಗಿತ್ತು. ಇವರನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿರತೆ ದಾಳಿಯಿಂದ ಆಕ್ರೋಶಗೊಂಡಿರುವ ಜನರು, ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:44 am, Fri, 15 December 23

ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
ಜನರ ಸಮಸ್ಯೆ ಪರಿಹಾರಕ್ಕೆ ಆ್ಯಪ್​: ವಿನೂತನ ಪ್ರಯತ್ನಕ್ಕೆ ಕೈಹಾಕಿದ ಶಾಸಕ
ಜನರ ಸಮಸ್ಯೆ ಪರಿಹಾರಕ್ಕೆ ಆ್ಯಪ್​: ವಿನೂತನ ಪ್ರಯತ್ನಕ್ಕೆ ಕೈಹಾಕಿದ ಶಾಸಕ
ಭೀಮಾ ನದಿಯಲ್ಲಿ ಭಾರೀ ಪ್ರವಾಹ: 2 ದೇಗುಲಗಳು ಸಂಪೂರ್ಣ‌ ಮುಳುಗಡೆ
ಭೀಮಾ ನದಿಯಲ್ಲಿ ಭಾರೀ ಪ್ರವಾಹ: 2 ದೇಗುಲಗಳು ಸಂಪೂರ್ಣ‌ ಮುಳುಗಡೆ