AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜಾನ್: ಪರೀಕ್ಷೆ ಮುಂದೂಡಿದ ಮೈಸೂರು ವಿವಿ, ರಜೆ ರದ್ದುಪಡಿಸಿದ ಮೃಗಾಲಯ

ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾಲಯವು ಪರೀಕ್ಷೆಗಳನ್ನು ಮುಂದೂಡಿದೆ.

ರಂಜಾನ್: ಪರೀಕ್ಷೆ ಮುಂದೂಡಿದ ಮೈಸೂರು ವಿವಿ, ರಜೆ ರದ್ದುಪಡಿಸಿದ ಮೃಗಾಲಯ
ಮೈಸೂರು ಮೃಗಾಲಯ
TV9 Web
| Edited By: |

Updated on: May 01, 2022 | 11:26 AM

Share

ಮೈಸೂರು: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾಲಯವು ಪರೀಕ್ಷೆಗಳನ್ನು ಮುಂದೂಡಿದೆ. ಮೇ 2ಕ್ಕೆ ನಿಗದಿಯಾಗಿದ್ದ ಪರೀಕ್ಷೆಗಳು ಮೇ 7ರಂದು ನಡೆಯಲಿವೆ ಎಂದು ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರ ಕಚೇರಿಯ ಪ್ರಕಟಣೆಯು ತಿಳಿಸಿದೆ. ಕಾನೂನು ಪದವಿ ಸೇರಿದಂತೆ ಹಲವು ಪರೀಕ್ಷೆಗಳು ಮೇ 2ಕ್ಕೆ ನಿಗದಿಯಾಗಿದ್ದವು. ಸತತ ರಜೆಯ ಹಿನ್ನೆಲೆಯಲ್ಲಿ ಪ್ರವಾಸಿಗರು ಬರಬಹುದು ಎನ್ನುವ ನಿರೀಕ್ಷೆಯಿಂದ ಮೈಸೂರು ಮೃಗಾಲಯವು ವಾಡಿಕೆಯ ಮಂಗಳವಾರದ ರಜೆ ರದ್ದುಪಡಿಸಿದೆ. ರಂಜಾನ್ ಹಬ್ಬ ಮತ್ತು ಬಸವ ಜಯಂತಿಯ ಹಿನ್ನೆಲೆಯಲ್ಲಿ ಈ ಬಾರಿ ಮೃಗಾಲಯವು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆ ತಿಳಿಸಿದೆ. ಪ್ರವಾಸಿಗರ ಅನುಕೂಲಕ್ಕಾಗಿ ಮೃಗಾಲಯ ಮತ್ತು ಕಾರಂಜಿ ಕೆರೆ ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಇನ್ನಷ್ಟು ರಂಜಾನ್ ಬಗೆಗಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೋಮವಾರವೇ ರಂಜಾನ್ ಹಬ್ಬ ಆಚರಣೆಗೆ ನಿರ್ಧಾರ

ಬೆಂಗಳೂರು: ರಂಜಾನ್ ಹಬ್ಬ ಆಚರಣೆಗೆ ಮೂನ್ ಕಮಿಟಿ ತೀರ್ಮಾನಿಸಿದ್ದು, ಸೋಮವಾರವೇ ರಂಜಾನ್ ಹಬ್ಬ ಆಚರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಮಂಗಳವಾರ ಬದಲು ಸೋಮವಾರವೇ ರಂಜಾನ್ ಹಬ್ಬವಿದ್ದು, ಸೋಮವಾರವೇ ರಂಜಾನ್ ಹಬ್ಬದ ಪ್ರಯುಕ್ತ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಕೊರೊನಾ (Coronavirus) ಕಾರಣದಿಂದ ಸರ್ಕಾರ (Government) ಎರಡು ವರ್ಷ ರಂಜಾನ್ ಹಬ್ಬಕ್ಕೆ ಕಠಿಣ ನಿಯಮಗಳನ್ನ ಜಾರಿಗೊಳಿಸಿತ್ತು. ಮಸೀದಿಯಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸಿ ಟಫ್ ರೂಲ್ಸ್ ಜಾರಿಗೊಳಿಸಿತ್ತು. ಈ ಬಾರಿಯಾದರೂ ಯಾವುದೇ ಅಡಚಣೆಯಿಲ್ಲದೆ ಹಬ್ಬವನ್ನು ಆಚರಿಸಬಹುದು ಅಂತ ಯೋಚಿಸುತ್ತಿರುವಾಗ ಮತ್ತೆ ಕೊರೊನಾ ನಾಲ್ಕನೇ ಅಲೆ ಆತಂಕ ಶುರುವಾಗಿದೆ. ರಾಜ್ಯದಲ್ಲಿ ನಿಯಂತ್ರಣಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಈ ವರ್ಷವೂ ರಂಜಾನ್ ಹಬ್ಬಕ್ಕೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆಯಿದೆ.

ರಂಜಾನ್ ವೇಳೆ ಮಸೀದಿಯಲ್ಲಿ ಗುಂಪು ಗುಂಪಾಗಿ ಸಾಕಷ್ಟು ಜನ ಸೇರುವ ಹಿನ್ನೆಲೆ ಕೊರೊನಾ ಸೋಂಕು ಹರಡುವಿಕೆ ಬಗ್ಗೆ ಸರ್ಕಾರಕ್ಕೆ ಆತಂಕ ಮೂಡಿದೆ. ಧಾರ್ಮಿಕ ಕೇಂದ್ರಗಳಿಗೆ ಅನ್ವಯ ಆಗುವಂತೆ ಸರ್ಕಾರ ರೂಲ್ಸ್ ಜಾರಿಗೊಳಿಸಿದರೆ ಮುಸ್ಲಿಂ ಬಾಂಧವರಿಗೆ ಭಾರೀ ನಿರಾಸೆ ಆಗುತ್ತದೆ. ಮೇ 3ರಂದು ನಡೆಯುವ ರಂಜಾನ್ ಹಬ್ಬ ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ಸೋಂಕು ಉಲ್ಬಣಗೊಂಡರೆ ಸರಳವಾಗಿ ಹಬ್ಬ ಆಚರಿಸಲು ಸರ್ಕಾರ ಸೂಚನೆ ನೀಡುವ ಸಾಧ್ಯತೆಯಿದೆ.

ಇದನ್ನೂ ಓದಿ: Eid Ul Fitr 2022 Special: ರಂಜಾನ್ ಹಬ್ಬಕ್ಕೆ ಇಲ್ಲಿದೆ ಬೆಸ್ಟ್ ಮೆನು

ಇದನ್ನೂ ಓದಿ: Ramadan Eid 2022 Decoration Ideas: ರಂಜಾನ್ ಹಬ್ಬಕ್ಕೆ ನಿಮ್ಮ ಮನೆಯನ್ನು ಮತ್ತಷ್ಟು ಸುಂದರ ಹಾಗೂ ಹಬ್ಬದ ಕಳೆ ತರಿಸಲು ಇಲ್ಲಿದೆ ಐಡಿಯಾ

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ