AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀತಿ ಸಂಹಿತೆ ಜಾರಿ ಹಿನ್ನೆಲೆ ಶಸ್ತ್ರಾಸ್ತ್ರ ಬಳಕೆ ನಿಷೇಧ: ವಿನಾಯಿತಿ ನೀಡುವಂತೆ ಮೈಸೂರು ಪೊಲೀಸ್ ಕಮಿಷನರ್​ಗೆ ಪರವಾನಿಗೆದಾರರ ಮನವಿ

ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಶಸ್ತ್ರಾಸ್ತ್ರ, ಆಯುಧ ಮತ್ತು ಮದ್ದುಗುಂಡುಗಳೊಂದಿಗೆ ಸಂಚಾರ ಹಾಗೂ ಅವುಗಳನ್ನು ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಆದರೂ ಶಸ್ತ್ರಾಸ್ತ್ರ ಬಳಸಲು ವಿನಾಯತಿ ನೀಡುವಂತೆ ಮೈಸೂರಿನ ಪರವಾನಿಗೆದಾರರು ಮೈಸೂರು ಪೊಲೀಸ್ ಕಮಿಷನರ್​ ಅವರಿಗೆ ಮನವಿ ಮಾಡಿದ್ದಾರೆ.

ನೀತಿ ಸಂಹಿತೆ ಜಾರಿ ಹಿನ್ನೆಲೆ ಶಸ್ತ್ರಾಸ್ತ್ರ ಬಳಕೆ ನಿಷೇಧ: ವಿನಾಯಿತಿ ನೀಡುವಂತೆ ಮೈಸೂರು ಪೊಲೀಸ್ ಕಮಿಷನರ್​ಗೆ ಪರವಾನಿಗೆದಾರರ ಮನವಿ
ಮೈಸೂರು ಪೊಲೀಸ್ ಕಮಿಷನರ್​ ರಮೇಶ್ ಬಾನೋತ್
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 04, 2023 | 9:31 AM

Share

ಮೈಸೂರು: ಕರ್ನಾಟಕ ಸಾರ್ವತ್ರಿಕ ಚುನಾವಣೆ (Karnataka Assembly Election) ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಶಸ್ತ್ರಾಸ್ತ್ರ, ಆಯುಧ ಮತ್ತು ಮದ್ದುಗುಂಡುಗಳೊಂದಿಗೆ ಸಂಚಾರ ಹಾಗೂ ಅವುಗಳನ್ನು ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಈ ಹಿನ್ನೆಲೆ ಮೈಸೂರಿನಲ್ಲಿ (Mysore) 42 ಜನ ಪರವಾನಿಗೆದಾರರು ಪಿಸ್ತೂಲ್​, ರಿವಾಲ್ವರ್​​​, ಬಂದೂಕನ್ನು ಇಟ್ಟುಕೊಳ್ಳಲು ವಿನಾಯಿತಿ ನೀಡಿ ಎಂದು ಮೈಸೂರು ಪೊಲೀಸ್ ಕಮಿಷನರ್​ (Police Commissioner) ರಮೇಶ್ ಬಾನೋತ್​ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜಕಾರಣಿಗಳು, ಬ್ಯಾಂಕ್ ಮ್ಯಾನೇಜರ್​​, ಉದ್ಯಮಿಗಳು ಆತ್ಮರಕ್ಷಣೆ, ವ್ಯಾಪಾರ ವಹಿವಾಟು ದೃಷ್ಟಿಯಿಂದ ವಿನಾಯಿತಿ ನೀಡಿ ಎಂದು ಮನವಿ ಸಲ್ಲಿಸಿದ್ದಾರೆ. ಮೈಸೂರಿನ ದೇವರಾಜ ವಿಭಾಗದಿಂದ 13, ಕೃಷ್ಣರಾಜ ವಿಭಾಗದಿಂದ 8, ನರಸಿಂಹರಾಜ ವಿಭಾಗದಿಂದ 13, ವಿಜಯನಗರ ವಿಭಾಗದಿಂದ 8 ಜನರು ಸೇರಿ ಒಟ್ಟು 42 ಜನರು ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಮತದಾರರಿಗೆ ಹಂಚಲು ತಂದಿದ್ದ 1.47 ಕೋಟಿ ರೂ. ಮೌಲ್ಯದ ಚಿನ್ನದ ಲೇಪನದ ಆಭರಣಗಳು ಜಪ್ತಿ

ಪರವಾನಗಿ ಪಡೆದ ಬಂದೂಕುಗಳನ್ನು ಜಮಾ ಮಾಡುವಂತೆ ಡಿಸಿ ಯಶವಂತ ಗುರುಕರ್​​​​ ಆದೇಶ

ಕಲಬುರಗಿ: ಪರವಾನಗಿ ಪಡೆದ ಶಸ್ತ್ರಾಸ್ತ್ರ, ಆಯುಧ, ಮದ್ದುಗುಂಡು ಮತ್ತು ಬಂದೂಕುಗಳನ್ನು ಸಂಬಂಧಪಟ್ಟ ಠಾಣೆಗಳಿಗೆ ಒಪ್ಪಿಸುವಂತೆ ಜಿಲ್ಲಾಧಿಕಾರಿ ಯಶವಂತ ಗುರುಕರ್​​​​ ಆದೇಶ ಹೊರಡಿಸಿದ್ದರು. ಅನುಮೋದಿತ ಶೆಡ್ಯೂಲ್ ಬ್ಯಾಂಕ್ ಭದ್ರತಾ ಸಿಬ್ಬಂದಿ ಹೊರತುಪಡಿಸಿ, ಉಳಿದವರು ತಮ್ಮ ಬಂದೂಕುಗಳನ್ನು ಠಾಣೆಗೆ ನೀಡಬೇಕು. ಚುನಾವಣೆ ಮುಗಿದ ನಂತರ ಠಾಣೆಯಲ್ಲಿನ ಶಸ್ತ್ರಾಸ್ತ್ರಗಳನ್ನು ಮರಳಿ ಪಡೆಯಬಹುದು ಎಂದು ಸೂಚನೆ ಹೊರಡಿಸಿದ್ದರು.

ಪರವಾನಿಗೆ ಶಸ್ತ್ರಾಸ್ತ್ರಗಳನ್ನು ಪೊಲೀಸ್​ ಠಾಣೆಗೆ ಒಪ್ಪಿಸುವಂತೆ ಉಡುಪಿ ಡಿಸಿ ಆದೇಶ

ಉಡುಪಿ: ಆತ್ಮ ರಕ್ಷಣೆ ಮತ್ತು ಬೆಳೆ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಅಧಿಕೃತ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ವಿಧದ ಶಸ್ತ್ರಾಸ್ತ್ರಗಳನ್ನು ತಮ್ಮ ವಿಳಾಸ ವ್ಯಾಪ್ತಿಯ ಪೊಲೀಸ್ ಠಾಣೆಗೆ ಒಪ್ಪಿಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದರು.

ಆತ್ಮ ರಕ್ಷಣೆ ಮತ್ತು ಬೆಳೆ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಅಧಿಕೃತ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ವಿಧದ ಶಸ್ತ್ರಾಸ್ತ್ರಗಳನ್ನು ತಮ್ಮ ವಿಳಾಸ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಅಥವಾ ಅಧಿಕೃತವಾಗಿ ಪರವಾನಿಗೆ ಹೊಂದಿರುವ ಡೀಲರ್ ಶಾಪ್‌ಗಳಲ್ಲಿ ಕಡ್ಡಾಯವಾಗಿ ವಿಳಂಬ ಮಾಡದೇ ಠೇವಣಿ ಮಾಡಿ, ರಶೀದಿ ಪಡೆಯಬೇಕು ಎಂದು ಸೂಚಿಸಿದ್ದರು.

ಚುನಾವಣಾ ಫಲಿತಾಂಶ ಘೋಷಣೆಯಾದ ದಿನಾಂಕದಿಂದ ಒಂದು ವಾರದ ನಂತರ ಶಸ್ತ್ರಾಸ್ತ್ರ ಠೇವಣಿ ಪಡೆದ ಠಾಣಾಧಿಕಾರಿಗಳಿಂದ ಅಥವಾ ಡೀಲರ್‌ಗಳಿಂದ ಶಸ್ತ್ರಾಸ್ತ್ರಗಳನ್ನು ಮರು ಪಡೆದುಕೊಳ್ಳಬಹುದು ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:31 am, Tue, 4 April 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು