AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮೃಗಾಲಯದ ಪ್ರಾಣಿಗಳಿಗಾಗಿ ಬಂತು ಶವರ್​: ಅಧಿಕಾರಿಗಳ ಈ ಕ್ರಮಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

ನೀರಿನ ಸ್ಪ್ರಿಂಕ್ಲರ್​ನ ಪ್ರತಿಯೊಂದು ಪ್ರಾಣಿಯ ಬೋನ್ ಬಳಿಯೂ ಅಳವಡಿಸಲಾಗಿದೆ. ಮಧ್ಯಾಹ್ನದ ವೇಳೆ ಈ ಸ್ಪ್ರಿಂಕ್ಲರ್ ಆನ್ ಮಾಡಲಾಗುತ್ತೆ.

ಮೈಸೂರು ಮೃಗಾಲಯದ ಪ್ರಾಣಿಗಳಿಗಾಗಿ ಬಂತು ಶವರ್​: ಅಧಿಕಾರಿಗಳ ಈ ಕ್ರಮಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ
ಆನೆಗಳಿಗಾಗಿ ವಿಶೇಷವಾಗಿ ಸಿದ್ಧಪಡಿಸಿರುವ ಶವರ್
ಪೃಥ್ವಿಶಂಕರ
|

Updated on:Mar 20, 2021 | 11:10 AM

Share

ಮೈಸೂರು: ಬಿಸಿಲ ಬೇಗೆ ದಿನೇ ದಿನೇ ಹೆಚ್ಚುತ್ತಿದೆ. ಬೇಸಿಗೆ ಜನರನ್ನ ಮಾತ್ರವಲ್ಲ ಪ್ರಾಣಿಗಳಿಗೂ ಸಂಕಷ್ಟ ತಂದೊಡ್ಡಿದೆ. ಅದರಲ್ಲೂ ಪಕ್ಷಿಗಳು ಹನಿ ಹನಿ‌ಗೂ ಪರದಾಡುತ್ತಿವೆ. ಆದರೆ ಈ ಬಿರು ಬೇಸಿಗೆಯಲ್ಲೂ ಮೃಗಾಲಯದ ಪ್ರಾಣಿ-ಪಕ್ಷಿಗಳು ಮಾತ್ರ ಕೂಲಾಗಿವೆ. ಪ್ರಾಣಿಗಳಿಗಾಗಿ ಮೈಸೂರು ಮೃಗಾಲಯದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಝೂನ ಪ್ರಾಣಿಗಳಿಗಾಗಿ ಬೇಸಿಗೆ ಹಿನ್ನೆಲೆಯಲ್ಲಿ ಮೃಗಾಲಯದ ಅಧಿಕಾರಿಗಳು ಮಾಡಿರುವ ವ್ಯವಸ್ಥೆ ಅಚ್ಚುಕಟ್ಟಾಗಿದೆ. ಬಿರುಬಿಸಿಲಿಗೆ ಕಂಗಾಲಾಗಿದ್ದ ಮೈಸೂರು ಮೃಗಾಲಯದ ಪ್ರಾಣಿಗಳು ಕೂಲ್ ಕೂಲ್ ಆಗಿವೆ.

ಬೇಸಿಗೆ ಬಂದರೆ ಸಾಕು ಮೂಕ ಪ್ರಾಣಿಗಳ ವೇದನೆ ಹೇಳತೀರದು.. ಇದಕ್ಕೆ ಕಾರಣ ಮೈಸೂರು ಮೃಗಾಲಯದಲ್ಲಿ ಅಳವಡಿಸಿರುವ ನೀರು ಸಿಂಪಡಿಸುವ ಯಂತ್ರಗಳು ಮತ್ತು ಆನೆಗಳಿಗಾಗಿ ವಿಶೇಷವಾಗಿ ಸಿದ್ಧಪಡಿಸಿರುವ ಶವರ್. ಯಾಕಂದ್ರೆ ಬೇಸಿಗೆ ಬಂದರೆ ಸಾಕು ಮೂಕ ಪ್ರಾಣಿಗಳ ವೇದನೆ ಹೇಳತೀರದು. ಇದನ್ನ ಅರಿತುಕೊಂಡಿರುವ ಅಧಿಕಾರಿಗಳು, ಮೃಗಾಲಯದ ಪ್ರಾಣಿಗಳಿಗೆ ಸ್ಪ್ರಿಂಕ್ಲರ್​ನ ಅಳವಡಿಸಿದ್ದಾರೆ. ಈ ಮೂಲಕ ಪ್ರಾಣಿಗಳ ಮೇಲೆ ನೀರಿನ ಸಿಂಚನ ಮಾಡಲಾಗುತ್ತಿದೆ. ಪ್ರಾಣಿಗಳು ಕೂಲಾಗಿರುವಂತೆ ನೋಡಿಕೊಳ್ಳಲಾಗುತ್ತಿದೆ.

ಮಧ್ಯಾಹ್ನದ ವೇಳೆ ಈ ಸ್ಪ್ರಿಂಕ್ಲರ್ ಆನ್ ಮಾಡಲಾಗುತ್ತೆ.. ನೀರಿನ ಸ್ಪ್ರಿಂಕ್ಲರ್​ನ ಪ್ರತಿಯೊಂದು ಪ್ರಾಣಿಯ ಬೋನ್ ಬಳಿಯೂ ಅಳವಡಿಸಲಾಗಿದೆ. ಮಧ್ಯಾಹ್ನದ ವೇಳೆ ಈ ಸ್ಪ್ರಿಂಕ್ಲರ್ ಆನ್ ಮಾಡಲಾಗುತ್ತೆ. ಸ್ಪ್ರಿಂಕ್ಲರ್​ಗಳಿಂದ ಚಿಮ್ಮುವ ನೀರನ್ನು ಝೂನ ಪ್ರಾಣಿಗಳು ಎಂಜಾಯ್ ಮಾಡುತ್ತಿವೆ. ಇದರ ಜೊತೆಗೆ ಬೇಸಿಗೆ ಹಿನ್ನೆಲೆ ಪ್ರಾಣಿಗಳ ಆಹಾರ ಪದ್ಧತಿಲ್ಲೂ ಬದಲಾವಣೆ ಮಾಡಲಾಗಿದೆ. ಸಸ್ಯಹಾರಿ ಪ್ರಾಣಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಹಣ್ಣು ನೀಡಲಾಗುತ್ತಿದೆ.

ಪ್ರವಾಸಿಗರಿಗೂ ತಂಪಾದ ವಾತಾವರಣ ನಿರ್ಮಾಣವಾಗಿದೆ.. ಎಳನೀರು ಸೇರಿದಂತೆ ದ್ರವರೂಪದ ಪದಾರ್ಥಗಳನ್ನ ನೀಡಲಾಗುತ್ತಿದೆ. ಪ್ರಾಣಿಗಳ ಆರೋಗ್ಯದ ದೃಷ್ಟಿಯಿಂದ ಝೂ ಆಡಳಿತ ಮಂಡಳಿ ಈ ಕ್ರಮಕೈಗೊಂಡಿದ್ದು, ಬೇಸಿಗೆ ಅಂತ್ಯವಾಗುವವರೆಗೆ ಈ ರೀತಿ ಪ್ರಾಣಿಗಳಿಗೆ ಕೊಡುವ ಆಹಾರ ಪದ್ಧತಿಯಲ್ಲು ಬದಲಾವಣೆ ಇರುತ್ತದೆ. ಇದರ ಜೊತೆ ಮೃಗಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೂ ತಂಪಾದ ವಾತಾವರಣ ನಿರ್ಮಾಣವಾಗಿದೆ. ಒಟ್ಟಾರೆ, ಪ್ರಾಣಿಗಳಿಗೆ ತಂಪಾದ ವಾತಾವರಣ ನಿರ್ಮಾಣ ಮಾಡಿರುವುದರಿಂದ ಝೂನ ಪ್ರಾಣಿಗಳು ಸಖತ್ ಖುಷಿಯಾಗಿವೆ. ಅಧಿಕಾರಿಗಳ ಈ ಪ್ರಯತ್ನಕ್ಕೆ ಪ್ರವಾಸಿಗರು ಕೂಡ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ:ಮಂಕಾಗಿದ್ದ ಚಿಂಪಾಂಜಿಗಳನ್ನು ಜೂಮ್​​ನಿಂದ ಖುಷಿಪಡಿಸಿದ ಮೃಗಾಲಯ ಸಿಬ್ಬಂದಿ; ದೊಡ್ಡ ಸ್ಕ್ರೀನ್​ನಲ್ಲಿ ಸ್ನೇಹಿತರನ್ನು ನೋಡಿ ಪ್ರಾಣಿಗಳು ಫುಲ್​ ಹ್ಯಾಪಿ

Published On - 7:08 am, Sat, 20 March 21

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ