AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Zoo: ಮಂಗಳವಾರ ರಜೆ ದಿನವೂ ಮೈಸೂರು ಮೃಗಾಲಯ ಓಪನ್​

ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಚಾಮರಾಜೇಂದ್ರ ಮೃಗಾಲಯದ ವಾರದ ರಜೆ ರದ್ದು ಮಾಡಲಾಗಿದೆ. ಹೀಗಾಗಿ ಮೃಗಾಲಯ ಇಂದು (ಡಿ.26) ಸಹ ತೆರೆಯಲಿದೆ. ಹೀಗಾಗಿ ಮೃಗಾಲಯ ಇಂದು (ಡಿ.26) ಸಹ ತೆರೆದಿರಲಿದೆ ಎಂದು ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೇಶಕ ಡಿ ಮಹೇಶ್ ಕುಮಾರ್ ಟಿವಿ9 ಡಿಜಿಟಲ್​ಗೆ ಮಾಹಿತಿ ನೀಡಿದ್ದಾರೆ.

Mysore Zoo: ಮಂಗಳವಾರ ರಜೆ ದಿನವೂ ಮೈಸೂರು ಮೃಗಾಲಯ ಓಪನ್​
ಮೈಸೂರು ಮೃಗಾಲಯ
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ|

Updated on: Dec 26, 2023 | 8:31 AM

Share

ಮೈಸೂರು, ಡಿಸೆಂಬರ್​​ 26: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಚಾಮರಾಜೇಂದ್ರ ಮೃಗಾಲಯದ (Mysore Zoo) ವಾರದ ರಜೆ (Weekly Holiday) ರದ್ದು ಮಾಡಲಾಗಿದೆ. ಹೀಗಾಗಿ ಮೃಗಾಲಯ ಇಂದು (ಡಿ.26) ಸಹ ತೆರೆಯಲಿದೆ. ಪ್ರತಿ ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇರುತ್ತದೆ. ಆದರೆ ಈ ಬಾರಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ವಾರದ ರಜೆ ರದ್ದು ಮಾಡಿ, ಎಂದಿನಂತೆ ಮೃಗಾಲಯ ತೆರೆದಿರಲಿದೆ ಎಂದು ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೇಶಕ ಡಿ ಮಹೇಶ್ ಕುಮಾರ್ ಟಿವಿ9 ಡಿಜಿಟಲ್​ಗೆ ಮಾಹಿತಿ ನೀಡಿದ್ದಾರೆ.

ದಾಖಲೆ ಪ್ರಮಾಣದಲ್ಲಿ ಪ್ರವಾಸಿಗರ ಆಗಮನ

ಸಾಲು ಸಾಲು ರಜೆಯ ಕಾರಣದಿಂದಾಗಿ ಮೃಗಾಲಯಕ್ಕೆ ಶನಿವಾರದಿಂದ ಸೋಮವಾರದವರೆಗೆ ದಾಖಲೆ ಸಂಖ್ಯೆಯಲ್ಲಿ ಅಂದರೆ 1.01 ಲಕ್ಷ ಸಂದರ್ಶಕರು ಭೇಟಿ ನೀಡಿದ್ದರು. ಕಳೆದ ವರ್ಷ ಇದೇ ದಿನಗಳಲ್ಲಿ ಒಟ್ಟು 77,833 ಮಂದಿ ಬಂದಿದ್ದರು.

ಸಂದರ್ಶಕರ ಭೇಟಿ ಅಂಕಿ-ಅಂಶ
2022 2023 ದಿನಾಂಕ
16,682 25,860 ಡಿ.23
26,355 40,761 ಡಿ.24
34,796 35,344 ಡಿ.25
77,833 1,01,96 ಒಟ್ಟು

ಕ್ರಿಸ್‌ಮಸ್‌ ದಿನವಾದ ಸೋಮವಾರ 35,344 ವೀಕ್ಷಕರು ಭೇಟಿ ನೀಡಿದ್ದರು. ಭಾನುವಾರ (ಡಿ.24) ದಾಖಲೆಯ 40,761 ಜನ ಬಂದಿದ್ದರು. 2018ರ ಡಿ.24ರಂದು 40,675 ಸಂದರ್ಶಕರು ಭೇಟಿ ನೀಡಿದ್ದರು ಎಂದು ಮೃಗಾಲಯ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್