AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡಿನಲ್ಲಿ ಅಂಧಕಾಸುರ ಸಂಹಾರ ಆಚರಣೆ: ಮಹಿಷ ರಂಗೋಲಿ ತುಳಿದಿದಕ್ಕೆ FIR ದಾಖಲು

ಮಹಿಷಾಸುರನ‌ ವಿಚಾರವಾಗಿ ನಂಜನಗೂಡಿನಲ್ಲಿ ಮತ್ತೆ ಸಂಘರ್ಷ ಶುರುವಾಗಿದೆ. ನಂಜನಗೂಡಿನಲ್ಲಿ ಅಂಧಕಾಸುರ ಸಂಹಾರ ಆಚರಣೆಯಲ್ಲಿ ಮಹಿಷ ರಂಗೋಲಿ ತುಳಿದಿದಕ್ಕೆ 6 ಮಂದಿ ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ. ಅದೇ ರೀತಿಯಾಗಿ ಅಂಧಕಾಸುರ ಸಂಹಾರ ಆಚರಣೆ ತಡೆದವರ ವಿರುದ್ಧವೂ ಎಫ್​ಐಆರ್ ದಾಖಲು ಮಾಡಲಾಗಿದೆ.

ನಂಜನಗೂಡಿನಲ್ಲಿ ಅಂಧಕಾಸುರ ಸಂಹಾರ ಆಚರಣೆ: ಮಹಿಷ ರಂಗೋಲಿ ತುಳಿದಿದಕ್ಕೆ FIR ದಾಖಲು
ಅಂಧಕಾಸುರ ಸಂಹಾರ ಆಚರಣೆ
Follow us
ದಿಲೀಪ್​, ಚೌಡಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 27, 2023 | 9:29 PM

ಮೈಸೂರು, ಡಿಸೆಂಬರ್​ 27: ಜಿಲ್ಲೆಯ ನಂಜನಗೂಡಿನಲ್ಲಿ ಅಂಧಕಾಸುರ ಸಂಹಾರ ಆಚರಣೆಯಲ್ಲಿ ಮಹಿಷ ರಂಗೋಲಿ ತುಳಿದಿದಕ್ಕೆ 6 ಮಂದಿ ವಿರುದ್ಧ ಎಫ್​ಐಆರ್ (FIR) ದಾಖಲು ಮಾಡಲಾಗಿದೆ. ಮೌಢ್ಯಾಚರಣೆ ಆಚರಿಸಿದ್ದಾರೆಂದು ನಂಜನಗೂಡು ಠಾಣೆಗೆ ಮಾಲೇಶ್ ಎಂಬುವರ ದೂರಿನನ್ವಯ ಕಪಿಲೇಶ್, ಅನಂತ್, ಕಿರಣ್, ರಾಜು, ರವಿ, ಗಿರೀಶ್ ಹಾಗೂ ಇತರರ ಮೇಲೆ ಎಫ್​ಐಆರ್ ದಾಖಲು ಮಾಡಲಾಗಿದೆ.

ಆಚರಣೆ ತಡೆದವರ ವಿರುದ್ಧವೂ ಎಫ್​ಐಆರ್ 

ನಂಜನಗೂಡು ಶ್ರೀಕಂಠೇಶ್ವರ ದೇಗುಲ ಬಳಿ ನಿನ್ನೆ ಮಹಿಷನ ಚಿತ್ರದ ಫ್ಲೆಕ್ಸ್ ಅಳವಡಿಸಿ ರಂಗೋಲಿ ಬಿಡಿಸಿ ಬಳಿಕ ಸಂಹಾರ ಮಾಡಲಾಗಿದೆ. ಮಹಿಷ ಚಿತ್ರ ತುಳಿಯುವ ವೇಳೆ ವಿರೋಧಿಸಿದಾಗ ಹಲ್ಲೆಗೆ ಯತ್ನ ಆರೋಪ ಸಹ ಮಾಡಲಾಗಿದೆ. ಅಂಧಕಾಸುರ ಸಂಹಾರ ಆಚರಣೆ ತಡೆದವರ ವಿರುದ್ಧವೂ ಎಫ್​ಐಆರ್ ಹಾಕಲಾಗಿದೆ.

ಇದನ್ನೂ ಓದಿ: ಅಂದಕಾಸುರ ಸಂಹಾರ: ನಂಜುಂಡೇಶ್ವರ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿರುವ ಆರೋಪ

ದೇಗುಲದ ಇಒ ಜಗದೀಶ್ ದೂರಿನನ್ವಯ ಐಪಿಸಿ ಸೆಕ್ಷನ್ 143, 298, 295/A 149 ಹಾಗೂ 34ರ ಅಡಿ ಬಸವರಾಜು, ಮೆಲ್ಲಹಳ್ಳಿ ನಾರಾಯಣ್, ಅಭಿ ನಾಗಭೂಷಣ್​, ನಟೇಶ್, ಅಭಿ ಪವಾರ್ ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ.

ಸಂಪ್ರದಾಯದ ಆಚರಣೆಗೆ ತಡೆ, ಶ್ರೀಕಂಠೇಶ್ವರ ಉತ್ಸವಮೂರ್ತಿ ಮೇಲೆ ನೀರು ಎರಚಿ, ಭಕ್ತರ ಧಾರ್ಮಿಕ ಭಾವನೆ ಆಚರಣೆಗೆ ಅಡ್ಡಿ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಮಹಿಷಾಸುರ ವಿಚಾರವಾಗಿ ಮತ್ತೆ ಸಂಘರ್ಷ: ದಲಿತ ಸಮಿತಿ, ಭಕ್ತರ ನಡುವೆ ಮಾತಿನ ಚಕಮಕಿ

ತಾಂಡವೇಶ್ವರ ಹಾಗೂ ಪಾರ್ವತಿ ದೇವಿಯ ಉತ್ಸವ ಮೂರ್ತಿಯನ್ನ ರಂಗೋಲಿ ಬಳಿ ತರುವಾಗ ಕಿಡಿಗೇಡಿಗಳು ಬಾಟಲಿನಿಂದ ನೀರನ್ನ ಎರೆಚ್ಚಿದ್ದರು. ಇದರಿಂದ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿ ಪೊಲೀಸರು ಜನರನ್ನ ಜದುರಿಲು ಲಘು ಲಾಠಿ ಪ್ರಹಾರ ನಡೆಸುವ ಮೂಲಕ ಜನರನ್ನ ಸ್ಥಳದಿಂದ ಚದುರಿಸಿದ್ದರು.

ಉತ್ಸವ ಮೂರ್ತಿಗೆ ನೀರು ಎರಚ್ಚಿದನ್ನ ವಿರೋಧಿಸಿ ನಂಜುಂಡೇಶ್ವರನ ಭಕ್ತರು ಪ್ರತಿಭಟನೆ ಮಾಡಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನ ಬಂಧಿಸುವಂತೆ ಪಟ್ಟು ಹಿಡಿದಿದ್ದರು. ಈ ವೇಳೆ ದೇವಾಲಯದ ಇಒ ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ತಹಸಿಲ್ದಾರ್, ಡಿವೈಎಸ್ಪಿ ಪ್ರತಿಭಟನಾಕರನ್ನ ಮನವೊಲಿಸಲು ಯತ್ನಿಸಿದರು. ಈ ವೇಳೆ ಇಂದು ಸಂಜೆಯೊಳಗೆ ಸೂಕ್ತ ಕ್ರಮ ಕೈಗೊಳ್ಳವ ಭರವಸೆ ನೀಡಿದರು. ನಂತರ ಭಕ್ತರು ಪ್ರತಿಭಟನೆ ವಾಪಸ್ ಪಡೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ