AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಇನ್ನೋರ್ವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ; ಪ್ರಕರಣ ದಾಖಲು, ಆರೋಪಿ ಬಂಧನ

ವಿದ್ಯಾರ್ಥಿನಿ ಒಬ್ಬಳೇ ಇದ್ದಾಗ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿಲಾಗಿತ್ತು ಎಂಬ ಆರೋಪದಡಿ ಪ್ರಕರಣ ದಾಖಲಾಗಿದೆ.

ಮೈಸೂರಿನಲ್ಲಿ ಇನ್ನೋರ್ವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ; ಪ್ರಕರಣ ದಾಖಲು, ಆರೋಪಿ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Updated By: guruganesh bhat|

Updated on:Sep 03, 2021 | 10:21 PM

Share

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಆಘಾತದಿಂದ ರಾಜ್ಯದ ಜನರು ಇನ್ನೂ ಹೊರಬರದ ಹೊತ್ತಲ್ಲೇ ಮೈಸೂರಿನಲ್ಲಿ ಇನ್ನೋರ್ವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆಗಿರುವ ಆರೋಪ ಕೇಳಿಬಂದಿದೆ. ಮೈಸೂರಿನ ಆರ್.ಎಸ್.ನಾಯ್ಡು ನಗರದ ಹೋಲಿ ಕ್ರಾಸ್ ಸ್ಡಡಿ ಹೌಸ್​​ನಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಹಲ್ಲೆ ಮತ್ತು ಅತ್ಯಾಚಾರ ಯತ್ನ ನಡೆದಿದೆ ಎಂಬ ಮಾಹಿತಿ ವರದಿಯಾಗಿದ್ದು, ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಮೈಸೂರಿನಲ್ಲಿ ವಿದ್ಯಾರ್ಥಿನಿ‌ ಮೇಲೆ ನಡೆದ ರೇಪ್ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಈಕುರಿತು ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅಧಿಕೃತ ಮಾಹಿತಿ ನೀಡಿದ್ದಾರೆ. 

ಘಟನೆ ನಡೆದ ಎರಡು ಗಂಟೆಯೊಳಗೆ ಆರೋಪಿಯನ್ನು ಪೊಲೀಸರು  ಬಂಧಿಸಿದ್ದಾರೆ. ವಿದ್ಯಾರ್ಥಿನಿ ಒಬ್ಬಳೇ ಇದ್ದಾಗ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿಲಾಗಿತ್ತು ಎಂಬ ಆರೋಪದಡಿ ಪ್ರಕರಣ ದಾಖಲಾಗಿದೆ. ಸ್ಟಡಿಹೌಸ್​ನಲ್ಲಿ ಆಂಧ್ರ ಮೂಲದ 7 ವಿದ್ಯಾರ್ಥಿನಿಯರಿದ್ದರು. ಘಟನೆ ವೇಳೆ ಉಳಿದ ವಿದ್ಯಾರ್ಥಿನಿಯರು ತರಗತಿಗೆ ತೆರಳಿದ್ದರು. ಇದನ್ನು ಗಮನಿಸಿಯೇ ಸ್ಟಡಿಹೌಸ್ ಒಳಗೆ ನುಗ್ಗಿದ್ದ ಆರೋಪಿ, ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹಲ್ಲೆಗೈದು ಪರಾರಿಯಾಗಿದ್ದಾನೆ ಎಂದು ಪ್ರಕರಣ ದಾಖಲಾಗಿದೆ. ಗಾಯಾಳು ವಿದ್ಯಾರ್ಥಿನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೈಸೂರಿನಲ್ಲಿ ಯುವತಿ ಮೇಲೆ ಹಲ್ಲೆ ಅತ್ಯಾಚಾರ ಯತ್ನ ಆರೋಪ ಪ್ರಕರಣದಲ್ಲಿ ಯುವತಿ ಮೇಲೆಯೂ ಕೆಲವು ಅನುಮಾನಗಳು ಸಾರ್ವಜನಿಕ ವಲಯದಲ್ಲಿ ಮೂಡಿದೆ. ಅಪರಿಚಿತನಿಂದ ಕೃತ್ಯ ನಡೆದಿದೆ ಎಂದು ಯುವತಿ ಮೊದಲು ಯುವತಿ ಹೇಳಿಕೆ ನೀಡಿದ್ದಳು. ಆದರೆ ಆರೋಪಿ ಯುವಕನನ್ನು ಬಂಧಿಸಿದ ನಂತರ ಆತನ ಪರಿಚಯ ಇದೆ ಎಂದ ಯುವತಿಯೇ ಒಪ್ಪಿಕೊಂಡಿದ್ದಾಳೆ. ಘಟನೆ ನಡೆಯುವ ಮುನ್ನ ಯುವತಿ ಮತ್ತು ಯುವಕ ನಿರಂತರ ಸಂಪರ್ಕದಲ್ಲಿದ್ದರು. ಅಲ್ಲದೇ, ದೂರು ನೀಡಿದ ನಂತರವೂ ಯುವಕನಿಗೆ ಯುವತಿ ಮೆಸೇಜ್ ಮೂಲಕ ಸಂಪರ್ಕಿಸಿದ್ದಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ: 

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಕದ್ದ ಮೊಬೈಲ್​ನಿಂದ ಸಿಕ್ಕಿಬಿದ್ದ ಆರೋಪಿಗಳು

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳು ಪೊಲೀಸರ ಬಲೆಗೆ ಬೀಳಲು ಈ ಸುಳಿವುಗಳೇ ಮುಖ್ಯ ಕಾರಣ (Mysuru Another student accused of assault and rape)

Published On - 8:06 pm, Fri, 3 September 21

ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ