AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಡ್ಡಿ ಸುಡುವ ಕಾಂಗ್ರೆಸ್ ಅಭಿಯಾನಕ್ಕೆ ಬಿಜೆಪಿ ತಿರುಗೇಟು; ಸಿದ್ದರಾಮಯ್ಯ, ನಲಪಾಡ್​ಗೆ ಚಡ್ಡಿ ಪೋಸ್ಟ್ ಮಾಡಿದ ಕಾರ್ಯಕರ್ತರು

ಚಡ್ಡಿ ಸುಟ್ಟು ಹಾಕುತ್ತೇವೆಂದು ಸಿದ್ದರಾಮಯ್ಯ ಹೇಳಿಕೆ ಸಾಕಷ್ಟು ವಾದ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಆರ್​ಎಸ್​ಎಸ್​ನ ಖಾಕಿ ಚಡ್ಡಿಯನ್ನ ಕಾರ್ಯಕರ್ತರು ಪಾರ್ಸಲ್ ಮಾಡಿದ್ದಾರೆ.

ಚಡ್ಡಿ ಸುಡುವ ಕಾಂಗ್ರೆಸ್ ಅಭಿಯಾನಕ್ಕೆ ಬಿಜೆಪಿ ತಿರುಗೇಟು; ಸಿದ್ದರಾಮಯ್ಯ, ನಲಪಾಡ್​ಗೆ ಚಡ್ಡಿ ಪೋಸ್ಟ್ ಮಾಡಿದ ಕಾರ್ಯಕರ್ತರು
ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ, ನಲಪಾಡ್ಗೆ ಚಡ್ಡಿ ಪೋಸ್ಟ್ ಮಾಡಿದ್ದಾರೆ
TV9 Web
| Edited By: sandhya thejappa|

Updated on:Jun 07, 2022 | 2:56 PM

Share

ಮೈಸೂರು: ಆರ್​ಎಸ್​ಎಸ್​ (RSS) ಚಡ್ಡಿ ಸುಡುವ ಕಾಂಗ್ರೆಸ್ ಅಭಿಯಾನದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಬಿಜೆಪಿ ನಾಯಕರು ಈಗಾಗಲೇ ಗರಂ ಆಗಿದ್ದಾರೆ. ಈ ನಡುವೆ ಕಾಂಗ್ರೆಸ್​ಗೆ ಬಿಜೆಪಿ ತಿರುಗೇಟು ನೀಡಿದ್ದು, ಸಿದ್ದರಾಮಯ್ಯ ಮತ್ತು ನಲಪಾಡ್​ಗೆ ಬಿಜೆಪಿ ಕಾರ್ಯಕರ್ತರು ಚಡ್ಡಿ ಕಳುಹಿಸಿದ್ದಾರೆ. ಮೈಸೂರು ಕೇಂದ್ರ ಅಂಚೆ ಕಚೇರಿಯಿಂದ ಇಬ್ಬರಿಗೂ ಕಾರ್ಯಕರ್ತರು ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಚಡ್ಡಿ ಪೋಸ್ಟ್ ಮಾಡಿದ್ದಾರೆ. ನಿನ್ನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಆರ್​ಎಸ್​​ಎಸ್​ ಕಾರ್ಯಕರ್ತರು ಕೂಡಾ ಮನೆ ಮನೆಗೆ ತೆರಳಿ ಚಡ್ಡಿ ಸಂಗ್ರಹಿಸಿ, ಸಿದ್ದರಾಮಯ್ಯಗೆ ಪಾರ್ಸಲ್ ಮಾಡಿದ್ದರು.

ಚಡ್ಡಿ ಸುಟ್ಟು ಹಾಕುತ್ತೇವೆಂದು ಸಿದ್ದರಾಮಯ್ಯ ಹೇಳಿಕೆ ಸಾಕಷ್ಟು ವಾದ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಆರ್​ಎಸ್​ಎಸ್​ನ ಖಾಕಿ ಚಡ್ಡಿಯನ್ನ ಕಾರ್ಯಕರ್ತರು ಪಾರ್ಸಲ್ ಮಾಡಿದ್ದಾರೆ. ಜೀವನ ಪೂರ್ತಿ ಕಾಲ ಕಳೆದರು ನಮ್ಮ ಚಡ್ಡಿ ಸುಟ್ಟು ಹಾಕಲು ಆಗಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ವಿ.ಸೋಮಣ್ಣ ಹೇಳಿದ್ದೇನು? ಆರ್​ಎಸ್​ಎಸ್​ ಈ ದೇಶಕ್ಕೆ ನೀಡಿರುವ ಕೊಡುಗೆ ಎಲ್ಲರಿಗೂ ಗೊತ್ತಿದೆ ಎಂದು ಮೈಸೂರಿನಲ್ಲಿ ಮಾತನಾಡಿದ ವಸತಿ ಇಲಾಖೆ ಸಚಿವ ವಿ.ಸೋಮಣ್ಣ, ಕೆಲವು ಸೂಕ್ಷ್ಮ ವಿಚಾರ ಮಾತನಾಡದಂತೆ ಆದೇಶ ಬಂದಿದೆ. ಹೀಗಾಗಿ ಸೂಕ್ಷ್ಮ ವಿಚಾರಗಳ ಬಗ್ಗೆ ನಾನು ಮಾತಾಡುವುದಿಲ್ಲ. ದೇಶದ ಪ್ರತಿ ಕಣಕಣದಲ್ಲೂ ಆರ್​ಎಸ್​ಎಸ್​ನ ಕೊಡುಗೆ ಇದೆ. ಕೆಲವರ ನಂಬಿಕೆಗಳಿಗೆ ಅಪಮಾನ ಮಾಡುವುದು ಸರಿಯಲ್ಲ. ಹಾದಿ ಬೀದಿ ಜಗಳ ಆಗಬಾರದು, ಸುಖಾಂತ್ಯವಾಗಬೇಕು ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ
Image
Health : ಅಸ್ತಮಾ, ಉಸಿರಾಟ, ದಂತಸಮಸ್ಯೆಗಳಿಗೆ ಸಿದ್ಧೌಷಧಿ ಈ ಲವಂಗದೆಣ್ಣೆ
Image
Karnataka vs Uttar Pradesh: ಕರ್ನಾಟಕ ಬೌಲರ್​ಗಳ ಮಾರಕ ದಾಳಿಗೆ ತತ್ತರಿಸಿದ ಉತ್ತರ ಪ್ರದೇಶ
Image
Realme GT Neo 3T: ಮಾರುಕಟ್ಟೆಗೆ ಬಂದೇ ಬಿಡ್ತು ರಿಯಲ್‌ ಮಿ GT ನಿಯೋ 3T: ಬೆಲೆ ಎಷ್ಟು ಗೊತ್ತೇ?
Image
ಚಿರಂಜೀವಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಧ್ರುವ ಸರ್ಜಾ; ಇಲ್ಲಿದೆ ವಿಡಿಯೋ

ಜನರಿಂದ ಸಂಗ್ರಹಿಸಿದ ಚಡ್ಡಿಗಳನ್ನು ಸಿದ್ದರಾಮಯ್ಯ ಮನೆಗೆ ತಲುಪಿಸುವ ಆಂದೋಲನವನ್ನು ಬಿಜೆಪಿ ಹಮ್ಮಿಕೊಂಡಿದೆ. ಬಿಜೆಪಿ ಎಸ್​ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಿದ್ದರಾಮಯ್ಯ ಮನೆಗೆ ತೆರಳುತ್ತಾರೆ.

ಕೆಪಿಸಿಸಿ ಕಚೇರಿಗೆ ಹಳೇ ಚಡ್ಡಿಗಳ ಪೋಸ್ಟ್​: ಚಿಕ್ಕಮಗಳೂರು ಬಿಜೆಪಿ ಘಟಕದಿಂದ ಕೆಪಿಸಿಸಿ ಕಚೇರಿಗೆ ಸಿದ್ದರಾಮಯ್ಯ ಹೆಸರಿನಲ್ಲಿ ಹಳೇ ಚಡ್ಡಿಗಳ ಪೋಸ್ಟ್​ ಮಾಡಲಾಗಿದೆ. ಆಜಾದ್ ಪಾರ್ಕ್​​ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಸಿದ್ದರಾಮಯ್ಯ, ಡಿಕೆ. ಶಿವಕುಮಾರ್, ನಲಪಾಡ್​ ವಿರುದ್ಧ ಘೋಷಣೆ ಕೂಗಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Tue, 7 June 22

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!