AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಡ್ಡಿ ಸುಡುವ ಕಾಂಗ್ರೆಸ್ ಅಭಿಯಾನಕ್ಕೆ ಬಿಜೆಪಿ ತಿರುಗೇಟು; ಸಿದ್ದರಾಮಯ್ಯ, ನಲಪಾಡ್​ಗೆ ಚಡ್ಡಿ ಪೋಸ್ಟ್ ಮಾಡಿದ ಕಾರ್ಯಕರ್ತರು

ಚಡ್ಡಿ ಸುಟ್ಟು ಹಾಕುತ್ತೇವೆಂದು ಸಿದ್ದರಾಮಯ್ಯ ಹೇಳಿಕೆ ಸಾಕಷ್ಟು ವಾದ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಆರ್​ಎಸ್​ಎಸ್​ನ ಖಾಕಿ ಚಡ್ಡಿಯನ್ನ ಕಾರ್ಯಕರ್ತರು ಪಾರ್ಸಲ್ ಮಾಡಿದ್ದಾರೆ.

ಚಡ್ಡಿ ಸುಡುವ ಕಾಂಗ್ರೆಸ್ ಅಭಿಯಾನಕ್ಕೆ ಬಿಜೆಪಿ ತಿರುಗೇಟು; ಸಿದ್ದರಾಮಯ್ಯ, ನಲಪಾಡ್​ಗೆ ಚಡ್ಡಿ ಪೋಸ್ಟ್ ಮಾಡಿದ ಕಾರ್ಯಕರ್ತರು
ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ, ನಲಪಾಡ್ಗೆ ಚಡ್ಡಿ ಪೋಸ್ಟ್ ಮಾಡಿದ್ದಾರೆ
TV9 Web
| Edited By: |

Updated on:Jun 07, 2022 | 2:56 PM

Share

ಮೈಸೂರು: ಆರ್​ಎಸ್​ಎಸ್​ (RSS) ಚಡ್ಡಿ ಸುಡುವ ಕಾಂಗ್ರೆಸ್ ಅಭಿಯಾನದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಬಿಜೆಪಿ ನಾಯಕರು ಈಗಾಗಲೇ ಗರಂ ಆಗಿದ್ದಾರೆ. ಈ ನಡುವೆ ಕಾಂಗ್ರೆಸ್​ಗೆ ಬಿಜೆಪಿ ತಿರುಗೇಟು ನೀಡಿದ್ದು, ಸಿದ್ದರಾಮಯ್ಯ ಮತ್ತು ನಲಪಾಡ್​ಗೆ ಬಿಜೆಪಿ ಕಾರ್ಯಕರ್ತರು ಚಡ್ಡಿ ಕಳುಹಿಸಿದ್ದಾರೆ. ಮೈಸೂರು ಕೇಂದ್ರ ಅಂಚೆ ಕಚೇರಿಯಿಂದ ಇಬ್ಬರಿಗೂ ಕಾರ್ಯಕರ್ತರು ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಚಡ್ಡಿ ಪೋಸ್ಟ್ ಮಾಡಿದ್ದಾರೆ. ನಿನ್ನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಆರ್​ಎಸ್​​ಎಸ್​ ಕಾರ್ಯಕರ್ತರು ಕೂಡಾ ಮನೆ ಮನೆಗೆ ತೆರಳಿ ಚಡ್ಡಿ ಸಂಗ್ರಹಿಸಿ, ಸಿದ್ದರಾಮಯ್ಯಗೆ ಪಾರ್ಸಲ್ ಮಾಡಿದ್ದರು.

ಚಡ್ಡಿ ಸುಟ್ಟು ಹಾಕುತ್ತೇವೆಂದು ಸಿದ್ದರಾಮಯ್ಯ ಹೇಳಿಕೆ ಸಾಕಷ್ಟು ವಾದ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಆರ್​ಎಸ್​ಎಸ್​ನ ಖಾಕಿ ಚಡ್ಡಿಯನ್ನ ಕಾರ್ಯಕರ್ತರು ಪಾರ್ಸಲ್ ಮಾಡಿದ್ದಾರೆ. ಜೀವನ ಪೂರ್ತಿ ಕಾಲ ಕಳೆದರು ನಮ್ಮ ಚಡ್ಡಿ ಸುಟ್ಟು ಹಾಕಲು ಆಗಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ವಿ.ಸೋಮಣ್ಣ ಹೇಳಿದ್ದೇನು? ಆರ್​ಎಸ್​ಎಸ್​ ಈ ದೇಶಕ್ಕೆ ನೀಡಿರುವ ಕೊಡುಗೆ ಎಲ್ಲರಿಗೂ ಗೊತ್ತಿದೆ ಎಂದು ಮೈಸೂರಿನಲ್ಲಿ ಮಾತನಾಡಿದ ವಸತಿ ಇಲಾಖೆ ಸಚಿವ ವಿ.ಸೋಮಣ್ಣ, ಕೆಲವು ಸೂಕ್ಷ್ಮ ವಿಚಾರ ಮಾತನಾಡದಂತೆ ಆದೇಶ ಬಂದಿದೆ. ಹೀಗಾಗಿ ಸೂಕ್ಷ್ಮ ವಿಚಾರಗಳ ಬಗ್ಗೆ ನಾನು ಮಾತಾಡುವುದಿಲ್ಲ. ದೇಶದ ಪ್ರತಿ ಕಣಕಣದಲ್ಲೂ ಆರ್​ಎಸ್​ಎಸ್​ನ ಕೊಡುಗೆ ಇದೆ. ಕೆಲವರ ನಂಬಿಕೆಗಳಿಗೆ ಅಪಮಾನ ಮಾಡುವುದು ಸರಿಯಲ್ಲ. ಹಾದಿ ಬೀದಿ ಜಗಳ ಆಗಬಾರದು, ಸುಖಾಂತ್ಯವಾಗಬೇಕು ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ
Image
Health : ಅಸ್ತಮಾ, ಉಸಿರಾಟ, ದಂತಸಮಸ್ಯೆಗಳಿಗೆ ಸಿದ್ಧೌಷಧಿ ಈ ಲವಂಗದೆಣ್ಣೆ
Image
Karnataka vs Uttar Pradesh: ಕರ್ನಾಟಕ ಬೌಲರ್​ಗಳ ಮಾರಕ ದಾಳಿಗೆ ತತ್ತರಿಸಿದ ಉತ್ತರ ಪ್ರದೇಶ
Image
Realme GT Neo 3T: ಮಾರುಕಟ್ಟೆಗೆ ಬಂದೇ ಬಿಡ್ತು ರಿಯಲ್‌ ಮಿ GT ನಿಯೋ 3T: ಬೆಲೆ ಎಷ್ಟು ಗೊತ್ತೇ?
Image
ಚಿರಂಜೀವಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಧ್ರುವ ಸರ್ಜಾ; ಇಲ್ಲಿದೆ ವಿಡಿಯೋ

ಜನರಿಂದ ಸಂಗ್ರಹಿಸಿದ ಚಡ್ಡಿಗಳನ್ನು ಸಿದ್ದರಾಮಯ್ಯ ಮನೆಗೆ ತಲುಪಿಸುವ ಆಂದೋಲನವನ್ನು ಬಿಜೆಪಿ ಹಮ್ಮಿಕೊಂಡಿದೆ. ಬಿಜೆಪಿ ಎಸ್​ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಿದ್ದರಾಮಯ್ಯ ಮನೆಗೆ ತೆರಳುತ್ತಾರೆ.

ಕೆಪಿಸಿಸಿ ಕಚೇರಿಗೆ ಹಳೇ ಚಡ್ಡಿಗಳ ಪೋಸ್ಟ್​: ಚಿಕ್ಕಮಗಳೂರು ಬಿಜೆಪಿ ಘಟಕದಿಂದ ಕೆಪಿಸಿಸಿ ಕಚೇರಿಗೆ ಸಿದ್ದರಾಮಯ್ಯ ಹೆಸರಿನಲ್ಲಿ ಹಳೇ ಚಡ್ಡಿಗಳ ಪೋಸ್ಟ್​ ಮಾಡಲಾಗಿದೆ. ಆಜಾದ್ ಪಾರ್ಕ್​​ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಸಿದ್ದರಾಮಯ್ಯ, ಡಿಕೆ. ಶಿವಕುಮಾರ್, ನಲಪಾಡ್​ ವಿರುದ್ಧ ಘೋಷಣೆ ಕೂಗಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Tue, 7 June 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ