AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ: ಮೈಸೂರಿನಲ್ಲಿ ಆರಂಭವಾಗದ ತಪಾಸಣೆ, ಚಾಮರಾಜನಗರದಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಬುಧವಾರ ಮತ್ತೊಂದು ನಿಫಾ ವೈರಸ್ ಪ್ರಕರಣ ಕಾಣಿಸಿಕೊಳ್ಳುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5ಕ್ಕೆ ಏರಿದಂತಾಗಿದೆ. ನೆರೆಯ ರಾಜ್ಯದಲ್ಲಿ ಈ ವೈರಸ್ ಹೆಚ್ಚಾದ ಹಿನ್ನೆಲೆ ಗಡಿನಾಡು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಕಟ್ಟೆಚ್ಚರವಹಿಸಿದೆ. ಜಿಲ್ಲೆಗಳಿಗೆ ಎಂಟ್ರಿ ಕೊಡುತ್ತಿರುವ ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದ್ದು, ಪ್ರಯಾಣಿಕರ ಮಾಹಿತಿಗಳನ್ನೂ ಸಂಗ್ರಹಿಸಲಾಗುತ್ತಿದೆ.

ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ: ಮೈಸೂರಿನಲ್ಲಿ ಆರಂಭವಾಗದ ತಪಾಸಣೆ, ಚಾಮರಾಜನಗರದಲ್ಲಿ ಕಟ್ಟೆಚ್ಚರ
ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ ಹಿನ್ನೆಲೆ ಚಾಮರಾಜನಗರದಲ್ಲಿ ಕಟ್ಟೆಚ್ಚರವಹಿಸಲಾಗಿದ್ದು, ಮೈಸೂರಿನಲ್ಲಿ ತಪಾಸಣೆ ಇನ್ನೂ ಆರಂಭಿಸಿಲ್ಲ (ಸಾಂದರ್ಭಿಕ ಚಿತ್ರ)
ದಿಲೀಪ್​, ಚೌಡಹಳ್ಳಿ
| Edited By: Rakesh Nayak Manchi|

Updated on: Sep 14, 2023 | 2:52 PM

Share

ಮೈಸೂರು, ಸೆ.14: ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಸ್ (Nipah Virus) ಹೆಚ್ಚಾಗುತ್ತಿರುವ ಹಿನ್ನೆಲೆ ಗಡಿನಾಡು ಜಿಲ್ಲೆಯಾದ ಮೈಸೂರಿನಲ್ಲಿ (Mysuru) ಕಟ್ಟೆಚ್ಚರವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದ್ದರೂ ಕೇರಳದಿಂದ ರಾಜ್ಯಕ್ಕೆ ಎಂಟ್ರಿ ಕೊಡುತ್ತಿರುವವರನ್ನು ತಪಾಸಣೆ ನಡೆಸುಲು ಅಧಿಕಾರಿಗಳು ಮುಂದಾಗಿಲ್ಲ. ಮತ್ತೊಂದು ಗಡಿಭಾಗ ಚಾಮರಾಜನಗರದಲ್ಲಿ (Chamarajanagara) ರಾಜ್ಯಕ್ಕೆ ಎಂಟ್ರಿ ಕೊಡುವ ವಾಹನಗಳ ಮೇಲೆ ನಿಗಾ ಇರಿಸಲಾಗುತ್ತಿದೆ.

ಕೇರಳದಲ್ಲಿ ನಿಫಾ ವೈರಲ್ ಪ್ರಕರಣಗಳ ಸಂಖ್ಯೆಯಲ್ಲಿ ಏರುತ್ತಿದ್ದರೂ ಮೈಸೂರಿಗೆ ಹೆಚ್​ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್​​ನಲ್ಲಿ ಯಾವುದೇ ತಪಾಸಣೆ ನಡೆಸಲಾಗುತ್ತಿಲ್ಲ. ಈ ಗಡಿಯ ಮೂಲಕ ಸಾಕಷ್ಟು ವಾಹನಗಳು ರಾಜ್ಯಕ್ಕೆ ಎಂಟ್ರಿಯಾಗುತ್ತವೆ. ಹೀಗಾಗಿ ಗಡಿಯಲ್ಲಿ ತಪಾಸಣೆ ನಡೆಸಲು ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳ ಸಂಖ್ಯೆ ಐದಕ್ಕೆ ಏರಿಕೆ, ರೋಗಿಗಳ ಸಂಪರ್ಕಕ್ಕೆ ಬಂದಿರುವ 700 ಮಂದಿ ಪೈಕಿ 77 ಜನರಿಗೆ ಅಪಾಯ ಹೆಚ್ಚು

ಅದಾಗ್ಯೂ, ಅಧಿಕಾರಿಗಳು ಬಂದು ಸೂಚನೆ ನೀಡದ ಕಾರಣ ಯಾವುದೇ ತಪಾಸಣೆ ಪ್ರಾರಂಭವಾಗಿಲ್ಲ. ಥರ್ಮಲ್ ಸ್ಕ್ಯಾನ್ ಮಾಡುವುದು ಮತ್ತು ಕೇರಳದಿಂದ ಬರುವ ಪ್ರತಿಯೊಬ್ಬರ ಮೇಲೆ ನಿಗ ಇಡಲು ಕ್ರಮ ವಹಿಸುವುದಾಗಿ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಕಟ್ಟೆಚ್ಚರ

ಚಾಮರಾಜನಗರ: ಕೇರಳದಲ್ಲಿ ನಿಫಾ ಸೋಂಕಿತರ ಪ್ರಕರಣ ಹೆಚ್ಚಾದ ಕಾರಣ ಚಾಮರಾಜನಗರದಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಮೂಲೆಹೊಳೆ ಚೆಕ್ ಪೋಸ್ಟ್​ನಲ್ಲಿ ಅಲರ್ಟ್ ಆದ ಆರೋಗ್ಯ ಇಲಾಖಾ ಸಿಬ್ಬಂದಿ, ಕೇರಳದಿಂದ ಕರ್ನಾಟಕ ಪ್ರವೇಶಿಸುವ ಪ್ರತಿಯೊಂದು ವಾಹನ ಸವಾರರಿಗೆ ಥರ್ಮಲ್ ಸ್ಕ್ಯಾನಿಂಗ್ ನಡೆಸಲಾಗುತ್ತಿದೆ. ಗೂಡ್ಸ್ ವಾಹನಗಳನ್ನ ಸ್ಯಾನಿಟೈಸ್ ಮಾಡುತ್ತಿದ್ದಾರೆ.

ಕಳೆದ ಬಾರಿ ಕೇರಳದಿಂದ ಬಂದವರಿಂದಲೇ ಜಿಲ್ಲೆಯಲ್ಲಿ ಕೋವಿಡ್ ಹರಡಿತ್ತು. ಚಾಮರಾಜನಗರದಲ್ಲಿ ಪತ್ತೆಯಾದ ಸೋಂಕಿತನ ಟ್ರ್ಯಾವೆಲ್ ಹಿಸ್ಟರಿ ಸಹ ಕೇರಳದಿಂದಲೇ ಪತ್ತೆಯಾಗಿತ್ತು. ಈ ಹಿನ್ನಲೆ ಕೇರಳದಿಂದ ಬರುವ ವಾಹನ ಸವಾರರ ಮೇಲೆ ಆರೋಗ್ಯ ಇಲಾಖಾ ಸಿಬ್ಬಂದಿ ಹದ್ದಿನ ಕಣ್ಣಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More