Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ: ಮೈಸೂರಿನಲ್ಲಿ ಆರಂಭವಾಗದ ತಪಾಸಣೆ, ಚಾಮರಾಜನಗರದಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಬುಧವಾರ ಮತ್ತೊಂದು ನಿಫಾ ವೈರಸ್ ಪ್ರಕರಣ ಕಾಣಿಸಿಕೊಳ್ಳುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5ಕ್ಕೆ ಏರಿದಂತಾಗಿದೆ. ನೆರೆಯ ರಾಜ್ಯದಲ್ಲಿ ಈ ವೈರಸ್ ಹೆಚ್ಚಾದ ಹಿನ್ನೆಲೆ ಗಡಿನಾಡು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಕಟ್ಟೆಚ್ಚರವಹಿಸಿದೆ. ಜಿಲ್ಲೆಗಳಿಗೆ ಎಂಟ್ರಿ ಕೊಡುತ್ತಿರುವ ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದ್ದು, ಪ್ರಯಾಣಿಕರ ಮಾಹಿತಿಗಳನ್ನೂ ಸಂಗ್ರಹಿಸಲಾಗುತ್ತಿದೆ.

ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ: ಮೈಸೂರಿನಲ್ಲಿ ಆರಂಭವಾಗದ ತಪಾಸಣೆ, ಚಾಮರಾಜನಗರದಲ್ಲಿ ಕಟ್ಟೆಚ್ಚರ
ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ ಹಿನ್ನೆಲೆ ಚಾಮರಾಜನಗರದಲ್ಲಿ ಕಟ್ಟೆಚ್ಚರವಹಿಸಲಾಗಿದ್ದು, ಮೈಸೂರಿನಲ್ಲಿ ತಪಾಸಣೆ ಇನ್ನೂ ಆರಂಭಿಸಿಲ್ಲ (ಸಾಂದರ್ಭಿಕ ಚಿತ್ರ)
Follow us
ದಿಲೀಪ್​, ಚೌಡಹಳ್ಳಿ
| Updated By: Rakesh Nayak Manchi

Updated on: Sep 14, 2023 | 2:52 PM

ಮೈಸೂರು, ಸೆ.14: ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಸ್ (Nipah Virus) ಹೆಚ್ಚಾಗುತ್ತಿರುವ ಹಿನ್ನೆಲೆ ಗಡಿನಾಡು ಜಿಲ್ಲೆಯಾದ ಮೈಸೂರಿನಲ್ಲಿ (Mysuru) ಕಟ್ಟೆಚ್ಚರವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದ್ದರೂ ಕೇರಳದಿಂದ ರಾಜ್ಯಕ್ಕೆ ಎಂಟ್ರಿ ಕೊಡುತ್ತಿರುವವರನ್ನು ತಪಾಸಣೆ ನಡೆಸುಲು ಅಧಿಕಾರಿಗಳು ಮುಂದಾಗಿಲ್ಲ. ಮತ್ತೊಂದು ಗಡಿಭಾಗ ಚಾಮರಾಜನಗರದಲ್ಲಿ (Chamarajanagara) ರಾಜ್ಯಕ್ಕೆ ಎಂಟ್ರಿ ಕೊಡುವ ವಾಹನಗಳ ಮೇಲೆ ನಿಗಾ ಇರಿಸಲಾಗುತ್ತಿದೆ.

ಕೇರಳದಲ್ಲಿ ನಿಫಾ ವೈರಲ್ ಪ್ರಕರಣಗಳ ಸಂಖ್ಯೆಯಲ್ಲಿ ಏರುತ್ತಿದ್ದರೂ ಮೈಸೂರಿಗೆ ಹೆಚ್​ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್​​ನಲ್ಲಿ ಯಾವುದೇ ತಪಾಸಣೆ ನಡೆಸಲಾಗುತ್ತಿಲ್ಲ. ಈ ಗಡಿಯ ಮೂಲಕ ಸಾಕಷ್ಟು ವಾಹನಗಳು ರಾಜ್ಯಕ್ಕೆ ಎಂಟ್ರಿಯಾಗುತ್ತವೆ. ಹೀಗಾಗಿ ಗಡಿಯಲ್ಲಿ ತಪಾಸಣೆ ನಡೆಸಲು ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳ ಸಂಖ್ಯೆ ಐದಕ್ಕೆ ಏರಿಕೆ, ರೋಗಿಗಳ ಸಂಪರ್ಕಕ್ಕೆ ಬಂದಿರುವ 700 ಮಂದಿ ಪೈಕಿ 77 ಜನರಿಗೆ ಅಪಾಯ ಹೆಚ್ಚು

ಅದಾಗ್ಯೂ, ಅಧಿಕಾರಿಗಳು ಬಂದು ಸೂಚನೆ ನೀಡದ ಕಾರಣ ಯಾವುದೇ ತಪಾಸಣೆ ಪ್ರಾರಂಭವಾಗಿಲ್ಲ. ಥರ್ಮಲ್ ಸ್ಕ್ಯಾನ್ ಮಾಡುವುದು ಮತ್ತು ಕೇರಳದಿಂದ ಬರುವ ಪ್ರತಿಯೊಬ್ಬರ ಮೇಲೆ ನಿಗ ಇಡಲು ಕ್ರಮ ವಹಿಸುವುದಾಗಿ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಕಟ್ಟೆಚ್ಚರ

ಚಾಮರಾಜನಗರ: ಕೇರಳದಲ್ಲಿ ನಿಫಾ ಸೋಂಕಿತರ ಪ್ರಕರಣ ಹೆಚ್ಚಾದ ಕಾರಣ ಚಾಮರಾಜನಗರದಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಮೂಲೆಹೊಳೆ ಚೆಕ್ ಪೋಸ್ಟ್​ನಲ್ಲಿ ಅಲರ್ಟ್ ಆದ ಆರೋಗ್ಯ ಇಲಾಖಾ ಸಿಬ್ಬಂದಿ, ಕೇರಳದಿಂದ ಕರ್ನಾಟಕ ಪ್ರವೇಶಿಸುವ ಪ್ರತಿಯೊಂದು ವಾಹನ ಸವಾರರಿಗೆ ಥರ್ಮಲ್ ಸ್ಕ್ಯಾನಿಂಗ್ ನಡೆಸಲಾಗುತ್ತಿದೆ. ಗೂಡ್ಸ್ ವಾಹನಗಳನ್ನ ಸ್ಯಾನಿಟೈಸ್ ಮಾಡುತ್ತಿದ್ದಾರೆ.

ಕಳೆದ ಬಾರಿ ಕೇರಳದಿಂದ ಬಂದವರಿಂದಲೇ ಜಿಲ್ಲೆಯಲ್ಲಿ ಕೋವಿಡ್ ಹರಡಿತ್ತು. ಚಾಮರಾಜನಗರದಲ್ಲಿ ಪತ್ತೆಯಾದ ಸೋಂಕಿತನ ಟ್ರ್ಯಾವೆಲ್ ಹಿಸ್ಟರಿ ಸಹ ಕೇರಳದಿಂದಲೇ ಪತ್ತೆಯಾಗಿತ್ತು. ಈ ಹಿನ್ನಲೆ ಕೇರಳದಿಂದ ಬರುವ ವಾಹನ ಸವಾರರ ಮೇಲೆ ಆರೋಗ್ಯ ಇಲಾಖಾ ಸಿಬ್ಬಂದಿ ಹದ್ದಿನ ಕಣ್ಣಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು