AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 5 ತಿಂಗಳುಗಳಲ್ಲಿ 135.36 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸಿದ ಮೈಸೂರು ಮಹಾನಗರ ಪಾಲಿಕೆ

Mysuru Property Tax collection; ವಲಯ 1ರಲ್ಲೇ ಒಟ್ಟು 13,607 ಆಸ್ತಿ ಮಾಲೀಕರಿಂದ ತೆರಿಗೆ ಆದಾಯ 16,66,85,457 ರೂ. ಸಂಗ್ರಹಿಸಲಾಗಿದೆ. ಈ ಪೈಕಿ 4,55,88,679 ರೂ. ಆನ್‌ಲೈನ್‌ನಲ್ಲಿ ಸಂಗ್ರಹಿಸಲಾಗಿದೆ. ಕರ್ನಾಟಕ ವನ್ ಮೂಲಕ 82,28,199 ರೂ. ಸಂಗ್ರಹಿಸಲಾಗಿದ್ದು, ಬ್ಯಾಂಕ್ ಕೌಂಟರ್ ಗಳಲ್ಲಿ 11,28,68,579 ರೂ. ಸಂಗ್ರಹಿಸಲಾಗಿದೆ.

ಕೇವಲ 5 ತಿಂಗಳುಗಳಲ್ಲಿ 135.36 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸಿದ ಮೈಸೂರು ಮಹಾನಗರ ಪಾಲಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 20, 2023 | 9:47 PM

Share

ಮೈಸೂರು, ಸೆಪ್ಟೆಂಬರ್ 20: ಮೈಸೂರು ಮಹಾನಗರ ಪಾಲಿಕೆಯು (MCC) ಆಸ್ತಿ ತೆರಿಗೆ ಸಂಗ್ರಹದಲ್ಲಿ (Property Tax collection) ಗಮನಾರ್ಹ ಯಶಸ್ಸನ್ನು ಸಾಧಿಸಿದ್ದು, ಕೇವಲ 5 ತಿಂಗಳುಗಳಲ್ಲಿ 135.36 ಕೋಟಿ ರೂ. ತೆರಿಗೆ ಸಂಗ್ರಹಿಸಿದೆ. ಈ ವರ್ಷದ ವಾರ್ಷಿಕ ಗುರಿಯು162 ಕೋಟಿ ರೂ. ಆಗಿದ್ದು, ಉಳಿದ ಮೊತ್ತವನ್ನು ಮುಂದಿನ ತಿಂಗಳುಗಳಲ್ಲಿ ಸಂಗ್ರಹಿಸಲಾಗುವುದು. ಈ ಸಾಧನೆಯು ಗುರಿಯ ಶೇ 80 ರಷ್ಟಾಗಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ. ಏಪ್ರಿಲ್ 1 ರಿಂದ ಸೆಪ್ಟೆಂಬರ್ 19, 2023 ರವರೆಗೆ ಐದು ತಿಂಗಳ ಸಂಕ್ಷಿಪ್ತ ಅವಧಿಯಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಿದ ಪರಿಣಾಮ ತೆರಿಗೆ ಸಂಗ್ರಹದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗಿದೆ. ಆಯುಕ್ತರು, ಸಹಾಯಕ ಆಯುಕ್ತರು, ಕಂದಾಯ ನಿರೀಕ್ಷಕರು ಮತ್ತು ಇತರರು ಸೇರಿದಂತೆ ಎಲ್ಲಾ ಒಂಬತ್ತು ಎಂಸಿಸಿ ವಲಯಗಳ ಅಧಿಕಾರಿಗಳ ನೇತೃತ್ವದಲ್ಲಿ ತೆರಿಗೆ ಸಂಗ್ರಹ ಪ್ರಕ್ರಿಯೆಯನ್ನು ಸಮರ್ಥವಾಗಿ ಕಾರ್ಯಗತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಲಯ 1ರಲ್ಲೇ ಒಟ್ಟು 13,607 ಆಸ್ತಿ ಮಾಲೀಕರಿಂದ ತೆರಿಗೆ ಆದಾಯ 16,66,85,457 ರೂ. ಸಂಗ್ರಹಿಸಲಾಗಿದೆ. ಈ ಪೈಕಿ 4,55,88,679 ರೂ. ಆನ್‌ಲೈನ್‌ನಲ್ಲಿ ಸಂಗ್ರಹಿಸಲಾಗಿದೆ. ಕರ್ನಾಟಕ ವನ್ ಮೂಲಕ 82,28,199 ರೂ. ಸಂಗ್ರಹಿಸಲಾಗಿದ್ದು, ಬ್ಯಾಂಕ್ ಕೌಂಟರ್ ಗಳಲ್ಲಿ 11,28,68,579 ರೂ. ಸಂಗ್ರಹಿಸಲಾಗಿದೆ.

ವಲಯ 2 ರಲ್ಲಿ 17,64,67,528 ರೂ. ಸಂಗ್ರಹಿಸಲಾಗಿದ್ದು, ವಲಯ 3ರಲ್ಲಿ 8,04,76,514 ರೂ. ಆನ್‌ಲೈನ್‌ನಲ್ಲಿ ಸಂಗ್ರಹಿಸಲಾಗಿದೆ. ಕರ್ನಾಟಕ ವನ್ ಮೂಲಕ 3,53,59,979 ರೂ. ಸಂಗ್ರಹಿಸಲಾಗಿದ್ದು, ಬ್ಯಾಂಕ್ ಕೌಂಟರ್‌ಗಳಲ್ಲಿ 11,11,25,444 ರೂ. ಸಂಗ್ರಹಿಸಲಾಗಿದೆ. ವಲಯವಾರು ಒಟ್ಟು 22,80,71,912 ರೂ. ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ವಿಜಯಪುರ: 15 ವರ್ಷದಿಂದ ತೆರಿಗೆ ಕಟ್ಟದ ಮುದ್ದೇಬಿಹಾಳದ ಬಾರೊಂದರ ಮಾಲೀಕ ಪುರಸಭೆಯವರು ತಮಟೆ ಬಾರಿಸತೊಡಗಿದಾಗ ಕೂಗಾಡತೊಡಗಿದ!

ಎಂಸಿಸಿ ಉಪ ಆಯುಕ್ತ (ಕಂದಾಯ) ದಾಸೇಗೌಡ ಅವರು ಈ ಸಾಧನೆಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಹಳೆಯ ಆಸ್ತಿಗಳ ಮೇಲಿನ ಬಾಕಿ ಮಾತ್ರವಲ್ಲದೆ ಹೊಸ ಆಸ್ತಿಗಳಿಂದ ಆಸ್ತಿ ತೆರಿಗೆಯನ್ನು ಸಹ ಸೇರಿಸಿ ಸಂಗ್ರಹಿಸಲಾಗಿದೆ. ವಲಯ ಅಧಿಕಾರಿಗಳು, ಅಭಿವೃದ್ಧಿ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಸಾರ್ವಜನಿಕರ ಸಹಕಾರವೇ ಈ ಸಾಧನೆಗೆ ಕಾರಣವಾಗಿದೆ ಎಂದು ದಾಸೇಗೌಡ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ