AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಚಿಹ್ನೆ, ಬಿಜೆಪಿಯ ಭರವಸೆಗಳು ರಾರಾಜಿಸುತ್ತಿದ್ದ ಗೋಡೆ ಬರಹಕ್ಕೆ ಕೆಂಪು ಮಸಿ ಬಳಿದ ಮೈಸೂರು ಪಾಲಿಕೆ ಸಿಬ್ಬಂದಿ!

ಕರ್ನಾಟಕ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ಪಕ್ಷಗಳು ನಾನಾ ರೀತಿಯಲ್ಲಿ ಪ್ರಚಾರ ನಡೆಸುತ್ತಿದೆ. ಅದರಂತೆ ಬಿಜೆಪಿ ಗೋಡೆ ಬರಹದ ಮೂಲಕ ಪ್ರಚಾರ ನಡೆಸುತ್ತಿತ್ತು. ಆದರೆ ಮೈಸೂರು ಪಾಲಿಕೆ ಸಿಬ್ಬಂದಿ ಬಿಜೆಪಿ ಚಿಹ್ನೆ, ನಾಯಕರ ಮುಖಕ್ಕೆ ಕೆಂಪು ಬಣ್ಣ ಬಳಿದಿದ್ದಾರೆ.

ಬಿಜೆಪಿ ಚಿಹ್ನೆ, ಬಿಜೆಪಿಯ ಭರವಸೆಗಳು ರಾರಾಜಿಸುತ್ತಿದ್ದ ಗೋಡೆ ಬರಹಕ್ಕೆ ಕೆಂಪು ಮಸಿ ಬಳಿದ ಮೈಸೂರು ಪಾಲಿಕೆ ಸಿಬ್ಬಂದಿ!
ಬಿಜೆಪಿ ಗೋಡೆ ಬರಹಗಳಿಗೆ ಬಣ್ಣ ಬಳಿಯುತ್ತಿರುವ ಮೈಸೂರು ಪಾಲಿಕೆ ಸಿಬ್ಬಂದಿ
Rakesh Nayak Manchi
|

Updated on:Feb 20, 2023 | 3:32 PM

Share

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದು, ವಿವಿಧ ಪಕ್ಷಗಳು ನಾನಾ ರೀತಿಯಲ್ಲಿ ಪ್ರಚಾರ ನಡೆಸುತ್ತಿದೆ. ಅದರಂತೆ ಬಿಜೆಪಿ (BJP Karnataka) ಗೋಡೆ ಬರಹದ ಮೂಲಕ ಪ್ರಚಾರ ಆರಂಭಿಸಿದ್ದು, ವಿವಿಧ ಕಡೆಗಳಲ್ಲಿನ ಗೋಡೆ ಮೇಲೆ ನಾಯಕಯ ಫೋಟೋ ಸಹಿತ ಭರವಸೆಯ ಬರಹಗಳನ್ನು ಹಾಕಿತ್ತು. ಈ ನಡುವೆ ಮೈಸೂರು ಪಾಲಿಕೆ ಆಯುಕ್ತ​​ ಲಕ್ಷ್ಮೀಕಾಂತ್ (Lakshmikanth) ಅವರು ಗೋಡೆ ಬರಹ ತೆಗೆದುಹಾಕುವಂತೆ ಆದೇಶಿಸಿದ್ದಾರೆ. ಆದರೆ ಪಾಲಿಕೆ (Mysuru City Corporation) ಸಿಬ್ಬಂದಿ ಮಾತ್ರ ಸಂಪೂರ್ಣವಾಗಿ ಬಣ್ಣ ಹಚ್ಚುವ ಬದಲು ಬಿಜೆಪಿ ಚಿಹ್ನೆ, ಬಿಜೆಪಿ ನಾಯಕರ ಮುಖಕ್ಕೆ ಮಾತ್ರ ಬಣ್ಣ ಬಳಿದಿದ್ದಾರೆ.

ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಅಧಿಕಾರ ನಡೆಸುತ್ತಿದ್ದು, ಮೈಸೂರು ಮೇಯರ್ ಉಪ ಮೇಯರ್ ಎರಡು ಸ್ಥಾನ ಬಿಜೆಪಿಯದ್ದೇ ಆಗಿದೆ. ಮೇಯರ್ ಆಗಿ ಶಿವಕುಮಾರ್ ಉಪಮೇಯರ್ ಆಗಿ ರೂಪ ಅಧಿಕಾರ ನಡೆಸುತ್ತಿದ್ದಾರೆ. ಪಾಲಿಕೆ ಬಿಜೆಪಿ ಹಿಡಿತದಲ್ಲಿದ್ದರೂ ನಗರದ ವಿವಿಧ ಕಡೆಗಳಲ್ಲಿ ತಮ್ಮದೇ ಪಕ್ಷದ ಪ್ರಚಾರದ ಗೋಡೆ ಬರಹಗಳಿಗೆ ಮತ್ತು ತಮ್ಮ ನಾಯಕರ ಮುಖಕ್ಕೆ ಪಾಲಿಕೆಯ ಸಿಬ್ಬಂದಿ ಬಣ್ಣ ಬಳಿಯುತ್ತಿದ್ದಾರೆ. ನಗರದ ನಾರಾಯಣ ಶಾಸ್ತ್ರಿ ರಸ್ತೆ ಸೇರಿದಂತೆ ಹಲವೆಡೆ ಬಣ್ಣ ಹಚ್ಚುವ ಕಾರ್ಯಾಚರಣೆ ಆರಂಭವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Mon, 20 February 23

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ