ಬಿಜೆಪಿ ಚಿಹ್ನೆ, ಬಿಜೆಪಿಯ ಭರವಸೆಗಳು ರಾರಾಜಿಸುತ್ತಿದ್ದ ಗೋಡೆ ಬರಹಕ್ಕೆ ಕೆಂಪು ಮಸಿ ಬಳಿದ ಮೈಸೂರು ಪಾಲಿಕೆ ಸಿಬ್ಬಂದಿ!

ಕರ್ನಾಟಕ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ಪಕ್ಷಗಳು ನಾನಾ ರೀತಿಯಲ್ಲಿ ಪ್ರಚಾರ ನಡೆಸುತ್ತಿದೆ. ಅದರಂತೆ ಬಿಜೆಪಿ ಗೋಡೆ ಬರಹದ ಮೂಲಕ ಪ್ರಚಾರ ನಡೆಸುತ್ತಿತ್ತು. ಆದರೆ ಮೈಸೂರು ಪಾಲಿಕೆ ಸಿಬ್ಬಂದಿ ಬಿಜೆಪಿ ಚಿಹ್ನೆ, ನಾಯಕರ ಮುಖಕ್ಕೆ ಕೆಂಪು ಬಣ್ಣ ಬಳಿದಿದ್ದಾರೆ.

ಬಿಜೆಪಿ ಚಿಹ್ನೆ, ಬಿಜೆಪಿಯ ಭರವಸೆಗಳು ರಾರಾಜಿಸುತ್ತಿದ್ದ ಗೋಡೆ ಬರಹಕ್ಕೆ ಕೆಂಪು ಮಸಿ ಬಳಿದ ಮೈಸೂರು ಪಾಲಿಕೆ ಸಿಬ್ಬಂದಿ!
ಬಿಜೆಪಿ ಗೋಡೆ ಬರಹಗಳಿಗೆ ಬಣ್ಣ ಬಳಿಯುತ್ತಿರುವ ಮೈಸೂರು ಪಾಲಿಕೆ ಸಿಬ್ಬಂದಿ
Rakesh Nayak Manchi

Updated on: Feb 20, 2023 | 3:32 PM

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದು, ವಿವಿಧ ಪಕ್ಷಗಳು ನಾನಾ ರೀತಿಯಲ್ಲಿ ಪ್ರಚಾರ ನಡೆಸುತ್ತಿದೆ. ಅದರಂತೆ ಬಿಜೆಪಿ (BJP Karnataka) ಗೋಡೆ ಬರಹದ ಮೂಲಕ ಪ್ರಚಾರ ಆರಂಭಿಸಿದ್ದು, ವಿವಿಧ ಕಡೆಗಳಲ್ಲಿನ ಗೋಡೆ ಮೇಲೆ ನಾಯಕಯ ಫೋಟೋ ಸಹಿತ ಭರವಸೆಯ ಬರಹಗಳನ್ನು ಹಾಕಿತ್ತು. ಈ ನಡುವೆ ಮೈಸೂರು ಪಾಲಿಕೆ ಆಯುಕ್ತ​​ ಲಕ್ಷ್ಮೀಕಾಂತ್ (Lakshmikanth) ಅವರು ಗೋಡೆ ಬರಹ ತೆಗೆದುಹಾಕುವಂತೆ ಆದೇಶಿಸಿದ್ದಾರೆ. ಆದರೆ ಪಾಲಿಕೆ (Mysuru City Corporation) ಸಿಬ್ಬಂದಿ ಮಾತ್ರ ಸಂಪೂರ್ಣವಾಗಿ ಬಣ್ಣ ಹಚ್ಚುವ ಬದಲು ಬಿಜೆಪಿ ಚಿಹ್ನೆ, ಬಿಜೆಪಿ ನಾಯಕರ ಮುಖಕ್ಕೆ ಮಾತ್ರ ಬಣ್ಣ ಬಳಿದಿದ್ದಾರೆ.

ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಅಧಿಕಾರ ನಡೆಸುತ್ತಿದ್ದು, ಮೈಸೂರು ಮೇಯರ್ ಉಪ ಮೇಯರ್ ಎರಡು ಸ್ಥಾನ ಬಿಜೆಪಿಯದ್ದೇ ಆಗಿದೆ. ಮೇಯರ್ ಆಗಿ ಶಿವಕುಮಾರ್ ಉಪಮೇಯರ್ ಆಗಿ ರೂಪ ಅಧಿಕಾರ ನಡೆಸುತ್ತಿದ್ದಾರೆ. ಪಾಲಿಕೆ ಬಿಜೆಪಿ ಹಿಡಿತದಲ್ಲಿದ್ದರೂ ನಗರದ ವಿವಿಧ ಕಡೆಗಳಲ್ಲಿ ತಮ್ಮದೇ ಪಕ್ಷದ ಪ್ರಚಾರದ ಗೋಡೆ ಬರಹಗಳಿಗೆ ಮತ್ತು ತಮ್ಮ ನಾಯಕರ ಮುಖಕ್ಕೆ ಪಾಲಿಕೆಯ ಸಿಬ್ಬಂದಿ ಬಣ್ಣ ಬಳಿಯುತ್ತಿದ್ದಾರೆ. ನಗರದ ನಾರಾಯಣ ಶಾಸ್ತ್ರಿ ರಸ್ತೆ ಸೇರಿದಂತೆ ಹಲವೆಡೆ ಬಣ್ಣ ಹಚ್ಚುವ ಕಾರ್ಯಾಚರಣೆ ಆರಂಭವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Mon, 20 February 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us