AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಲಿತಾಂಶಕ್ಕೂ ಮುನ್ನ ಸಂಸದರಾದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ: ಆಹ್ವಾನ ಪತ್ರಿಕೆ ವೈರಲ್

ಈಗಾಗಲೇ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ. ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆದಿದ್ದರೆ, 2ನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಇದೀಗ ಫಲಿತಾಂಶಕ್ಕಾಗಿ ಜೂನ್ 4ರ ವರೆಗೆ ಕಾಯಬೇಕಿದ್ದು, ಅಭ್ಯರ್ಥಿಗಳು ಸೋಲು ಗೆಲುವಿನ ಲೆಕ್ಕಾಚಾರದಲ್ಲಿದ್ದಾರೆ. ಇದರ ಮಧ್ಯೆ ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿಯನ್ನು ಸಂಸದರನ್ನಾಗಿ ಮಾಡಲಾಗಿದೆ. ಇದೀಗ ಆಹ್ವಾನ ಪತ್ರಿಕೆ ವೈರಲ್ ಆಗಿದೆ,

ಫಲಿತಾಂಶಕ್ಕೂ ಮುನ್ನ ಸಂಸದರಾದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ: ಆಹ್ವಾನ ಪತ್ರಿಕೆ ವೈರಲ್
Follow us
ರಾಮು, ಆನೇಕಲ್​
| Updated By: ರಮೇಶ್ ಬಿ. ಜವಳಗೇರಾ

Updated on: May 09, 2024 | 4:56 PM

ಮೈಸೂರು, (ಮೇ 09): ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ(Mysuru Congress Candidate Lakshmana)  ಅವರನ್ನು ಸಂಸದರನ್ನಾಗಿ ಮಾಡಲಾಗಿದೆ. ಇದೇ ಏಪ್ರಿಲ್ 26ರಂದು ಮೊದಲ ಹಂತದಲ್ಲಿ ಚುನಾವಣೆ ನಡೆದಿದ್ದು, ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಆದ್ರೆ, ರಿಸಲ್ಟ್​ಗೂ ಮುನ್ನ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿದ್ದ ಲಕ್ಷ್ಮಣ ಅವರನ್ನು ಬೀಗರ ಊಟದ ಆಹ್ವಾನ ಪತ್ರಿಕೆಯಲ್ಲಿ (invitation Goes Viral) ಸಂಸದರು ಎಂದು ನಮೂದಿಸಲಾಗಿದ್ದು, ಇದೀಗ ಈ ಆಹ್ವಾನ ಪತ್ರಿಕೆ ವೈರಲ್ ಆಗಿದೆ.

ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆದಾರ ಮಗಳ ಮದುವೆ ಬೀಗರ ಔತಣ ಆಹ್ವಾನ ಪತ್ರಿಕೆಯಲ್ಲಿ ಲಕ್ಣ್ಮಣ್ ಅವರನ್ನು ಮೈಸೂರು ಕೊಡಗು ಸಂಸದ ಎಂದು ನಮೂದಿಸಲಾಗಿದೆ. ದಿನಾಂಕ 12/05/2024ರಂದು ಬೀಗರ ಔತಣ ಕೂಟ ಇದ್ದು, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಸೇರಿ ಹಲವರ ಹೆಸರು ಆಹ್ವಾನ ಪತ್ರಿಕೆಯಲ್ಲಿ ನಮೂದಿಸಲಾಗಿದೆ. ಅದರಂತೆ ಲಕ್ಷ್ಮಣ್ ಲೋಕಸಭಾ ಸದಸ್ಯರು ಎಂದು ನಮೂದು ಮಾಡಲಾಗಿದ್ದು, ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಇನ್ನು ಈ ಆಹ್ವಾನ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.