AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕೋರ್ಟ್‌ನಲ್ಲಿ ಬಾಂಬ್ ಸ್ಫೋಟ ಪ್ರಕರಣ; ಮೂವರು ಅಲ್‌ಖೈದಾ ಉಗ್ರರಿಗೆ ಶಿಕ್ಷೆ ಪ್ರಮಾಣ ಪ್ರಕಟ

Mysuru Court Bomb Blast Case: ಬೆಂಗಳೂರಿನ ಎನ್​ಐಎ (NIA) ವಿಶೇಷ ಕೋರ್ಟ್‌ನಿಂದ ಶಿಕ್ಷೆ ಪ್ರಕಟ ಮಾಡಲಾಗಿದೆ. ಮೈಸೂರು ಕೋರ್ಟ್ ಬಳಿ ಬಾಂಬ್ ಸ್ಪೋಟ ಪ್ರಕರಣದ ತೀರ್ಪು ನೀಡಲಾಗಿದ್ದು, ಶಿಕ್ಷೆಯ ಪ್ರಮಾಣವೂ ಪ್ರಕಟಿಸಲಾಗಿದೆ.

ಮೈಸೂರು ಕೋರ್ಟ್‌ನಲ್ಲಿ ಬಾಂಬ್ ಸ್ಫೋಟ ಪ್ರಕರಣ; ಮೂವರು ಅಲ್‌ಖೈದಾ ಉಗ್ರರಿಗೆ ಶಿಕ್ಷೆ ಪ್ರಮಾಣ ಪ್ರಕಟ
ಎನ್​ಐಎ
TV9 Web
| Updated By: ganapathi bhat|

Updated on:Oct 11, 2021 | 9:35 PM

Share

ಬೆಂಗಳೂರು: ಮೈಸೂರಿನ ಕೋರ್ಟ್‌ನಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅಲ್‌ಖೈದಾ ಉಗ್ರರಿಗೆ ಇಂದು (ಅಕ್ಟೋಬರ್ 11) ಶಿಕ್ಷೆ ಪ್ರಮಾಣ ಪ್ರಕಟವಾಗಿದೆ. ಬೆಂಗಳೂರಿನ ಎನ್​ಐಎ (NIA) ವಿಶೇಷ ಕೋರ್ಟ್‌ನಿಂದ ಶಿಕ್ಷೆ ಪ್ರಕಟ ಮಾಡಲಾಗಿದೆ. ಮೈಸೂರು ಕೋರ್ಟ್ ಬಳಿ ಬಾಂಬ್ ಸ್ಪೋಟ ಪ್ರಕರಣದ ತೀರ್ಪು ನೀಡಲಾಗಿದ್ದು, ಶಿಕ್ಷೆಯ ಪ್ರಮಾಣವೂ ಪ್ರಕಟಿಸಲಾಗಿದೆ.

ಮೂವರು ತಪ್ಪಿತಸ್ಥರೆಂದು ಎನ್ಐಎ ಕೋರ್ಟ್‌ ತೀರ್ಪು ನೀಡಿದೆ. ನೈನಾರ್ ಅಬ್ಬಾಸ್ ಅಲಿ, ಅಬ್ದುಲ್ ಕರೀಂ ಹಾಗೂ ದಾವೂದ್ ಸುಲೈಮಾನ್ ತಪ್ಪಿತಸ್ಥರೆಂದು ತೀರ್ಪು ನೀಡಲಾಗಿದೆ. 2016ರ ಆಗಸ್ಟ್ 6ರಂದು ಸ್ಫೋಟ ಘಟನೆ ನಡೆದಿತ್ತು. ಮೈಸೂರಿನ ಜಿಲ್ಲಾ ಕೋರ್ಟ್‌ನ ಶೌಚಾಲಯದಲ್ಲಿ ಸ್ಫೋಟವಾಗಿತ್ತು. ಅಪರಾಧಿಗಳು, ಅಡುಗೆ ಕುಕ್ಕರ್‌ನಲ್ಲಿ ಬಾಂಬ್ ಸ್ಫೋಟಿಸಿದ್ದರು.

ಪ್ರಕರಣದ ಆರೋಪಿ ನೈನಾರ್ ಅಬ್ಬಾಸ್ ಆಲಿಗೆ ಒಟ್ಟಾರೆ ಹತ್ತು ವರ್ಷ ಜೈಲು ಶಿಕ್ಷೆ ಹಾಗೂ 43 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ಕೊಡಲಾಗಿದೆ. ಸಮಸೂನ್ ಕರೀಮ್ ರಾಜಾಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಸಮಸೂನ್ ಕರೀಮ್ ರಾಜಾಗೆ 25 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಲಾಗಿದೆ. ಸುಲೈಮಾನ್ ಎಂಬಾತನಿಗೆ ಏಳು ವರ್ಷಗಳ ಜೈಲು ಶಿಕ್ಷೆ ಹಾಗೂ 38 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಲಾಗಿದೆ. ಅಕ್ಟೋಬರ್ 8 ರಂದೇ ಮೂವರು ಆರೋಪಿಗಳು ಅಪರಾಧಿಗಳೆಂದು ತೀರ್ಪು ನೀಡಲಾಗಿತ್ತು. ಎನ್​ಐಎ ವಿಶೇಷ ಕೋರ್ಟ್ ತೀರ್ಪು ನೀಡಿತ್ತು. ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಿದೆ.

ಇದನ್ನೂ ಓದಿ: ಮೈಸೂರು ಕೋರ್ಟ್​ನಲ್ಲಿ 2016ರಲ್ಲಿ ಸ್ಪೋಟ ಪ್ರಕರಣ; ಮೂವರು ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಪಿತ್ತ ಕೋರ್ಟ್

ಇದನ್ನೂ ಓದಿ: ಮೈಸೂರು ವಿವಿಯಲ್ಲಿ ಗೋಲ್ಡ್ ಮೆಡಲ್ ಪಡೆದ ಗೃಹಿಣಿ ಅನುಮಾನಾಸ್ಪದ ಸಾವು!

Published On - 9:33 pm, Mon, 11 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ