AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಪಿಎಸ್​ಐ ಪುತ್ರನ ವ್ಹೀಲಿಂಗ್​ ಹುಚ್ಚಾಟಕ್ಕೆ ವೃದ್ಧ ಬಲಿ, ಯುವಕನನ್ನು ಬಂಧಿಸಿದ ಪೊಲೀಸರು

ಮೈಸೂರಿನಲ್ಲಿ ಮಹಿಳಾ ಪಿಎಸ್​ಐ ಪುತ್ರನ ವ್ಹೀಲಿಂಗ್ ಹುಚ್ಚಾಟಕ್ಕೆ ಗಂಭೀರವಾಗಿ ಗಾಯಗೊಂಡ ವೃದ್ಧ ಕೊನೆಯುಸಿರೆಳೆದಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿ ಸೈಯ್ಯದ್ ಐಮಾನ್​ನನ್ನು ಬಂಧಿಸಿದ್ದಾರೆ. ಈತನ ವಿರುದ್ಧ ಕಳ್ಳತನ ಆರೋಪವೂ ಇದ್ದು, ಇತ್ತೀಚೆಗಷ್ಟೇ ವ್ಹೀಲಿಂಗ್ ಮಾಡಿದ್ದಕ್ಕೆ ಆತನನ್ನು ವಶಕ್ಕೆ ಪಡೆದ ಪೊಲೀಸರು ದಂಡ ವಿಧಿಸಿ ಕಳುಹಿಸಿದ್ದರು.

ಮೈಸೂರು: ಪಿಎಸ್​ಐ ಪುತ್ರನ ವ್ಹೀಲಿಂಗ್​ ಹುಚ್ಚಾಟಕ್ಕೆ ವೃದ್ಧ ಬಲಿ, ಯುವಕನನ್ನು ಬಂಧಿಸಿದ ಪೊಲೀಸರು
ಪಿಎಸ್​ಐ ಪುತ್ರನ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧ ಸಾವು
ದಿಲೀಪ್​, ಚೌಡಹಳ್ಳಿ
| Updated By: Rakesh Nayak Manchi|

Updated on: Sep 17, 2023 | 10:43 AM

Share

ಮೈಸೂರು, ಸೆ.17: ಮಹಿಳಾ ಪಿಎಸ್​ಐ ಪುತ್ರನ ದ್ವಿಚಕ್ರ ವಾಹನ ವ್ಹೀಲಿಂಗ್ (Bike Wheeling) ಹುಚ್ಚಾಟಕ್ಕೆ ವೃದ್ಧರೊಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಿಮ್ಮಾವು ಬಳಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಸೈಯ್ಯದ್ ಐಮಾನ್​ನನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ.

ನಂಬರ್ ಪ್ಲೇಟ್ ಇಲ್ಲದ ಬೈಕ್​ನಲ್ಲಿ ವ್ಹೀಲಿಂಗ್ ಮಾಡಿದ್ದ ಸೈಯ್ಯದ್, ಉದಯಗಿರಿ ನಿವಾಸಿ ವೃದ್ಧ ಗುರುಸ್ವಾಮಿ ಅವರಿಗೆ ಡಿಕ್ಕಿ ಹೊಡೆದಿದ್ದನು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಗುರುಸ್ವಾಮಿ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆ ನಂತರ ಸ್ಥಳದಿಂದ ಪರಾರಿಯಾಗಲು ಯತ್ನಿಸಿದಾಗ ಹಿಡಿದ ಸ್ಥಳೀಯರು ವಿಚಾರಣೆ ನಡೆಸಿದಾ ತಾನು ನಂಜನಗೂಡು ಸಂಚಾರಿ ಪೊಲೀಸ್ ಠಾಣೆ ಪಿಎಸ್​ಐ ಯಾಸ್ಮಿನ್ ತಾಜ್ ಅವರ ಪುತ್ರ ಎಂದು ಹೇಳಿದ್ದಾನೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದರಿಂದ ಸೈಯ್ಯದ್​ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಕಾರು, ಬೈಕ್​ ನಡುವೆ ಡಿಕ್ಕಿ; ಓರ್ವ ಯುವತಿ ಸಾವು; ಅಪಘಾತ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ

ಇತ್ತ ತಂದೆಯನ್ನು ಕಳೆದುಕೊಂಡ ಗುರುಸ್ವಾಮಿ ಪುತ್ರ ಮಹದೇವಸ್ವಾಮಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ವೀಲ್ಹಿಂಗ್ ಮಾಡಿ ಡಿಕ್ಕಿ ಹೊಡೆದು ನನ್ನ ತಂದೆಯನ್ನ ಸಾಯಿಸಲಾಗಿದೆ. ಅಪಾಯಕಾರಿಯಾಗಿ ಬೈಕ್ ಓಡಿಸಿ ಡಿಕ್ಕಿ ಹೊಡೆದು ಸಾಯಿಸಲಾಗಿದೆ ಎಂದು‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖಾ ಭಾಗವಾಗಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಸೈಯ್ಯದ್​ ವ್ಹೀಲಿಂಗ್ ಮಾಡಿದ ಬಜಾಜ್ ಪ್ಲಾಟಿನಾ ಬೈಕ್ ಪತ್ತೆಯಾಗಿದೆ. ಕೂಡಲೇ ನಂಬರ್ ಪ್ಲೇಟ್ ಇಲ್ಲದ ಬೈಕ್ ವಶಕ್ಕೆ ಪಡೆದ ನಂಜನಗೂಡು ಠಾಣಾ ಪೊಲೀಸರು, ತಡರಾತ್ರಿ ಸೈಯ್ಯದ್​ನನ್ನು ಬಂಧಿಸಿದ್ದಾರೆ.

ಈ ಹಿಂದೆ ಕೂಡ ಸೈಯ್ಯದ್ ಐಮಾನ್ ಅಪಾಯಕಾರಿ ವ್ಹೀಲಿಂಗ್ ಮಾಡಿದ್ದನು. ಈ ಸಂಬಂಧ ಖುದ್ದು ಪೊಲೀಸರು ಆತನನ್ನು ವಶಕ್ಕೆ ಪಡೆದು ದಂಡ ವಿಧಿಸಿ ಕಳುಹಿಸಿದ್ದರು. ಅಷ್ಟೇ ಅಲ್ಲದೆ, ಈತನ ವಿರುದ್ಧ ಕಳ್ಳತನ ಆರೋಪವೂ ಇದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ