AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara: ದಸರಾ ದೀಪಾಲಂಕಾರ 9 ದಿನ ಮುಂದುವರಿಕೆ: ಬಸವರಾಜ ಬೊಮ್ಮಾಯಿ ಅಧಿಕೃತ ಘೋಷಣೆ

Mysuru Dasara 2021: ಸಿಎಂ ಬೊಮ್ಮಾಯಿ ರಾಜ್ಯದ ಜನತೆಗೆ ನಾಡ ಹಬ್ಬ ದಸರಾದ ಶುಭಾಶಯ ಕೋರಿದ್ದಾರೆ. ರಾಜ್ಯ ಮತ್ತಷ್ಟು ಸುಭಿಕ್ಷವಾಗಲಿ. ತಾಯಿ ಚಾಮುಂಡೇಶ್ವರಿ ನಾಡಿನ ಜನತೆಗೆ ಹರಸಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ನಾಡಿಗೆ ಶುಭಹಾರೈಸಿದ್ದಾರೆ.

Mysuru Dasara: ದಸರಾ ದೀಪಾಲಂಕಾರ 9 ದಿನ ಮುಂದುವರಿಕೆ: ಬಸವರಾಜ ಬೊಮ್ಮಾಯಿ ಅಧಿಕೃತ ಘೋಷಣೆ
ಮೈಸೂರು ಅರಮನೆ ದೀಪಾಲಂಕಾರ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 16, 2021 | 10:29 PM

Share

ಮೈಸೂರು: ವಿಜಯ ದಶಮಿ ದಿನವಾದ ಇಂದಿನ ಬಳಿಕವೂ ಮುಂದಿನ 9 ದಿನ ದಸರಾ ದೀಪಾಲಂಕಾರ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ​​ ಬೊಮ್ಮಾಯಿ ಇಂದು (ಅಕ್ಟೋಬರ್ 15) ಅಧಿಕೃತ ಘೋಷಣೆ ಮಾಡಿದ್ದಾರೆ. ಸುತ್ತೂರು ಶಾಖಾ ಮಠದಲ್ಲಿ ಸಿಎಂ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ದಸರಾ ದೀಪಾಲಂಕಾರ ಮುಂದುವರಿಸಲು ಜನರ ಬೇಡಿಕೆ ಇದೆ. ಹಾಗಾಗಿ ವಿದ್ಯುತ್ ದೀಪಾಲಂಕಾರ ಮುಂದುವರಿಸಲಾಗುವುದು. ಇಂದಿನಿಂದ 9 ದಿನ ದೀಪಾಲಂಕಾರ ಮುಂದುವರಿಯಲಿದೆ ಎಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಬೊಮ್ಮಾಯಿ ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ರಾಜ್ಯದ ಜನತೆಗೆ ನಾಡ ಹಬ್ಬ ದಸರಾದ ಶುಭಾಶಯ ಕೋರಿದ್ದಾರೆ. ರಾಜ್ಯ ಮತ್ತಷ್ಟು ಸುಭಿಕ್ಷವಾಗಲಿ. ತಾಯಿ ಚಾಮುಂಡೇಶ್ವರಿ ನಾಡಿನ ಜನತೆಗೆ ಹರಸಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ನಾಡಿಗೆ ಶುಭಹಾರೈಸಿದ್ದಾರೆ. ಸುತ್ತೂರು ಶಾಖಾ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ ಕೊಟ್ಟಿದ್ದಾರೆ. ಮಠದಲ್ಲಿ ಸಿಎಂ ಬೊಮ್ಮಾಯಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಗಿದೆ. ಮಠದ ಆವರಣದಲ್ಲಿ ಚಾಮುಂಡೇಶ್ವರಿ ದೇವಿಗೆ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿದ್ದಾರೆ.

ದಸರಾ ಗಜಪಡೆಗೆ ಬಣ್ಣದ ಸಿಂಗಾರ ಕೆಲಸ ಪೂರ್ಣ ದಸರಾ ಗಜಪಡೆಗೆ ಬಣ್ಣದ ಸಿಂಗಾರ ಕೆಲಸ ಪೂರ್ಣವಾಗಿದೆ. ಮಧ್ಯಾಹ್ನ 2.30 ರವರೆಗೆ ದಸರಾ ಗಜಪಡೆ ವಿಶ್ರಾಂತಿ ಪಡೆಯುತ್ತಿದೆ. 2.30 ನಂತರ ಅಭಿಮನ್ಯುಗೆ ಅಂಬಾರಿ ಕಟ್ಟುವ ಕೆಲಸ ನಡೆಯುತ್ತಿದೆ. ಬಳಿಕ ಅಭಿಮನ್ಯು ಆನೆ ಅಂಬಾರಿ ಹೊರಲಿದೆ. ಮೆರವಣಿಗೆಯಲ್ಲಿ ಅಭಿಮನ್ಯುಗೆ ಗಜಪಡೆ ಸಾಥ್ ನೀಡಲಿದೆ. ಅಭಿಮನ್ಯು ಆನೆಗೆ ಚಿನ್ನದ ಅಂಬಾರಿ ಕಟ್ಟಲು ಒಂದು ಗಂಟೆ ಬೇಕಾಗುತ್ತದೆ. ಹೀಗಾಗಿ 2.30 ರಿಂದ ಅಂಬಾರಿ ಕಟ್ಟುವ ಕೆಲಸ ಶುರುವಾಗಿದೆ. ಅಭಿಮನ್ಯುಗೆ ಈ ಬಾರಿ 5 ಆನೆಗಳು ಸಾಥ್ ನೀಡಲಿವೆ. ಅಭಿಮನ್ಯು ಅಕ್ಕಪಕ್ಕ ಕಾವೇರಿ, ಚೈತ್ರಾ ಆನೆಗಳು ಹೆಜ್ಜೆ ಹಾಕಲಿದೆ. ನಿಶಾನೆ ಆನೆಯಾಗಿ ಧನಂಜಯ ಇರಲಿದೆ. ನೌಪತ್ ಆನೆಯಾಗಿ ಗೋಪಾಲಸ್ವಾಮಿ ಹಾಗೂ ಸಾಲಾನೆಯಾಗಿ ಅಶ್ವತ್ಥಾಮ ಆನೆ ಹೆಜ್ಜೆ ಹಾಕಲಿದೆ.

ಇದನ್ನೂ ಓದಿ: ಮೈಸೂರು ದಸರಾ 2021: ಅಂಬಾರಿಯಲ್ಲಿ ರಾರಾಜಿಸುವ ಮಹಿಷಮರ್ಧಿನಿ ಮೂರ್ತಿ ಹೇಗಿದೆ? ಇಲ್ಲಿದೆ ಕುತೂಹಲಕರ ಮಾಹಿತಿ

ಇದನ್ನೂ ಓದಿ: ಕರ್ನಾಟಕದಲ್ಲಿ ದಸರಾ ಬಳಿಕ ಕೊರೊನಾ ನಿಯಮ ಸಡಿಲಿಕೆ ಬಗ್ಗೆ ನಿರ್ಧಾರ; ಸಿಎಂ ಬಸವರಾಜ ಬೊಮ್ಮಾಯಿ

Published On - 2:22 pm, Fri, 15 October 21

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್