AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಜಂಬೂ ಸವಾರಿಗೆ ಆನೆಗಳ ಆಯ್ಕೆ; ವಿವಿಧ ಕ್ಯಾಂಪ್​ಗಳಿಂದ 14 ಆನೆಗಳ ಪಟ್ಟಿ ಮಾಡಿದ ಅರಣ್ಯಾಧಿಕಾರಿಗಳು

Mysuru Dasara 2021: ಕಳೆದ ವರ್ಷ 5 ಆನೆ ಕರೆಸಿಕೊಳ್ಳಲಾಗಿತ್ತು. ಈ ಬಾರಿ ಆನೆಗಳ ಆರೋಗ್ಯದ ಹಾಗೂ ಮುಂಜಾಗ್ರತ ದೃಷ್ಟಿಯಿಂದ ಎರಡು ಆನೆಗಳನ್ನ ಹೆಚ್ಚುವರಿಯಾಗಿ ಕರೆಸಿಕೊಳ್ಳಲು ನಿರ್ಧಾರ ಮಾಡಲಾಗಿದೆ.

ದಸರಾ ಜಂಬೂ ಸವಾರಿಗೆ ಆನೆಗಳ ಆಯ್ಕೆ; ವಿವಿಧ ಕ್ಯಾಂಪ್​ಗಳಿಂದ 14 ಆನೆಗಳ ಪಟ್ಟಿ ಮಾಡಿದ ಅರಣ್ಯಾಧಿಕಾರಿಗಳು
ಮೈಸೂರು ದಸರಾ ಆನೆಗಳು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Aug 24, 2021 | 3:29 PM

Share

ಮೈಸೂರು: ದಸರಾ ಜಂಬೂ ಸವಾರಿಗೆ ಆನೆಗಳ ಆಯ್ಕೆ ಮಾಡಲಾಗಿದೆ. ಅರಣ್ಯಾಧಿಕಾರಿಗಳು 14 ಆನೆಗಳನ್ನು ಆಯ್ಕೆ ಮಾಡಿದ್ದಾರೆ. ಹೈಪವರ್ ಕಮಿಟಿ ಸಭೆಗೂ ಮುನ್ನ ಆನೆಗಳ ಆಯ್ಕೆ ಮಾಡಲಾಗಿದೆ. ಡಿಸಿಎಫ್ ಕರಿಕಾಳ‌ನ್ ನೇತೃತ್ವದಲ್ಲಿ ಆನೆಗಳ ಆಯ್ಕೆ ನಡೆದಿದ್ದು, ಬೆಂಗಳೂರಿನ‌ ಮುಖ್ಯ ಅರಣ್ಯ ಕಚೇರಿಗೆ ಆನೆಗಳ ಪಟ್ಟಿ ರವಾನೆ ಆಗಿದೆ. ಸರಳ ದಸರಾ ಮಾಡಿದರೆ 7 ಆನೆ ಕರೆಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ಇಲ್ಲವಾದರೆ 14 ಆನೆಗಳನ್ನೂ ಬಳಕೆ ಮಾಡಲಾಗುವ ಬಗ್ಗೆ ತಿಳಿದುಬಂದಿದೆ.

ವಿಶ್ವ ವಿಖ್ಯಾತ ದಸರಾ ಮಹೋತ್ಸವ 2021ರ ಜಂಬೂ ಸವಾರಿಗೆ ಆನೆಗಳ ಆಯ್ಕೆ ಪ್ರಕ್ರಿಯೆ ನಡೆದಿದೆ. ಸದ್ಯ ವಿವಿಧ ಕ್ಯಾಂಪ್​ಗಳಿಂದ 14 ಆನೆಗಳನ್ನ ಪಟ್ಟಿ ಮಾಡಿ ಬೆಂಗಳೂರಿನ‌ ಮುಖ್ಯ ಅರಣ್ಯ ಕಚೇರಿಗೆ ಕಳುಹಿಸಲಾಗಿದೆ. ಸರಳ ದಸರಾ ಮಾಡಿದರೆ 7 ಆನೆಗಳನ್ನ ಕರೆಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ಆನೆ ಕಾಡು, ದುಬಾರೆ, ಮತ್ತಿಗೋಡು, ಬಂಡೀಪುರ ಆನೆ ಶಿಬಿರದಿಂದ ಆನೆಗಳ ಆಯ್ಕೆ ಮಾಡಲಾಗಿದೆ. ಸದ್ಯ ವಿಕ್ರಮ್, ವಿಜಯಾ, ಅಭಿಮನ್ಯು, ಗೋಪಾಲಸ್ವಾಮಿ, ಭೀಮಾ, ಮಹೇಂದ್ರ, ಧನಂಜಯ, ಪ್ರಶಾಂತ್, ಗೋಪಿ, ಹರ್ಷ, ಕಾವೇರಿ, ಲಕ್ಷ್ಮಣ, ಚೈತ್ರಾ, ಮಹಾರಾಷ್ಟ್ರ ಭೀಮಾ ಆನೆಗಳನ್ನು ಆಯ್ಕೆ ಮಾಡಲಾಗಿದೆ.

ಸರಳ ದಸರಾವಾದರೆ 14 ಆನೆಗಳಲ್ಲಿ 7 ಆನೆಗಳು ನಾಡಿಗೆ ಕರೆಸಿಕೊಳ್ಳಲು ಚಿಂತನೆ‌ ಇದೆ. ಕಳೆದ ವರ್ಷ 5 ಆನೆ ಕರೆಸಿಕೊಳ್ಳಲಾಗಿತ್ತು. ಈ ಬಾರಿ ಆನೆಗಳ ಆರೋಗ್ಯದ ಹಾಗೂ ಮುಂಜಾಗ್ರತ ದೃಷ್ಟಿಯಿಂದ ಎರಡು ಆನೆಗಳನ್ನ ಹೆಚ್ಚುವರಿಯಾಗಿ ಕರೆಸಿಕೊಳ್ಳಲು ನಿರ್ಧಾರ ಮಾಡಲಾಗಿದೆ.

ಈ ವರ್ಷ  ಮೈಸೂರು ದಸರಾ ಆಚರಿಸುವುದಂತೂ ನಿಶ್ಚಿತ. ಆದರೆ ಕಳೆದ ಬಾರಿಯಂತೆ ಸರಳವಾಗಿ ಮಾಡಬೇಕೋ ಅಥವಾ ಇನ್ನೂ ಬೇರೆ ಮಾರ್ಪಾಡು ಮಾಡಿಕೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಚರ್ಚೆ ನಡೆಸುತ್ತೇನೆ ಎಂದು  ಮೈಸೂರಿನಲ್ಲಿ ಸಚಿವ ಎಸ್. ಟಿ.ಸೋಮಶೇಖರ್ ಆಗಸ್ಟ್ 7 ರಂದು ತಿಳಿಸಿದ್ದರು. ಕೊವಿಡ್ ಹೆಚ್ಚಾಗಲಿದೆಯೋ ಕಡಿಮೆ ಆಗಲಿದೆಯೇ ನೋಡುತ್ತೇವೆ. ಹೈ ಪವರ್ ಕಮಿಟಿಯಲ್ಲಿ ಮೈಸೂರು ದಸರಾ ಬಗ್ಗೆ ಚರ್ಚೆ ಮಾಡುತ್ತೇವೆ. ಕೊರೊನಾ ಸ್ಥಿತಿಗತಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಆನಂತರ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಸ್ಟ್ 9ರಂದು ಹೇಳಿದ್ದರು.

ಇದನ್ನೂ ಓದಿ: ಮೈಸೂರು ದಸರಾ ಆಚರಣೆ, ಕೊವಿಡ್ 3ನೇ ಅಲೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿಯ ವಿವರ ಇಲ್ಲಿದೆ

ಈವರ್ಷ ಮೈಸೂರು ದಸರಾ ಆಚರಣೆ ಖಚಿತ: ಸಚಿವ ಎಸ್ ಟಿ ಸೋಮಶೇಖರ್

Published On - 3:20 pm, Tue, 24 August 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ