AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SM Krishna: ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಆಯ್ಕೆ

ಮೈಸೂರು ದಸರಾ 2021: ದಸರಾ ಸಂಬಂಧ ಸಭೆಯಲ್ಲಿ ಕೃಷ್ಣರನ್ನು ಆಯ್ಕೆ ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

SM Krishna: ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಆಯ್ಕೆ
ಎಸ್.ಎಂ ಕೃಷ್ಣ
TV9 Web
| Edited By: |

Updated on:Sep 28, 2021 | 9:40 PM

Share

ಮೈಸೂರು: ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಯ್ಕೆ ಆಗಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಎಸ್.ಎಂ.ಕೃಷ್ಣ ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಕಾರ್ಯ ಮಾಡಿದ್ದರು. ಅವರು ಮುಖ್ಯಮಂತ್ರಿ, ಕೇಂದ್ರ ಸಚಿವರಾಗಿದ್ದಾಗ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಹಾಗಾಗಿ ಎಸ್.ಎಂ. ಕೃಷ್ಣರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಲಾಗಿದೆ. ದಸರಾ ಸಂಬಂಧ ಸಭೆಯಲ್ಲಿ ಕೃಷ್ಣರನ್ನು ಆಯ್ಕೆ ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಒಂದು ಲೆಕ್ಕಾಚಾರದಂತೆ ಇದರಿಂದ ಒಕ್ಕಲಿಗ ಸಮುದಾಯಕ್ಕೆ ಒಂದು ಸಂದೇಶ ನೀಡಿದಂತೆ ಆಗಲಿದೆ ಎಂದು ಹೇಳಲಾಗಿದೆ. ಈ ರಾಜಕೀಯ ಲೆಕ್ಕಾಚಾರ ಸಫಲವಾಗುತ್ತೋ ಇಲ್ಲವೋ ಕಾದುನೋಡಬೇಕಿದೆ.

ಮುಂದಿನ ತಿಂಗಳು ನಡೆಯಲಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2021 ಅಂಗವಾಗಿ ಪಾರಂಪರಿಕ ಕಾರ್ಯಕ್ರಮಗಳು ನಿಗದಿಯಾಗಿವೆ. ಅರಮನೆಯಲ್ಲಿ ಪಾರಂಪರಿಕ ದಸರಾ ಕಾರ್ಯಕ್ರಮ ನಿಗದಿಯಾಗಿದ್ದು, ಕೊವಿಡ್ ಹಿನ್ನೆಲೆ ಈ ಬಾರಿಯೂ ಜಟ್ಟಿ‌ ಕಾಳಗಕ್ಕೆ ಬ್ರೇಕ್ ಹಾಕಲಾಗಿದೆ. ಅಕ್ಟೋಬರ್ 1ರಂದು ರತ್ನ ಸಿಂಹಾಸನ ಜೋಡಣೆ ಮಾಡಲಾಗುವುದು. ಹಾಗಾಗಿ ಅ. 1ರಂದು ಅರಮನೆಗೆ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ. ಅರಮನೆ ಕಾರ್ಯಕ್ರಮದ ಪಟ್ಟಿ ಟಿವಿ9ಗೆ ಲಭ್ಯವಾಗಿದೆ.

ಅಕ್ಟೋಬರ್ 7 ರಿಂದ 14ರವರೆಗೂ ಅರಮನೆಯಲ್ಲಿ ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ. ಅಕ್ಟೋಬರ್ 7ರಂದು ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದೆ. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನ ಏರಿ ಔಪಚಾರಿಕವಾಗಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.

ಅಕ್ಟೋಬರ್ 14ರಂದು ಅರಮನೆಯಲ್ಲಿ ಆಯುಧ ಪೂಜೆ ಏರ್ಪಡಿಸಲಾಗಿದೆ. ಬೆಳಗ್ಗೆ 5.30ರಿಂದ ಪೂಜಾ ವಿಧಿ ವಿಧಾನ ಆರಂಭಗೊಳ್ಳಲಿದೆ. 7.45ಕ್ಕೆ ರಾಜರ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆ ಮಾಡಲಾಗುವುದು. ಪೂಜೆ ಸಲ್ಲಿಸಿ ಕೋಡಿ ಸೋಮೇಶ್ವರ ದೇಗುಲದಿಂದ ಅರಮನೆ ಕಲ್ಯಾಣ ಮಂಟಪಕ್ಕೆ ತರಲಾಗುವುದು. 11.02 ರಿಂದ 11.22ರ ಶುಭ ಮುಹೂರ್ತದಲ್ಲಿ ಆಯುಧಗಳಿಗೆ ಪೂಜೆ ನೆರವೇರಿಸಲಾಗುವುದು. ಯದುವೀರ ಕೃಷದತ್ತ ಚಾಮರಾಜ ಒಡೆಯರ್‌ರಿಂದ ಪೂಜೆ ನಡೆಯಲಿದೆ.

ಅಕ್ಟೋಬರ್ 15ರಂದು ಅರಮನೆಯಲ್ಲಿ ವಿಜಯ ದಶಮಿ ಆಚರಿಸಲಾಗುವುದು. 5.45ಕ್ಕೆ ಆನೆ, ಕುದುರೆ, ಹಸುಗಳ ಆಗಮನವಾಗಲಿದೆ. 6.13 ರಿಂದ 6.32ರವರೆಗೆ ಪೂಜಾ ಕೈಂಕರ್ಯ ನಡೆಯಲಿದೆ. 7.20ರಿಂದ 7.40ರವರೆಗೆ ವಿಜಯದಶಮಿ‌ ಮೆರವಣಿಗೆ ನಡೆಯಲಿದೆ. ಅರಮನೆ ಮುಖ್ಯದ್ವಾರದಿಂದ ಅರಮನೆ ಆವರಣ ಭುವನೇಶ್ವರಿ ದೇಗುಲದವರೆಗೂ ಮೆರವಣಿಗೆ ನಡೆಯಲಿದೆ. ದೇಗುಲದ ಬನ್ನಿ ಮರಕ್ಕೆ ಯದುವೀರ ಕೃಷದತ್ತ ಚಾಮರಾಜ ಒಡೆಯರ್‌ ಪೂಜೆ ನಡೆಸಲಿದ್ದಾರೆ. ಪೂಜೆಯ ನಂತರ ಮೆರವಣಿಗೆ ಮೂಲಕ ಅರಮನೆಗೆ ವಾಪಸ್ಸು ಆಗಲಿದ್ದಾರೆ.

ಅಕ್ಟೋಬರ್ 31ರಂದು ಸಿಂಹಾಸನ ವಿಂಗಡಿಸಿ ಖಜಾನೆಗೆ ವಾಪಸ್ ರವಾನೆ ಮಾಡಲಾಗುವುದು. ಅಂದೂ ಸಹ ಮಧ್ಯಾಹ್ನ 1.30ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧವಿರಲಿದೆ.

ಇದನ್ನೂ ಓದಿ: ದಸರಾ ಸಂಭ್ರಮಕ್ಕೂ ಮುನ್ನ ಕೊವಿಡ್ ಎಚ್ಚರಿಕೆಯ ಸಂದೇಶ ರವಾನಿಸಿದ ಕೇಂದ್ರ ಗೃಹ ಕಾರ್ಯದರ್ಶಿ

ಇದನ್ನೂ ಓದಿ: Mysuru Dasara 2021: ದಸರೆಯಲ್ಲಿ ‘ಗಜ ಪ್ರೇಮ’! ಆನೆಗಳ ಪ್ರೀತಿಗೆ ಸಾಕ್ಷಿಯಾಯ್ತು ಮೈಸೂರು ಅರಮನೆ

Published On - 6:34 pm, Tue, 28 September 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ