AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dasara 2021: ಮೈಸೂರು ದಸರಾ ಎಷ್ಟೊಂದು ಸುಂದರಾ..ಇಲ್ಲಿದೆ 7 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿ

Mysuru Dasara 2021: ಅಕ್ಟೋಬರ್ 7 ಗುರುವಾರ ಸಂಜೆ ಮುಖ್ಯಮಂತ್ರಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭವೂ ಅಂದೇ ಜರುಗಲಿದೆ.

Dasara 2021: ಮೈಸೂರು ದಸರಾ ಎಷ್ಟೊಂದು ಸುಂದರಾ..ಇಲ್ಲಿದೆ 7 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿ
ದಸರಾ
TV9 Web
| Edited By: |

Updated on: Oct 01, 2021 | 2:30 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2021 ಕ್ಕೆ 7 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ ಸಿದ್ಧಗೊಂಡಿದೆ. ಅರಮನೆ ಮುಂಭಾಗದಲ್ಲಿ 7 ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಅಲ್ಲದೇ ಈಬಾರಿ ಹೊಸದಾಗಿ ನಂಜನಗೂಡಿನ ದೇವಾಲಯದ ಆವರಣದಲ್ಲಿಯೂ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅದೇ ರೀತಿ ಕಲಾಮಂದಿರದಲ್ಲಿ ಒಂದು ದಿನ ನಡೆಯಲಿರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 7 ಗುರುವಾರ ಸಂಜೆ ಮುಖ್ಯಮಂತ್ರಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭವೂ ಅಂದೇ ಜರುಗಲಿದೆ.

ಅರಮನೆ ಮುಂಭಾಗದಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಪಟ್ಟಿ ಅಕ್ಟೋಬರ್ 7ರಂದು ರಾತ್ರಿ 7:30ಕ್ಕೆ ಬೆಂಗಳೂರು ಪ್ರಭಾತ್ ಕಲಾವಿದರಿಂದ ಕರ್ನಾಟಕ ವೈಭವ ನೃತ್ಯ ರೂಪಕ.

ಅಕ್ಟೋಬರ್ 8ರಂದು ಜನಪದ ಕಾವ್ಯ ಗಾಯನ, ವಯೊಲಿನ್ ಕನ್ನಡ ಡಿಂಡಿಮ ಕಾರ್ಯಕ್ರಮ: ಶಿವಮೊಗ್ಗ ಹಾಗೂ ಮಳವಳ್ಳಿ ಕಲಾವಿದರಿಗೆ ಅವಕಾಶ.

ಅಕ್ಟೋಬರ್ 9ರಂದು ನಾದಬ್ರಹ್ಮ ಹಂಸಲೇಖರಿಂದ ದೇಶಿ ಸಂಸ್ಕೃತಿ ಹಬ್ಬ. ಮೈಸೂರು ಕಲಾವಿದರಿಂದ ಸಂಗೀತ ದರ್ಬಾರ್.

ಅಕ್ಟೋಬರ್ 10ರಂದು ಮಿಶ್ರವಾದ್ಯ ಗಾಯನ, ಗಜಲ್ ಹಾಗೂ ಮಧುರ ಮಧುರವೀ ಮಂಜುಳಗಾನ ಕಾರ್ಯಕ್ರಮ. ಬೆಂಗಳೂರು, ಮೈಸೂರು ಹಾಗೂ ತೀರ್ಥಹಳ್ಳಿ ಕಲಾವಿದರಿಂದ ಕಾರ್ಯಕ್ರಮಗಳು.

ಅಕ್ಟೋಬರ್ 11ರಂದು ಪ್ರತಿಷ್ಠಿತ ಪೊಲೀಸ್ ಬ್ಯಾಂಡ್ ವಾದ್ಯ. ಬಾಗಲಕೋಟೆ ಹಾಗೂ ರಾಯಚೂರು ಕಲಾವಿದರಿಂದ ನೃತ್ಯರೂಪಕ ಹಾಗೂ ದಾಸವಾಣಿ.

ಅಕ್ಟೋಬರ್ 12ರಂದು ಕಾರ್ಯಕ್ರಮ ನಡೆಸಿಕೊಡಲಿರುವ ಅದಿತಿ ಪ್ರಹ್ಲಾದ್. ಪಂಡಿತ್ ಪ್ರವೀಣ್ ಗೋಡ್ಖಿಂಡಿ ಮತ್ತು ಷಡಜ್ ಗೋಡ್ಖಿಂಡಿಯಿಂದ ಕೊಳಲುವಾದನ ಜುಗಲ್ ಬಂದಿ. ಮುದ್ದುಮೋಹನ್ ತಂಡದಿಂದ ಹಿಂದೂಸ್ತಾನಿ ಸಂಗೀತ.

ಅಕ್ಟೋಬರ್ 13ರಂದು ಬಿ.ಜಯಶ್ರೀ ತಂಡದಿಂದ ರಂಗಗೀತೆಗಳು. ಶ್ರೀಧರ್ ಜೈನ್ ತಂಡದಿಂದ ನೃತ್ಯರೂಪಕ. ಪಂಡಿತ್ ಜಯತೀರ್ಥ ಮೇವುಂಡಿಯಿಂದ ಹಿಂದೂಸ್ತಾನಿ ಗಾಯನ.

ಇದನ್ನೂ ಓದಿ: 

SM Krishna: ಮೈಸೂರು ದಸರಾ ಉದ್ಘಾಟನೆಗೆ ಆಮಂತ್ರಿಸಿದ ಹಿನ್ನೆಲೆ; ಪತ್ರದ ಮುಖೇನ ಧನ್ಯವಾದ ತಿಳಿಸಿದ ಎಸ್.ಎಂ ಕೃಷ್ಣ

ಕಳೆಗಟ್ಟಿದ ಅರಮನೆ ನಗರಿ: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸಜ್ಜು; ಅಂಬಾರಿ ಕಟ್ಟಿ ತಾಲೀಮು, ಮಾವುತರಿಗೆ ಉಪಹಾರ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್