Dasara 2021: ಮೈಸೂರು ದಸರಾ ಎಷ್ಟೊಂದು ಸುಂದರಾ..ಇಲ್ಲಿದೆ 7 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿ

Mysuru Dasara 2021: ಅಕ್ಟೋಬರ್ 7 ಗುರುವಾರ ಸಂಜೆ ಮುಖ್ಯಮಂತ್ರಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭವೂ ಅಂದೇ ಜರುಗಲಿದೆ.

Dasara 2021: ಮೈಸೂರು ದಸರಾ ಎಷ್ಟೊಂದು ಸುಂದರಾ..ಇಲ್ಲಿದೆ 7 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿ
ದಸರಾ
Follow us
| Updated By: guruganesh bhat

Updated on: Oct 01, 2021 | 2:30 PM

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2021 ಕ್ಕೆ 7 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ ಸಿದ್ಧಗೊಂಡಿದೆ. ಅರಮನೆ ಮುಂಭಾಗದಲ್ಲಿ 7 ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಅಲ್ಲದೇ ಈಬಾರಿ ಹೊಸದಾಗಿ ನಂಜನಗೂಡಿನ ದೇವಾಲಯದ ಆವರಣದಲ್ಲಿಯೂ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅದೇ ರೀತಿ ಕಲಾಮಂದಿರದಲ್ಲಿ ಒಂದು ದಿನ ನಡೆಯಲಿರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 7 ಗುರುವಾರ ಸಂಜೆ ಮುಖ್ಯಮಂತ್ರಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭವೂ ಅಂದೇ ಜರುಗಲಿದೆ.

ಅರಮನೆ ಮುಂಭಾಗದಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಪಟ್ಟಿ ಅಕ್ಟೋಬರ್ 7ರಂದು ರಾತ್ರಿ 7:30ಕ್ಕೆ ಬೆಂಗಳೂರು ಪ್ರಭಾತ್ ಕಲಾವಿದರಿಂದ ಕರ್ನಾಟಕ ವೈಭವ ನೃತ್ಯ ರೂಪಕ.

ಅಕ್ಟೋಬರ್ 8ರಂದು ಜನಪದ ಕಾವ್ಯ ಗಾಯನ, ವಯೊಲಿನ್ ಕನ್ನಡ ಡಿಂಡಿಮ ಕಾರ್ಯಕ್ರಮ: ಶಿವಮೊಗ್ಗ ಹಾಗೂ ಮಳವಳ್ಳಿ ಕಲಾವಿದರಿಗೆ ಅವಕಾಶ.

ಅಕ್ಟೋಬರ್ 9ರಂದು ನಾದಬ್ರಹ್ಮ ಹಂಸಲೇಖರಿಂದ ದೇಶಿ ಸಂಸ್ಕೃತಿ ಹಬ್ಬ. ಮೈಸೂರು ಕಲಾವಿದರಿಂದ ಸಂಗೀತ ದರ್ಬಾರ್.

ಅಕ್ಟೋಬರ್ 10ರಂದು ಮಿಶ್ರವಾದ್ಯ ಗಾಯನ, ಗಜಲ್ ಹಾಗೂ ಮಧುರ ಮಧುರವೀ ಮಂಜುಳಗಾನ ಕಾರ್ಯಕ್ರಮ. ಬೆಂಗಳೂರು, ಮೈಸೂರು ಹಾಗೂ ತೀರ್ಥಹಳ್ಳಿ ಕಲಾವಿದರಿಂದ ಕಾರ್ಯಕ್ರಮಗಳು.

ಅಕ್ಟೋಬರ್ 11ರಂದು ಪ್ರತಿಷ್ಠಿತ ಪೊಲೀಸ್ ಬ್ಯಾಂಡ್ ವಾದ್ಯ. ಬಾಗಲಕೋಟೆ ಹಾಗೂ ರಾಯಚೂರು ಕಲಾವಿದರಿಂದ ನೃತ್ಯರೂಪಕ ಹಾಗೂ ದಾಸವಾಣಿ.

ಅಕ್ಟೋಬರ್ 12ರಂದು ಕಾರ್ಯಕ್ರಮ ನಡೆಸಿಕೊಡಲಿರುವ ಅದಿತಿ ಪ್ರಹ್ಲಾದ್. ಪಂಡಿತ್ ಪ್ರವೀಣ್ ಗೋಡ್ಖಿಂಡಿ ಮತ್ತು ಷಡಜ್ ಗೋಡ್ಖಿಂಡಿಯಿಂದ ಕೊಳಲುವಾದನ ಜುಗಲ್ ಬಂದಿ. ಮುದ್ದುಮೋಹನ್ ತಂಡದಿಂದ ಹಿಂದೂಸ್ತಾನಿ ಸಂಗೀತ.

ಅಕ್ಟೋಬರ್ 13ರಂದು ಬಿ.ಜಯಶ್ರೀ ತಂಡದಿಂದ ರಂಗಗೀತೆಗಳು. ಶ್ರೀಧರ್ ಜೈನ್ ತಂಡದಿಂದ ನೃತ್ಯರೂಪಕ. ಪಂಡಿತ್ ಜಯತೀರ್ಥ ಮೇವುಂಡಿಯಿಂದ ಹಿಂದೂಸ್ತಾನಿ ಗಾಯನ.

ಇದನ್ನೂ ಓದಿ: 

SM Krishna: ಮೈಸೂರು ದಸರಾ ಉದ್ಘಾಟನೆಗೆ ಆಮಂತ್ರಿಸಿದ ಹಿನ್ನೆಲೆ; ಪತ್ರದ ಮುಖೇನ ಧನ್ಯವಾದ ತಿಳಿಸಿದ ಎಸ್.ಎಂ ಕೃಷ್ಣ

ಕಳೆಗಟ್ಟಿದ ಅರಮನೆ ನಗರಿ: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸಜ್ಜು; ಅಂಬಾರಿ ಕಟ್ಟಿ ತಾಲೀಮು, ಮಾವುತರಿಗೆ ಉಪಹಾರ

ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ