AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಪೀಪಿ ಊದುತ್ತ ಯುವಕರಿಂದ ಕಿರಿಕಿರಿ; ತುತ್ತೂರಿ ಬಳಸುವುದನ್ನು ನಿಷೇಧಿಸಿ ಕಮಿಷನರ್ ಆದೇಶ

Mysuru Dasara 2021: ಪೀಪಿ ಊದುತ್ತ ಯುವಕರಿಂದ ಕಿರಿಕಿರಿ ಹಿನ್ನೆಲೆ ನಿಷೇಧ ಹೇರಲಾಗಿದೆ. ಇಂದಿನಿಂದಲೇ (ಅಕ್ಟೋಬರ್ 16) ಈ ನಿಷೇಧಾಜ್ಞೆ ಜಾರಿಗೊಳಿಸಲು ಆದೇಶ ನೀಡಲಾಗಿದೆ. ಮೈಸೂರು ಕಮಿಷನರ್ ಡಾ. ಚಂದ್ರಗುಪ್ತ ನಿರ್ದೇಶನ ನೀಡಿದ್ದಾರೆ.

ಮೈಸೂರು: ಪೀಪಿ ಊದುತ್ತ ಯುವಕರಿಂದ ಕಿರಿಕಿರಿ; ತುತ್ತೂರಿ ಬಳಸುವುದನ್ನು ನಿಷೇಧಿಸಿ ಕಮಿಷನರ್ ಆದೇಶ
ಮೈಸೂರು ಅರಮನೆ ದೀಪಾಲಂಕಾರ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 16, 2021 | 10:35 PM

Share

ಮೈಸೂರು: ಅರಮನೆ ಸುತ್ತಮುತ್ತ ಯುವಕರಿಂದ ತುತ್ತೂರಿ ಊದುತ್ತಾ ಕಿರಿಕಿರಿ ಉಂಟಾದ ಹಿನ್ನೆಲೆಯಲ್ಲಿ ತುತ್ತೂರಿ ಬಳಸುವುದನ್ನು ನಿಷೇಧಿಸಿ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಪೀಪಿ ಊದುತ್ತ ಯುವಕರಿಂದ ಕಿರಿಕಿರಿ ಹಿನ್ನೆಲೆ ನಿಷೇಧ ಹೇರಲಾಗಿದೆ. ಇಂದಿನಿಂದಲೇ (ಅಕ್ಟೋಬರ್ 16) ಈ ನಿಷೇಧಾಜ್ಞೆ ಜಾರಿಗೊಳಿಸಲು ಆದೇಶ ನೀಡಲಾಗಿದೆ. ಮೈಸೂರು ಕಮಿಷನರ್ ಡಾ. ಚಂದ್ರಗುಪ್ತ ನಿರ್ದೇಶನ ನೀಡಿದ್ದಾರೆ.

ದಸರಾ ದೀಪಾಲಂಕಾರ 9 ದಿನ ಮುಂದುವರಿಕೆ: ಬಸವರಾಜ ಬೊಮ್ಮಾಯಿ ವಿಜಯ ದಶಮಿ ದಿನದ ಬಳಿಕವೂ ನಂತರದ 9 ದಿನ ದಸರಾ ದೀಪಾಲಂಕಾರ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ​​ ಬೊಮ್ಮಾಯಿ ನಿನ್ನೆ (ಅಕ್ಟೋಬರ್ 15) ಅಧಿಕೃತ ಘೋಷಣೆ ಮಾಡಿದ್ದರು. ಸುತ್ತೂರು ಶಾಖಾ ಮಠದಲ್ಲಿ ಸಿಎಂ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿದ್ದರು. ದಸರಾ ದೀಪಾಲಂಕಾರ ಮುಂದುವರಿಸಲು ಜನರ ಬೇಡಿಕೆ ಇದೆ. ಹಾಗಾಗಿ ವಿದ್ಯುತ್ ದೀಪಾಲಂಕಾರ ಮುಂದುವರಿಸಲಾಗುವುದು. ಇಂದಿನಿಂದ 9 ದಿನ ದೀಪಾಲಂಕಾರ ಮುಂದುವರಿಯಲಿದೆ ಎಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಬೊಮ್ಮಾಯಿ ಹೇಳಿದ್ದರು.

ಸಿಎಂ ಬೊಮ್ಮಾಯಿ ರಾಜ್ಯದ ಜನತೆಗೆ ನಾಡ ಹಬ್ಬ ದಸರಾದ ಶುಭಾಶಯ ಕೋರಿದ್ದರು. ರಾಜ್ಯ ಮತ್ತಷ್ಟು ಸುಭಿಕ್ಷವಾಗಲಿ. ತಾಯಿ ಚಾಮುಂಡೇಶ್ವರಿ ನಾಡಿನ ಜನತೆಗೆ ಹರಸಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ನಾಡಿಗೆ ಶುಭಹಾರೈಸಿದ್ದರು. ಸುತ್ತೂರು ಶಾಖಾ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ ಕೊಟ್ಟಿದ್ದರು. ಮಠದಲ್ಲಿ ಸಿಎಂ ಬೊಮ್ಮಾಯಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಗಿತ್ತು. ಮಠದ ಆವರಣದಲ್ಲಿ ಚಾಮುಂಡೇಶ್ವರಿ ದೇವಿಗೆ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿದ್ದರು.

ಇದನ್ನೂ ಓದಿ: Mysuru Dasara 2021: ದುರ್ಗಾ ಮಾತೆಯ 9 ದಿವ್ಯ ಅವತಾರ ಆಯುರ್ವೇದದಲ್ಲಿ 9 ದಿವ್ಯ ಔಷಧ ರೂಪದಲ್ಲಿದೆ; ವಿವರ ಇಲ್ಲಿದೆ

ಇದನ್ನೂ ಓದಿ: Mysuru Dasara: ಗತಕಾಲದ ಕಥೆ ಹೇಳುತ್ತಿವೆ ಮೈಸೂರು ಗೊಂಬೆಗಳು, ರಂಗೇರಿದ ಗೊಂಬೆ ಪ್ರದರ್ಶನ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ