AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆಗಟ್ಟಿದ ಅರಮನೆ ನಗರಿ: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸಜ್ಜು; ಅಂಬಾರಿ ಕಟ್ಟಿ ತಾಲೀಮು, ಮಾವುತರಿಗೆ ಉಪಹಾರ

Mysuru dasara 2021 preparation: ದಸರಾ ಗಜಪಡೆಗೆ ಇಂದಿನಿಂದ ಅಂತಿಮ ಹಂತದ ತಾಲೀಮು ನಡೆಸಲಾಗುತ್ತಿದೆ. ಕ್ಯಾಪ್ಟನ್ ಅಭಿಮನ್ಯುಗೆ ಮರದ ಅಂಬಾರಿ ಕಟ್ಟಿ, ಅದರ ಮೇಲೆ ಮರಳು ಮೂಟೆ ಹೊರಿಸಿ ತಾಲೀಮು ನೀಡಲಾಗುತ್ತಿದೆ. ಇಂದು ಬೆಳಗ್ಗೆಅರಮನೆ ಆವರಣದಲ್ಲಿ ಮರದ ಅಂಬಾರಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಕೆ ಬಳಿಕ ಸಿಬ್ಬಂದಿ ಆನೆಗೆ ಅಂಬಾರಿ ಕಟ್ಟಲಿದ್ದಾರೆ.

ಕಳೆಗಟ್ಟಿದ ಅರಮನೆ ನಗರಿ: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸಜ್ಜು; ಅಂಬಾರಿ ಕಟ್ಟಿ ತಾಲೀಮು, ಮಾವುತರಿಗೆ ಉಪಹಾರ
ಕಳೆಗಟ್ಟಿದ ಅರಮನೆ ನಗರಿ: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸಜ್ಜು; ಅಂಬಾರಿ ಕಟ್ಟಿ ತಾಲೀಮು, ಮಾವುತರಿಗೆ ಉಪಹಾರ
TV9 Web
| Updated By: ಸಾಧು ಶ್ರೀನಾಥ್​|

Updated on:Oct 01, 2021 | 9:34 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದಿನಿಂದ ಅಂತಿಮ ಹಂತದ ತಾಲೀಮು ಶುರುವಾಗಿದ್ದು, ಅರಮನೆ ನಗರಿ ಕಳೆಕಟ್ಟುತ್ತಿದೆ. ಅಂಬಾರಿ ಕಟ್ಟಿ ತಾಲೀಮು ನಡೆಸಲಾಗುತ್ತಿದೆ. ಮಾವುತರು ಕಾವಾಡಿಗಳು ಅರಣ್ಯ ಇಲಾಖೆ ಸಿಬ್ಬಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಉಪಹಾರ ಬಡಿಸಿದ್ದಾರೆ.

ದಸರಾ ಗಜಪಡೆಗೆ ಇಂದಿನಿಂದ ಅಂತಿಮ ಹಂತದ ತಾಲೀಮು ನಡೆಸಲಾಗುತ್ತಿದೆ. ಕ್ಯಾಪ್ಟನ್ ಅಭಿಮನ್ಯುಗೆ ಮರದ ಅಂಬಾರಿ ಕಟ್ಟಿ, ಅದರ ಮೇಲೆ ಮರಳು ಮೂಟೆ ಹೊರಿಸಿ ತಾಲೀಮು ನೀಡಲಾಗುತ್ತಿದೆ. ಜಂಬೂ ಸವಾರಿ ಮೆರವಣಿಗೆಯಲ್ಲಿಆನೆ ಅಭಿಮನ್ಯು 750 ಕೆಜಿ ತೂಕದ ಅಂಬಾರಿ ಹೊರಲಿದ್ದಾನೆ. ಇಂದು ಬೆಳಗ್ಗೆಅರಮನೆ ಆವರಣದಲ್ಲಿ ಮರದ ಅಂಬಾರಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಕೆ ಬಳಿಕ ಸಿಬ್ಬಂದಿ ಆನೆಗೆ ಅಂಬಾರಿ ಕಟ್ಟಲಿದ್ದಾರೆ. ಅಭಿಮನ್ಯು ಜೊತೆ ಕಾವೇರಿ, ಚೈತ್ರಾ, ಲಕ್ಷ್ಮಿ, ಗೋಪಾಲಸ್ವಾಮಿ, ಧನಂಜಯ, ಅಶ್ವತ್ಥಾಮ, ವಿಕ್ರಮ ಆನೆಗಳು ಹೆಜ್ಜೆ ಹಾಕಲಿವೆ.

ಈ ಮಧ್ಯೆ, ಮೈಸೂರು ದಸರಾ ಅಂಗವಾಗಿ ಮಾವುತರು, ಕಾವಾಡಿಗಳು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಮೈಸೂರು ಜಿಲ್ಲಾಡಳಿತ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಮಾವುತರಿಗೆ ತಿಂಡಿ ಬಡಿಸಿದರು. ಸಚಿವ ಎಸ್ ಟಿ ಸೋಮಶೇಖರ್ ಮಾವುತರ ಜೊತೆ ತಿಂಡಿ ತೆಗೆದುಕೊಂಡರು. ಈ ವೇಳೆ ಸಚಿವ ಸೋಮಶೇಖರ್​ಗೆ ಶಾಸಕರಾದ ಎಸ್ ಎ ರಾಮದಾಸ್, ನಾಗೇಂದ್ರ, ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್, ಕಮಿಷನರ್ ಡಾ ಚಂದ್ರಗುಪ್ತ ಸೇರಿ ಹಲವು ಅಧಿಕಾರಿಗಳು ಸಾಥ್ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಸರಳ ದಸರಾಗೆ ಎಲ್ಲಾ ತಯಾರಿ ನಡೆದಿದೆ. ಸಂಜೆ ಒಳಗಡೆ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ ಅಂತಿಮವಾಗಲಿದೆ. ಹಂಸಲೇಖ ಸೇರಿದಂತೆ ನಾಡಿನ ಹಲವು ಕಲಾವಿದರಿಗೆ ಕಾರ್ಯಕ್ರಮ ನೀಡಲಾಗುತ್ತೆ. ಉದ್ಘಾಟನೆಗೆ 500 ಹಾಗೂ ಜಂಬೂ ಸವಾರಿಗೆ 1000 ಜನ ಎಂದು ತಜ್ಞರ ಸಮಿತಿ ಹೇಳಿದೆ. ಇದನ್ನು ಹೆಚ್ಚು ಮಾಡಲು ಕೇಳಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: SM Krishna: ಮೈಸೂರು ದಸರಾ ಉದ್ಘಾಟನೆಗೆ ಆಮಂತ್ರಿಸಿದ ಹಿನ್ನೆಲೆ; ಪತ್ರದ ಮುಖೇನ ಧನ್ಯವಾದ ತಿಳಿಸಿದ ಎಸ್.ಎಂ ಕೃಷ್ಣ

ಇದನ್ನೂ ಓದಿ: Mysore Dasara 2021: ಕೊರೊನಾದಿಂದ ಜಟ್ಟಿ‌ ಕಾಳಗಕ್ಕೆ ಬ್ರೇಕ್: ಅರಮನೆಯ ಪಾರಂಪರಿಕ ದಸರಾ ಕಾರ್ಯಕ್ರಮ ಲಿಸ್ಟ್​ ಇಲ್ಲಿದೆ

Published On - 9:23 am, Fri, 1 October 21

ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ