AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2023: ಬ್ರ್ಯಾಂಡಿಂಗ್ ಮೈಸೂರು ಸ್ಪರ್ಧೆ, ಮೈಸೂರಿನ ನೆಚ್ಚಿನ ತಾಣದ ಬಗ್ಗೆ ಬರೆದು ಬಹುಮಾನ ಗೆಲ್ಲಿ

ಪ್ರವಾಸೋದ್ಯಮ ಇಲಾಖೆ ಬ್ರ್ಯಾಂಡಿಂಗ್ ಮೈಸೂರು ಸ್ಪರ್ಧೆ ಆಯೋಜನೆ ಮಾಡಿದೆ. ಮೊದಲ ಬಹುಮಾನ 30 ಸಾವಿರ ನಗದು, ದ್ವಿತೀಯ ಬಹುಮಾನ 10 ಸಾವಿರ, ತೃತೀಯ ಬಹುಮಾನ 05 ಸಾವಿರ ನಿಗದಿ ಮಾಡಲಾಗಿದೆ. ನೋಂದಾಣಿಗೆ ಕೊನೆ ದಿನಾಂಕ 31/08/2023 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04/09/2023.

Mysuru Dasara 2023: ಬ್ರ್ಯಾಂಡಿಂಗ್ ಮೈಸೂರು ಸ್ಪರ್ಧೆ, ಮೈಸೂರಿನ ನೆಚ್ಚಿನ ತಾಣದ ಬಗ್ಗೆ ಬರೆದು ಬಹುಮಾನ ಗೆಲ್ಲಿ
ಬ್ರ್ಯಾಂಡಿಂಗ್ ಮೈಸೂರು
ರಾಮ್​, ಮೈಸೂರು
| Updated By: ಆಯೇಷಾ ಬಾನು|

Updated on:Aug 14, 2023 | 2:24 PM

Share

ಮೈಸೂರು, ಆ.14: ವಿಶ್ವವಿಖ್ಯಾತ ಮೈಸೂರು ದಸರಾ 2023 (Mysuru Dasara 2023) ಹಿನ್ನೆಲೆ ಪ್ರವಾಸೋದ್ಯಮ ಇಲಾಖೆ (Tourism Department) ಬ್ರ್ಯಾಂಡಿಂಗ್ ಮೈಸೂರು ಸ್ಪರ್ಧೆ ಆಯೋಜನೆ ಮಾಡಿದೆ. ಈ ಸ್ಪರ್ಧೆಯನ್ನು 4 ಹಂತದಲ್ಲಿ ಆಯೋಜಿಸಲಾಗುತ್ತಿದ್ದು ವಿಜೇತರಿಗೆ ಬಹುಮಾನ ನೀಡಲಾಗುತ್ತೆ. ಮೊದಲ ಬಹುಮಾನ 30 ಸಾವಿರ ನಗದು, ದ್ವಿತೀಯ ಬಹುಮಾನ 10 ಸಾವಿರ, ತೃತೀಯ ಬಹುಮಾನ 05 ಸಾವಿರ ನಿಗದಿ ಮಾಡಲಾಗಿದೆ. ನೋಂದಾಣಿಗೆ ಕೊನೆ ದಿನಾಂಕ 31/08/2023 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04/09/2023.

  • ಸ್ಪರ್ಧೆ-1 ಆಕರ್ಷಕ ಲೋಗೋ+ ಒಂದು ಸಾಲುನುಡಿ
  • ಸ್ಪರ್ಧೆ -2 ಒಂದು ಸುಂದರ ಶುಭಕಾರಿ
  • ಸ್ಪರ್ಧೆ-3 ವಿಭಿನ್ನವಾದ ಸ್ಮರಣಿಕೆ
  • ಸ್ಪರ್ಧೆ-4 ಮೈಸೂರಿನಲ್ಲಿ ನಿಮ್ಮ ನೆಚ್ಚಿನ ಜಾಗ, ಚಟುವಟಿಕೆಯನ್ನು ವಿವರಿಸುವ ಒಂದು ಮಿಂಬರಹ

ವಿಶ್ವವಿಖ್ಯಾತ ದಸರಾ ಮಹೋತ್ಸವ 2023 ಹಿನ್ನೆಲೆ ದಸರಾ ಆಚರಣೆ ಸಿದ್ಧತೆ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪನವರ ನೇತೃತ್ವದಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಮೈಸೂರು ಜಿಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಚಿವ ಕೆ ವೆಂಕಟೇಶ್, ಶಾಸಕರಾದ ಜಿಟಿ ದೇವೇಗೌಡ, ದರ್ಶನ್ ದೃವನಾರಾಯಣ್, ಎಂಎಲ್ ಸಿ ವಿಶ್ವನಾಥ್, ವಮಂಜೇಗೌಡ, ಮರೀತೀಬ್ಬೆಗೌಡ, ಮೇಯರ್ ಶಿವಕುಮಾರ್, ಡಿಸಿ ಕೆ ವಿ ರಾಜೇಂದ್ರ, ಅರಣ್ಯಧಿಕಾರಿ ಮಾಲತಿ ಪ್ರಿಯ, ನಗರ ಪೋಲೀಸ್ ಕಮಿಷನರ್ ರಮೇಶ್ ಬಾನೋತ್,ಎಸ್ ಪಿ ಸೀಮಾ ಲಾಟ್ಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: ಮೈಸೂರು ದಸರಾ-2023: ಗಜಪಡೆ ಪಟ್ಟಿ ತಯಾರಿ, ಮೊದಲ ಹಂತದಲ್ಲಿ ಅರಮನೆಗೆ ಆಗಮಿಸಲಿರುವ ಆನೆಗಳ ವಿವರ ಇಲ್ಲಿದೆ

ಅರಣ್ಯಧಿಕಾರಿ ಮಾಲತಿ ಪ್ರಿಯ, ದಸರಾ ಕೇಂದ್ರ ಬಿಂದು ಆಗಿರುವ ಗಜಪಡೆಗಳ ಬಗ್ಗೆ ಮಾಹಿತಿ ನೀಡಿದರು. ಆನೆಗಳನ್ನ ಲಾರಿಯಲ್ಲಿ ಕರೆ ತರುವುದು ಸಂಪ್ರದಾಯವಲ್ಲ ಎಂದು ಎಂಎಲ್​ಸಿ ವಿಶ್ವನಾಥ್ ಆಕ್ಷೇಪ ವ್ಯಕ್ತಪಡಿಸಿದರು. ಈ ಹಿಂದೆ ಮೈಸೂರು ಮಹಾರಾಜರೇ ಆನೆಗಳಿಗೆ ಫಲ ತಾಂಬುಲ ನೀಡಿ ಕರೆ ತರುತ್ತಿದ್ದರು. ಆನೆಗಳನ್ನು ಕಾಲ್ನಡಿಗೆಯಲ್ಲಿಯೇ ಕರೆ ತಂದರೆ ಒಳ್ಳೆಯದು ಎಂದು ಸಭೆಯಲ್ಲಿ ಎಂಎಲ್​ಸಿ ಹೆಚ್ ವಿಶ್ವನಾಥ್ ಸಲಹೆ ನೀಡಿದರು.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:22 pm, Mon, 14 August 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!