AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara Gold Card: ಮೈಸೂರು ದಸರಾ ಗೋಲ್ಡ್ ಕಾರ್ಡ್ ಖರೀದಿಗೆ ಮತ್ತೆ ಅವಕಾಶ

ದಸರಾ ಉತ್ಸವವನ್ನು ವೀಕ್ಷಿಸಲು ದೇಶ, ವಿದೇಶಗಳಿಂದ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗಾಗಿ ಗೋಲ್ಡ್​​ ಕಾರ್ಡ್​​​ ಸೌಲಭ್ಯವನ್ನು ಜಿಲ್ಲಾಡಳಿತ ನೀಡಿತ್ತು. ಇದೀಗ ಮತ್ತೆ ಗೋಲ್ಡ್ ಕಾರ್ಡ್​ ಖರೀದಿಗೆ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಅವರು ಅವಕಾಶ ನೀಡಿದ್ದು, ನಾಳೆಯಿಂದ ಖರೀದಿಸಬಹುದಾಗಿದೆ.

Mysuru Dasara Gold Card: ಮೈಸೂರು ದಸರಾ ಗೋಲ್ಡ್ ಕಾರ್ಡ್ ಖರೀದಿಗೆ ಮತ್ತೆ ಅವಕಾಶ
ಮೈಸೂರು ದಸರಾ
ರಾಮ್​, ಮೈಸೂರು
| Edited By: |

Updated on: Oct 21, 2023 | 8:16 PM

Share

ಮೈಸೂರು, ಅ.21: ದಸರಾ (Mysuru Dasara) ಉತ್ಸವವನ್ನು ವೀಕ್ಷಿಸಲು ದೇಶ, ವಿದೇಶಗಳಿಂದ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗಾಗಿ ಗೋಲ್ಡ್​​ ಕಾರ್ಡ್​​​ ಸೌಲಭ್ಯವನ್ನು ಜಿಲ್ಲಾಡಳಿತ ನೀಡಿತ್ತು. ಇದೀಗ ಮತ್ತೆ ಗೋಲ್ಡ್ ಕಾರ್ಡ್​ ಖರೀದಿಗೆ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಅವರು ಅವಕಾಶ ನೀಡಿದ್ದು, ನಾಳೆಯಿಂದ ಖರೀದಿಸಬಹುದಾಗಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಜಿಲ್ಲಾಧಿಕಾರಿ ರಾಜೇಂದ್ರ, ಗೋಲ್ಡ್ ಕಾರ್ಡ್, ಟಿಕೆಟ್‌ಗೆ ಬೇಡಿಕೆ ಹೆಚ್ಚಾದ ಹಿನ್ನೆಲೆ ಮತ್ತೆ ಅವಕಾಶ ನೀಡಲಾಗಿದೆ. ಐತಿಹಾಸಿಕ ಮೈಸೂರು ದಸರಾ ಜಂಬೂಸವಾರಿ ವೀಕ್ಷಣೆ ಹಾಗೂ ಪಂಜಿನ ಕವಾಯತು ವೀಕ್ಷಣೆಗಾಗಿ ಗೋಲ್ಡ್ ಕಾರ್ಡ್, ಟಿಕೆಟ್ ಮಾರಾಟ ಮಾಡಲಾಗುತ್ತಿದೆ.

ಇದನ್ನೂ ಓದಿ: ನಾಗರಬಾವಿಯಲ್ಲಿ ನವರಾತ್ರಿ: ಮೈಸೂರು ದಸರಾ ರೀತಿಯಲ್ಲಿ ತೆರಿಗೆ ಅಧಿಕಾರಿ ಮನೆಯಲ್ಲಿ ಗೊಂಬೆಗಳ ಕಲರವ, ನೀವೂ ನೋಡ ಬನ್ನಿ

ಹೆಚ್ಚಿನ ಆಸನ ವ್ಯವಸ್ಥೆ ಕಲ್ಪಿಸಿ ನಾಳೆ ಗೋಲ್ಡ್ ಕಾರ್ಡ್ ಖರೀದಿಗೆ ಅವಕಾಶ ನೀಡಲಾಗುತ್ತಿದ್ದು, ಬೆಳಗ್ಗೆ 10 ಗಂಟೆಯಿಂದ ವೆಬ್‌ಸೈಟ್‌ ಮೂಲಕ ಖರೀದಿಗೆ ಅವಕಾಶ ನೀಡಲಾಗಿದೆ. ಜಂಬೂಸವಾರಿ ವೀಕ್ಷಣೆ ಹಾಗೂ ಪಂಜಿನ ಕವಾಯತು ವೀಕ್ಷಣೆ ಮಾಡಲು ಇಚ್ಚಿಸುವವರು mysoredasara.gov.in ವೆಬ್‌ಸೈಟ್‌ ಮೂಲಕ ಖರೀದಿ ಮಾಡಬಹುದು.

ಆಸಕ್ತರು ವೆಬ್​ಸೈಟ್​ ಮೂಲಕ ಮಾತ್ರ ಗೋಲ್ಡ್ ಖರೀದಿ ಮಾಡಬಹುದು. ಇತರೆ ಯಾವುದೇ ರೀತಿಯಲ್ಲೂ ಗೋಲ್ಡ್‌ ಕಾರ್ಡ್‌, ಟಿಕೆಟ್ ಮಾರಾಟವಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದಸರಾ ಜಂಬೂಸವಾರಿ ವೀಕ್ಷಣೆಗೆ ಗೋಲ್ಡ್ ಕಾರ್ಡ್ ದರ 6 ಸಾವಿರ ರೂಪಾಯಿ ಆಗಿದ್ದು, ಟಿಕೆಟ್‌ಗೆ 3 ಸಾವಿರ ರೂ. ಮತ್ತು 2 ಸಾವಿರ ರೂ. ನಿಗದಿ ಮಾಡಲಾಗಿದೆ. ಪಂಜಿನ ಕವಾಯಿತು ವೀಕ್ಷಣೆಗೆ 500 ರೂ. ನಿಗದಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ