AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara Gold Card: ಮೈಸೂರು ದಸರಾ ಗೋಲ್ಡ್ ಕಾರ್ಡ್ ಖರೀದಿಗೆ ಮತ್ತೆ ಅವಕಾಶ

ದಸರಾ ಉತ್ಸವವನ್ನು ವೀಕ್ಷಿಸಲು ದೇಶ, ವಿದೇಶಗಳಿಂದ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗಾಗಿ ಗೋಲ್ಡ್​​ ಕಾರ್ಡ್​​​ ಸೌಲಭ್ಯವನ್ನು ಜಿಲ್ಲಾಡಳಿತ ನೀಡಿತ್ತು. ಇದೀಗ ಮತ್ತೆ ಗೋಲ್ಡ್ ಕಾರ್ಡ್​ ಖರೀದಿಗೆ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಅವರು ಅವಕಾಶ ನೀಡಿದ್ದು, ನಾಳೆಯಿಂದ ಖರೀದಿಸಬಹುದಾಗಿದೆ.

Mysuru Dasara Gold Card: ಮೈಸೂರು ದಸರಾ ಗೋಲ್ಡ್ ಕಾರ್ಡ್ ಖರೀದಿಗೆ ಮತ್ತೆ ಅವಕಾಶ
ಮೈಸೂರು ದಸರಾ
ರಾಮ್​, ಮೈಸೂರು
| Edited By: |

Updated on: Oct 21, 2023 | 8:16 PM

Share

ಮೈಸೂರು, ಅ.21: ದಸರಾ (Mysuru Dasara) ಉತ್ಸವವನ್ನು ವೀಕ್ಷಿಸಲು ದೇಶ, ವಿದೇಶಗಳಿಂದ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗಾಗಿ ಗೋಲ್ಡ್​​ ಕಾರ್ಡ್​​​ ಸೌಲಭ್ಯವನ್ನು ಜಿಲ್ಲಾಡಳಿತ ನೀಡಿತ್ತು. ಇದೀಗ ಮತ್ತೆ ಗೋಲ್ಡ್ ಕಾರ್ಡ್​ ಖರೀದಿಗೆ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಅವರು ಅವಕಾಶ ನೀಡಿದ್ದು, ನಾಳೆಯಿಂದ ಖರೀದಿಸಬಹುದಾಗಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಜಿಲ್ಲಾಧಿಕಾರಿ ರಾಜೇಂದ್ರ, ಗೋಲ್ಡ್ ಕಾರ್ಡ್, ಟಿಕೆಟ್‌ಗೆ ಬೇಡಿಕೆ ಹೆಚ್ಚಾದ ಹಿನ್ನೆಲೆ ಮತ್ತೆ ಅವಕಾಶ ನೀಡಲಾಗಿದೆ. ಐತಿಹಾಸಿಕ ಮೈಸೂರು ದಸರಾ ಜಂಬೂಸವಾರಿ ವೀಕ್ಷಣೆ ಹಾಗೂ ಪಂಜಿನ ಕವಾಯತು ವೀಕ್ಷಣೆಗಾಗಿ ಗೋಲ್ಡ್ ಕಾರ್ಡ್, ಟಿಕೆಟ್ ಮಾರಾಟ ಮಾಡಲಾಗುತ್ತಿದೆ.

ಇದನ್ನೂ ಓದಿ: ನಾಗರಬಾವಿಯಲ್ಲಿ ನವರಾತ್ರಿ: ಮೈಸೂರು ದಸರಾ ರೀತಿಯಲ್ಲಿ ತೆರಿಗೆ ಅಧಿಕಾರಿ ಮನೆಯಲ್ಲಿ ಗೊಂಬೆಗಳ ಕಲರವ, ನೀವೂ ನೋಡ ಬನ್ನಿ

ಹೆಚ್ಚಿನ ಆಸನ ವ್ಯವಸ್ಥೆ ಕಲ್ಪಿಸಿ ನಾಳೆ ಗೋಲ್ಡ್ ಕಾರ್ಡ್ ಖರೀದಿಗೆ ಅವಕಾಶ ನೀಡಲಾಗುತ್ತಿದ್ದು, ಬೆಳಗ್ಗೆ 10 ಗಂಟೆಯಿಂದ ವೆಬ್‌ಸೈಟ್‌ ಮೂಲಕ ಖರೀದಿಗೆ ಅವಕಾಶ ನೀಡಲಾಗಿದೆ. ಜಂಬೂಸವಾರಿ ವೀಕ್ಷಣೆ ಹಾಗೂ ಪಂಜಿನ ಕವಾಯತು ವೀಕ್ಷಣೆ ಮಾಡಲು ಇಚ್ಚಿಸುವವರು mysoredasara.gov.in ವೆಬ್‌ಸೈಟ್‌ ಮೂಲಕ ಖರೀದಿ ಮಾಡಬಹುದು.

ಆಸಕ್ತರು ವೆಬ್​ಸೈಟ್​ ಮೂಲಕ ಮಾತ್ರ ಗೋಲ್ಡ್ ಖರೀದಿ ಮಾಡಬಹುದು. ಇತರೆ ಯಾವುದೇ ರೀತಿಯಲ್ಲೂ ಗೋಲ್ಡ್‌ ಕಾರ್ಡ್‌, ಟಿಕೆಟ್ ಮಾರಾಟವಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದಸರಾ ಜಂಬೂಸವಾರಿ ವೀಕ್ಷಣೆಗೆ ಗೋಲ್ಡ್ ಕಾರ್ಡ್ ದರ 6 ಸಾವಿರ ರೂಪಾಯಿ ಆಗಿದ್ದು, ಟಿಕೆಟ್‌ಗೆ 3 ಸಾವಿರ ರೂ. ಮತ್ತು 2 ಸಾವಿರ ರೂ. ನಿಗದಿ ಮಾಡಲಾಗಿದೆ. ಪಂಜಿನ ಕವಾಯಿತು ವೀಕ್ಷಣೆಗೆ 500 ರೂ. ನಿಗದಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ