Ambaari Dasara Bus: ಮೈಸೂರು ದಸರಾಗೆ ಮತ್ತಷ್ಟು ಮೆರಗು ನೀಡಲು ರಸ್ತೆಗೆ ಇಳಿಯುತ್ತಿದೆ ಅಂಬಾರಿ

ಈ ಬಾರಿಯ ದಸರೆಗಾಗಿ ಪ್ರವಾಸೋದ್ಯಮ ಇಲಾಖೆ ಒಟ್ಟು 6 ಅಂಬಾರಿ ಓಪನ್ ಬಸ್‌ಗಳನ್ನು ಸಿದ್ದಪಡಿಸಿದೆ. ಸಾಕಷ್ಟು ಆಕರ್ಷಕವಾಗಿರುವ ಈ ಅಂಬಾರಿ ಬಸ್‌ನಲ್ಲಿ ಪ್ರವಾಸಿಗರು ಮೈಸೂರನ್ನು ವಿಶೇಷವಾಗಿ ನೋಡಬಹುದಾಗಿದೆ. ಅಕ್ಟೋಬರ್ 15 ರಿಂದ ವಿಶೇಷ ದಸರಾ ಅಂಬಾರಿ ಬಸ್‌ಗೆ ಚಾಲನೆ ಸಿಗಲಿದೆ. ಸಿಎಂ ಸಿದ್ದರಾಮಯ್ಯ ಬಸ್‌ಗೆ ಚಾಲನೆ ನೀಡಲಿದ್ದಾರೆ. ಅಷ್ಟೇ ಅಲ್ಲ ಖುದ್ದು ಸಿಎಂ ಹಾಗೂ ಸಚಿವರು ಬಸ್‌ನಲ್ಲಿ ಪ್ರಯಾಣ ಮಾಡಲಿದ್ದಾರೆ.

Follow us
| Updated By: ಆಯೇಷಾ ಬಾನು

Updated on:Oct 05, 2023 | 3:24 PM

ಮೈಸೂರು, ಅ.05: ವಿಶ್ವವಿಖ್ಯಾತ ಮೈಸೂರು ದಸರಾಗೆ (Mysuru Dasara 2023) ದಿನಗಣನೆ ಆರಂಭವಾಗಿದೆ. ಈ ಬಾರಿ ದಸರೆಯನ್ನು ಸಾಂಪ್ರದಾಯಿಕ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ (Karnataka Government) ಮುಂದಾಗಿದೆ‌. ಹೀಗಾಗಿ ಪ್ರವಾಸಿಗರನ್ನು ಸೆಳೆಯುವ ಚಾಲೆಂಜ್ ಪ್ರವಾಸೋದ್ಯಮ ಇಲಾಖೆ (Tourism Department) ಮೇಲಿದೆ. ಇದಕ್ಕಾಗಿ ಪ್ರವಾಸೋದ್ಯಮ ಇಲಾಖೆ ಸಾಕಷ್ಟು ಪ್ಲ್ಯಾನ್ ಮಾಡುತ್ತಿದೆ. ಅದರ ಒಂದು ಭಾಗ ದಸರಾ ಅಂಬಾರಿ ವಿಶೇಷ ಬಸ್ (Dasara Ambaari Bus). ಈ ಬಾರಿಯ ದಸರೆಗಾಗಿ ಪ್ರವಾಸೋದ್ಯಮ ಇಲಾಖೆ ಒಟ್ಟು 6 ಅಂಬಾರಿ ಓಪನ್ ಬಸ್‌ಗಳನ್ನು ಸಿದ್ದಪಡಿಸಿದೆ. ಸಾಕಷ್ಟು ಆಕರ್ಷಕವಾಗಿರುವ ಈ ಅಂಬಾರಿ ಬಸ್‌ನಲ್ಲಿ ಪ್ರವಾಸಿಗರು ಮೈಸೂರನ್ನು ವಿಶೇಷವಾಗಿ ನೋಡಬಹುದಾಗಿದೆ.

ಅಕ್ಟೋಬರ್ 15 ರಿಂದ ವಿಶೇಷ ದಸರಾ ಅಂಬಾರಿ ಬಸ್‌ಗೆ ಚಾಲನೆ ಸಿಗಲಿದೆ. ಸಿಎಂ ಸಿದ್ದರಾಮಯ್ಯ ಬಸ್‌ಗೆ ಚಾಲನೆ ನೀಡಲಿದ್ದಾರೆ. ಅಷ್ಟೇ ಅಲ್ಲ ಖುದ್ದು ಸಿಎಂ ಹಾಗೂ ಸಚಿವರು ಬಸ್‌ನಲ್ಲಿ ಪ್ರಯಾಣ ಮಾಡಲಿದ್ದಾರೆ. ದಸರಾ ದೀಪಾಲಂಕಾರ ಇರುವವರೆಗೂ ವಿಶೇಷ ಅಂಬಾರಿ ಬಸ್ ಸಂಚಾರವಿರುತ್ತದೆ. ಪ್ರತಿದಿನ ಸಂಜೆ 6 ಗಂಟೆ ರಾತ್ರಿ 8 ಗಂಟೆ ರಾತ್ರಿ 9 ಗಂಟೆಗೆ ಬಸ್ ವ್ಯವಸ್ಥೆ ಇರುತ್ತದೆ. ಬಸ್‌ನ ಒಳಭಾಗ 25 ಸೀಟು ಬಸ್ ಮೇಲ್ಭಾಗದಲ್ಲಿ 20 ಸೀಟ್ ವ್ಯವಸ್ಥೆ ಮಾಡಲಾಗಿದೆ. ಬಸ್ ಒಳಭಾಗಕ್ಕೆ 250 ರೂ. ದರ ಬಸ್ ಮೇಲ್ಭಾಗದಲ್ಲಿ 500 ರೂ. ದರ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: ಅ.15ಕ್ಕೆ ಉಡುಪಿಯಲ್ಲಿ ಮಹಿಷಾ ದಸರಾ ಆಚರಣೆ, ದ್ರಾವಿಡ ದೊರೆ ಮಹಿಷ ಬಗ್ಗೆ ಜಾಗೃತಿ ಕಾರ್ಯಕ್ರಮ

ವಿಶೇಷ ಅಂಬಾರಿ ಬಸ್ ಸಂಚರಿಸುವ ಮಾರ್ಗ

ಮಯೂರ ಹೋಟೆಲ್‌ನಿಂದ ಆರಂಭವಾಗಿ ಹಳೆ ಡಿಸಿ ಕಚೇರಿ, ಕ್ರಾಫರ್ಡ್ ಹಾಲ್ ಸೆಂಟ್ರಲ್ ಲೈಬ್ರರಿ, ರಾಮಸ್ವಾಮಿ ವೃತ್ತ, ಸಂಸ್ಕೃತ ಪಾಠಶಾಲಾ ಅರಮನೆ ಕೆ ಆರ್ ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ಆಸ್ಪತ್ರೆ ವೃತ್ತ, ರೈಲು ನಿಲ್ದಾಣ ವೃತ್ತದ ಮೂಲಕ ವಾಪಸ್ಸು ಮಯೂರ ಯಾತ್ರಿ ನಿವಾಸಕ್ಕೆ ಆಗಮಿಸುತ್ತದೆ. ಆನ್‌ಲೈನ್ ಮೂಲಕ ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಹೀಗಾಗಲೇ ಅಂಬಾರಿ ಬಸ್‌ನ ಟ್ರಯಲ್ ರನ್ ನಡೆಯುತ್ತಿದ್ದು ಉತ್ತಮ ಪ್ರತಿಕ್ರಿಯೆ ಆರಂಭವಾಗಿದೆ. ಜನರು ಹೆಚ್ಚು ಹೆಚ್ಚಾಗಿ ಅಂಬಾರಿ ಬಸ್‌ನ ಮೂಲಕ ಮೈಸೂರು ನೋಡಲು ಪ್ರವಾಸಿಗರು ಉತ್ಸುಕರಾಗಿದ್ದಾರೆ. ಒಟ್ಟಾರೆ ಮೈಸೂರು ದಸರೆಗೆ ಬರುವ ಪ್ರವಾಸಿಗರಿಗೆ ಮೈಸೂರಿನ ಅದ್ಬುತ ಕ್ಷಣಗಳನ್ನು ಕಣ್ತುಂಬಿಕೊಡಲು ಅಂಬಾರಿ ಸಜ್ಜಾಗಿದೆ. ನೀವು ಮೈಸೂರಿಗೆ ಬಂದಾಗ ಅಂಬಾರಿ ಬಸ್ ಹತ್ತಿ ಮೈಸೂರು ಸುತ್ತೋದನ್ನು ಮಿಸ್ ಮಾಡ್ಕೋಬೇಡಿ.

ಮೈಸೂರು ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:17 pm, Thu, 5 October 23

ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು