AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ambaari Dasara Bus: ಮೈಸೂರು ದಸರಾಗೆ ಮತ್ತಷ್ಟು ಮೆರಗು ನೀಡಲು ರಸ್ತೆಗೆ ಇಳಿಯುತ್ತಿದೆ ಅಂಬಾರಿ

ಈ ಬಾರಿಯ ದಸರೆಗಾಗಿ ಪ್ರವಾಸೋದ್ಯಮ ಇಲಾಖೆ ಒಟ್ಟು 6 ಅಂಬಾರಿ ಓಪನ್ ಬಸ್‌ಗಳನ್ನು ಸಿದ್ದಪಡಿಸಿದೆ. ಸಾಕಷ್ಟು ಆಕರ್ಷಕವಾಗಿರುವ ಈ ಅಂಬಾರಿ ಬಸ್‌ನಲ್ಲಿ ಪ್ರವಾಸಿಗರು ಮೈಸೂರನ್ನು ವಿಶೇಷವಾಗಿ ನೋಡಬಹುದಾಗಿದೆ. ಅಕ್ಟೋಬರ್ 15 ರಿಂದ ವಿಶೇಷ ದಸರಾ ಅಂಬಾರಿ ಬಸ್‌ಗೆ ಚಾಲನೆ ಸಿಗಲಿದೆ. ಸಿಎಂ ಸಿದ್ದರಾಮಯ್ಯ ಬಸ್‌ಗೆ ಚಾಲನೆ ನೀಡಲಿದ್ದಾರೆ. ಅಷ್ಟೇ ಅಲ್ಲ ಖುದ್ದು ಸಿಎಂ ಹಾಗೂ ಸಚಿವರು ಬಸ್‌ನಲ್ಲಿ ಪ್ರಯಾಣ ಮಾಡಲಿದ್ದಾರೆ.

ರಾಮ್​, ಮೈಸೂರು
| Updated By: ಆಯೇಷಾ ಬಾನು|

Updated on:Oct 05, 2023 | 3:24 PM

Share

ಮೈಸೂರು, ಅ.05: ವಿಶ್ವವಿಖ್ಯಾತ ಮೈಸೂರು ದಸರಾಗೆ (Mysuru Dasara 2023) ದಿನಗಣನೆ ಆರಂಭವಾಗಿದೆ. ಈ ಬಾರಿ ದಸರೆಯನ್ನು ಸಾಂಪ್ರದಾಯಿಕ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ (Karnataka Government) ಮುಂದಾಗಿದೆ‌. ಹೀಗಾಗಿ ಪ್ರವಾಸಿಗರನ್ನು ಸೆಳೆಯುವ ಚಾಲೆಂಜ್ ಪ್ರವಾಸೋದ್ಯಮ ಇಲಾಖೆ (Tourism Department) ಮೇಲಿದೆ. ಇದಕ್ಕಾಗಿ ಪ್ರವಾಸೋದ್ಯಮ ಇಲಾಖೆ ಸಾಕಷ್ಟು ಪ್ಲ್ಯಾನ್ ಮಾಡುತ್ತಿದೆ. ಅದರ ಒಂದು ಭಾಗ ದಸರಾ ಅಂಬಾರಿ ವಿಶೇಷ ಬಸ್ (Dasara Ambaari Bus). ಈ ಬಾರಿಯ ದಸರೆಗಾಗಿ ಪ್ರವಾಸೋದ್ಯಮ ಇಲಾಖೆ ಒಟ್ಟು 6 ಅಂಬಾರಿ ಓಪನ್ ಬಸ್‌ಗಳನ್ನು ಸಿದ್ದಪಡಿಸಿದೆ. ಸಾಕಷ್ಟು ಆಕರ್ಷಕವಾಗಿರುವ ಈ ಅಂಬಾರಿ ಬಸ್‌ನಲ್ಲಿ ಪ್ರವಾಸಿಗರು ಮೈಸೂರನ್ನು ವಿಶೇಷವಾಗಿ ನೋಡಬಹುದಾಗಿದೆ.

ಅಕ್ಟೋಬರ್ 15 ರಿಂದ ವಿಶೇಷ ದಸರಾ ಅಂಬಾರಿ ಬಸ್‌ಗೆ ಚಾಲನೆ ಸಿಗಲಿದೆ. ಸಿಎಂ ಸಿದ್ದರಾಮಯ್ಯ ಬಸ್‌ಗೆ ಚಾಲನೆ ನೀಡಲಿದ್ದಾರೆ. ಅಷ್ಟೇ ಅಲ್ಲ ಖುದ್ದು ಸಿಎಂ ಹಾಗೂ ಸಚಿವರು ಬಸ್‌ನಲ್ಲಿ ಪ್ರಯಾಣ ಮಾಡಲಿದ್ದಾರೆ. ದಸರಾ ದೀಪಾಲಂಕಾರ ಇರುವವರೆಗೂ ವಿಶೇಷ ಅಂಬಾರಿ ಬಸ್ ಸಂಚಾರವಿರುತ್ತದೆ. ಪ್ರತಿದಿನ ಸಂಜೆ 6 ಗಂಟೆ ರಾತ್ರಿ 8 ಗಂಟೆ ರಾತ್ರಿ 9 ಗಂಟೆಗೆ ಬಸ್ ವ್ಯವಸ್ಥೆ ಇರುತ್ತದೆ. ಬಸ್‌ನ ಒಳಭಾಗ 25 ಸೀಟು ಬಸ್ ಮೇಲ್ಭಾಗದಲ್ಲಿ 20 ಸೀಟ್ ವ್ಯವಸ್ಥೆ ಮಾಡಲಾಗಿದೆ. ಬಸ್ ಒಳಭಾಗಕ್ಕೆ 250 ರೂ. ದರ ಬಸ್ ಮೇಲ್ಭಾಗದಲ್ಲಿ 500 ರೂ. ದರ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: ಅ.15ಕ್ಕೆ ಉಡುಪಿಯಲ್ಲಿ ಮಹಿಷಾ ದಸರಾ ಆಚರಣೆ, ದ್ರಾವಿಡ ದೊರೆ ಮಹಿಷ ಬಗ್ಗೆ ಜಾಗೃತಿ ಕಾರ್ಯಕ್ರಮ

ವಿಶೇಷ ಅಂಬಾರಿ ಬಸ್ ಸಂಚರಿಸುವ ಮಾರ್ಗ

ಮಯೂರ ಹೋಟೆಲ್‌ನಿಂದ ಆರಂಭವಾಗಿ ಹಳೆ ಡಿಸಿ ಕಚೇರಿ, ಕ್ರಾಫರ್ಡ್ ಹಾಲ್ ಸೆಂಟ್ರಲ್ ಲೈಬ್ರರಿ, ರಾಮಸ್ವಾಮಿ ವೃತ್ತ, ಸಂಸ್ಕೃತ ಪಾಠಶಾಲಾ ಅರಮನೆ ಕೆ ಆರ್ ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ಆಸ್ಪತ್ರೆ ವೃತ್ತ, ರೈಲು ನಿಲ್ದಾಣ ವೃತ್ತದ ಮೂಲಕ ವಾಪಸ್ಸು ಮಯೂರ ಯಾತ್ರಿ ನಿವಾಸಕ್ಕೆ ಆಗಮಿಸುತ್ತದೆ. ಆನ್‌ಲೈನ್ ಮೂಲಕ ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಹೀಗಾಗಲೇ ಅಂಬಾರಿ ಬಸ್‌ನ ಟ್ರಯಲ್ ರನ್ ನಡೆಯುತ್ತಿದ್ದು ಉತ್ತಮ ಪ್ರತಿಕ್ರಿಯೆ ಆರಂಭವಾಗಿದೆ. ಜನರು ಹೆಚ್ಚು ಹೆಚ್ಚಾಗಿ ಅಂಬಾರಿ ಬಸ್‌ನ ಮೂಲಕ ಮೈಸೂರು ನೋಡಲು ಪ್ರವಾಸಿಗರು ಉತ್ಸುಕರಾಗಿದ್ದಾರೆ. ಒಟ್ಟಾರೆ ಮೈಸೂರು ದಸರೆಗೆ ಬರುವ ಪ್ರವಾಸಿಗರಿಗೆ ಮೈಸೂರಿನ ಅದ್ಬುತ ಕ್ಷಣಗಳನ್ನು ಕಣ್ತುಂಬಿಕೊಡಲು ಅಂಬಾರಿ ಸಜ್ಜಾಗಿದೆ. ನೀವು ಮೈಸೂರಿಗೆ ಬಂದಾಗ ಅಂಬಾರಿ ಬಸ್ ಹತ್ತಿ ಮೈಸೂರು ಸುತ್ತೋದನ್ನು ಮಿಸ್ ಮಾಡ್ಕೋಬೇಡಿ.

ಮೈಸೂರು ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:17 pm, Thu, 5 October 23

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ