AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2023: ದಸರಾ; ಆಗಸ್ಟ್ ಅಂತ್ಯದಲ್ಲಿ ಮೈಸೂರಿಗೆ ಗಜಪಯಣ

ಮೈಸೂರು ದಸರಾಕ್ಕೆ ಆನೆಗಳ ಪಟ್ಟಿ ಸಿದ್ಧಪಡಿಸಲು ಸಮೀಕ್ಷೆ ಆರಂಭವಾಗಿದ್ದು, ಈ ತಿಂಗಳ ಕೊನೆಯಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ.

Mysuru Dasara 2023: ದಸರಾ; ಆಗಸ್ಟ್ ಅಂತ್ಯದಲ್ಲಿ ಮೈಸೂರಿಗೆ ಗಜಪಯಣ
ದಸರಾ ಆನೆಗಳ ಸಂಗ್ರಹ ಚಿತ್ರ
ಗಣಪತಿ ಶರ್ಮಾ
| Edited By: |

Updated on:Aug 04, 2023 | 10:45 AM

Share

ಮೈಸೂರು, ಜುಲೈ 24: ವಿಶ್ವಪ್ರಸಿದ್ಧ ಮೈಸೂರು ದಸರಾ (Mysuru Dasara) ಹಬ್ಬದ ಜಂಬೂ ಸವಾರಿಗಾಗಿ (Jamboo Savari) ಆನೆಗಳ ಮೊದಲ ತಂಡ ಇನ್ನೊಂದು ತಿಂಗಳ ಒಳಗಾಗಿ ನಗರಕ್ಕೆ ಆಗಮಿಸಲಿವೆ. ಹುಣಸೂರಿನ ವೀರನಹೊಸಹಳ್ಳಿಯಿಂದ ದಸರಾ ಆನೆಗಳ ‘ಗಜಪಯಣ’ ಆಗಸ್ಟ್ 23ರಿಂದ ಆಗಸ್ಟ್ 25ರ ನಡುವೆ ನಡೆಯಲಿದೆ. ಅಕ್ಟೋಬರ್ 24ರಂದು ನಡೆಯಲಿರುವ ವಿಜಯ ದಶಮಿ ಮೆರವಣಿಗೆಗೆ ಸರಿಯಾಗಿ 60 ದಿನ ಬಾಕಿ ಇದ್ದು, ಹಿಂದಿನ ವರ್ಷದಂತೆ ಅಭಿಮನ್ಯುವೇ ಚಿನ್ನದ ಅಂಬಾರಿ ಹೊತ್ತು ಸಾಗುವ ನಿರೀಕ್ಷೆ ಇದೆ. ಅರ್ಜುನ ಈ ಬಾರಿಯ ದಸರಾ ಮೆರವಣಿಗೆ ಅವಕಾಶ ವಂಚಿತನಾಗುವ ಸಾಧ್ಯತೆ ಇದೆ. ಗೋಪಾಲಸ್ವಾಮಿ, ಗಜೇಂದ್ರ ಕೂಡ ಕೂಡ ಈ ಬಾರಿಯ ದಸರಾದಲ್ಲಿ ಪಾಲ್ಗೊಳ್ಳುವುದು ಅನುಮಾನ ಎನ್ನಲಾಗಿದೆ.

ಈ ತಿಂಗಳ ಕೊನೆಯಲ್ಲಿ ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ.

ನಾವು ಹೊಸ ಆನೆಗಳನ್ನು ಹುಡುಕುತ್ತಿರುವುದು ನಿಜ. ವಿವಿಧ ಶಿಬಿರಗಳಿಗೆ ಭೇಟಿ ನೀಡಿ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಸಮಿತಿ ಅಂತಿಮ ತೀರ್ಮಾನ ಕೈಗೊಂಡ ನಂತರ ಈ ಬಾರಿಯ ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಜುಲೈ ಅಂತ್ಯದೊಳಗೆ ಪ್ರಕಟಿಸಲಾಗುವುದು ಎಂದು ಅರಣ್ಯ ಸಂರಕ್ಷಣಾಧಿಕಾರಿ (ಮೈಸೂರು ವೃತ್ತ) ಮಾಲತಿ ಪ್ರಿಯಾ ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಡಿಸಿಎಫ್ (ವನ್ಯಜೀವಿ) ಸೌರಭ್ ಕುಮಾರ್ ಮತ್ತು ಇತರ ಅರಣ್ಯಾಧಿಕಾರಿಗಳನ್ನು ಒಳಗೊಂಡ ತಂಡವು ಕಳೆದ ವರ್ಷ ದಸರಾ ಆಚರಣೆಯಲ್ಲಿ ಭಾಗವಹಿಸಿದ್ದ ಆನೆಗಳನ್ನು ಪರಿಶೀಲಿಸಲು ಆನೆ ಶಿಬಿರಗಳಿಗೆ ಭೇಟಿ ನೀಡುತ್ತಿದೆ. ಸಂಭಾವ್ಯ ಹೊಸ ಆನೆಗಳ ಬಗ್ಗೆ ಅಧಿಕಾರಿಗಳು ಮಾವುತರಿಂದ ಪ್ರತಿಕ್ರಿಯೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಈ ಹಿಂದಿನ ಮುಜುಗರದಿಂದ ಎಚ್ಚೆತ್ತ ಅರಣ್ಯ ಇಲಾಖೆ; ದಸರಾಗೆ ಬರುವ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್

‘ನಾವು ಹೊಸ ಆನೆಗಳ ಬಗ್ಗೆ ಮಾಹಿತಿ ಮತ್ತು ಶಿಫಾರಸುಗಳನ್ನು ಪಡೆಯುತ್ತಿದ್ದೇವೆ. ಆದರೆ, ಎಸಿಸಿಎಫ್ ಪ್ರಾಜೆಕ್ಟ್ ಟೈಗರ್, ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಇತರ ಅಧಿಕಾರಿಗಳ ನೇತೃತ್ವದ ಸಮಿತಿಯು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ’ ಎಂದು ಸೌರಭ್ ಕುಮಾರ್ ತಿಳಿಸಿದ್ದಾರೆ.

ಇಲ್ಲಿಯವರೆಗೆ ನಾಗರಹೊಳೆ ಮೀಸಲು ಅರಣ್ಯದ ಭೀಮನಕಟ್ಟೆ ಮತ್ತು ಮತ್ತಿಗೋಡು ಆನೆ ಶಿಬಿರಗಳಿಗೆ ಭೇಟಿ ನೀಡಿ ಕಳೆದ ವರ್ಷದ ದಸರಾದಲ್ಲಿ ಪಾಲ್ಗೊಂಡಿದ್ದ ಆನೆಗಳ ಪರಿಶೀಲನೆ ನಡೆಸಲಾಗಿದೆ. ಬಂಡೀಪುರದ ರಾಮಾಪುರ ಆನೆ ಶಿಬಿರ ಹಾಗೂ ಕೊಡಗಿನ ದುಬಾರೆ ಶಿಬಿರಕ್ಕೂ ಭೇಟಿ ನೀಡಲಾಗುವುದು. ಈ ಮಧ್ಯೆ, ಹೆಣ್ಣು ಆನೆಗಳ ಗರ್ಭಧಾರಣೆ ಪರೀಕ್ಷೆ ನಡೆಸುವಂತೆ ಶಿಬಿರದ ವೈದ್ಯರಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:57 pm, Mon, 24 July 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ