AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2023: ಇದೇ ಮೊದಲ ಬಾರಿಗೆ ಪಟಾಕಿ ಸಿಡಿಸಿ ದಸರಾ ಆನೆಗಳಿಗೆ ಅಭ್ಯಾಸ, ಗಜಪಡೆಗಳ ಪ್ರೆಗ್ನೆನ್ಸಿ ಟೆಸ್ಟ್ ವರದಿಗಾಗಿ ಕಾದು ಕುಳಿತ ಅಧಿಕಾರಿಗಳು

ಇದೇ ಮೊದಲ ಬಾರಿಗೆ ಆನೆಗಳ ಕ್ಯಾಂಪ್‌ನಲ್ಲೇ ದಸರಾ ಗಜಪಡೆಗೆ ಪಟಾಕಿ ಸಿಡಿಸಿ ಅಭ್ಯಾಸ ಮಾಡಿಸಲಾಗುತ್ತಿದೆ. ದಸರಾಗಾಗಿ ಕಾಡಿನಿಂದ ನಾಡಿಗೆ ಬರುವ ಗಜಪಡೆ ನಾಡಿನ ಶಬ್ದಕ್ಕೆ ಹೊಂದಿಕೊಳ್ಳಲು ಈ ರೀತಿ ಪಟಾಕಿ ಸಿಡಿಸಿ ಅಭ್ಯಾಸ ಮಾಡಿಸಲಾಗುತ್ತಿದೆ.

Mysuru Dasara 2023: ಇದೇ ಮೊದಲ ಬಾರಿಗೆ ಪಟಾಕಿ ಸಿಡಿಸಿ ದಸರಾ ಆನೆಗಳಿಗೆ ಅಭ್ಯಾಸ, ಗಜಪಡೆಗಳ ಪ್ರೆಗ್ನೆನ್ಸಿ ಟೆಸ್ಟ್ ವರದಿಗಾಗಿ ಕಾದು ಕುಳಿತ ಅಧಿಕಾರಿಗಳು
ದಸರಾ ಆನೆಗಳು
ರಾಮ್​, ಮೈಸೂರು
| Edited By: ಆಯೇಷಾ ಬಾನು|

Updated on:Aug 04, 2023 | 10:40 AM

Share

ಮೈಸೂರು, ಆ.04: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara 2023)ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್ 15 ರಂದು ಸಿಎಂ ಸಿದ್ದರಾಮಯ್ಯ(Siddaramaiah) ದಸರಾಗೆ ಅದ್ದೂರಿಯಾಗಿ ಚಾಲನೆ ನೀಡಲಿದ್ದಾರೆ. ಹೀಗಾಗಿ ದಸರಾ ಸಿದ್ಧತೆಗಳು ಶುರುವಾಗಿವೆ. ಮೈಸೂರು ದಸರಾ ಗಜಪಡೆಗಳಿಗೆ(Dasara Elephants) ಪಟಾಕಿ ಸಿಡಿಸಿ ತರಬೇತಿ ನೀಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಆನೆಗಳ ಕ್ಯಾಂಪ್‌ನಲ್ಲೇ ದಸರಾ ಗಜಪಡೆಗೆ ಪಟಾಕಿ ಸಿಡಿಸಿ ಅಭ್ಯಾಸ ಮಾಡಿಸಲಾಗುತ್ತಿದೆ.

ಸಿದ್ದರಾಮಯ್ಯ ಸರ್ಕಾರ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಘೋಷಿಸಿದೆ. ಪ್ರತಿ ವರ್ಷದಂತೆ ಈ ವರ್ಷ ಕೂಡ ನಾಡ ಹಬ್ಬ ದೇಶ-ವಿದೇಶಿಗರ ಮನ ಸೆಳೆಯಲಿದೆ. ಅ.15ರಿಂದ ಆರಂಭವಾಗುವ ನಾಡ ಹಬ್ಬ ದಸರಾಗೆ ಅರಮನೆ ನಗರಿ ಮೈಸೂರಿನಲ್ಲಿ ಭರ್ಜರಿ ಸಿದ್ಧತೆಗಳು ಶುರುವಾಗಿವೆ. ಇದೇ ಮೊದಲ ಬಾರಿಗೆ ಆನೆಗಳ ಕ್ಯಾಂಪ್‌ನಲ್ಲೇ ದಸರಾ ಗಜಪಡೆಗೆ ಪಟಾಕಿ ಸಿಡಿಸಿ ಅಭ್ಯಾಸ ಮಾಡಿಸಲಾಗುತ್ತಿದೆ. ದಸರಾಗಾಗಿ ಕಾಡಿನಿಂದ ನಾಡಿಗೆ ಬರುವ ಗಜಪಡೆ ನಾಡಿನ ಶಬ್ದಕ್ಕೆ ಹೊಂದಿಕೊಳ್ಳಲು ಈ ರೀತಿ ಪಟಾಕಿ ಸಿಡಿಸಿ ಅಭ್ಯಾಸ ಮಾಡಿಸಲಾಗುತ್ತಿದೆ.

ಇದನ್ನೂ ಓದಿ: ಮೈಸೂರು ದಸರಾದಲ್ಲಿ ಏರ್​ ಶೋ; ರಕ್ಷಣಾ ಸಚಿವ ರಾಜನಾಥ್​ ಸಿಂಗ್​ಗೆ ಸಿಎಂ ಸಿದ್ದರಾಮಯ್ಯ ಬರೆದ ಪತ್ರದಲ್ಲೇನಿದೆ?

ಇನ್ನು ಈ ಬಾರಿಯ ದಸರೆಗೆ ಹೊಸ ಆನೆಗಳನ್ನು ಕರೆತರಲು ಚಿಂತನೆ ನಡೆದಿದೆ. ಹೀಗಾಗಿ ಅರಣ್ಯ ಅಧಿಕಾರಿಗಳು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. ಹೀಗಾಗಿ ದಸರಾ ಗಜಪಡೆಯ ಹೆಣ್ಣು ಆನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲಾಗಿದ್ದು ಅಧಿಕಾರಿಗಳು ವರದಿ ನಿರೀಕ್ಷೆಯಲ್ಲಿದ್ದಾರೆ. ಒಟ್ಟು 6 ಹೆಣ್ಣಾನೆಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಪರೀಕ್ಷೆಗಾಗಿ ರಕ್ತ, ಮೂತ್ರದ ಮಾದರಿ ದೆಹಲಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಇನ್ನು 2-3 ದಿನಗಳಲ್ಲಿ ಪ್ರೆಗ್ನೆನ್ಸಿ ವರದಿ ಬರುವ ನಿರೀಕ್ಷೆ ಇದೆ. ವರದಿ ಬಂದ ನಂತರ ದಸರಾ ಗಜಪಡೆಯ ಆಯ್ಕೆ ಅಂತಿಮಗೊಳ್ಳಲಿದೆ.

ಮೈಸೂರು ದಸರಾ ಹಬ್ಬವನ್ನು ಅಕ್ಟೋಬರ್​ 15ರ ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತಯಾರಿ ನಡೆದಿದೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:24 am, Fri, 4 August 23

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ