AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2025: ಜಂಬೂ ಸವಾರಿಗೆ ಪಾಸ್​​ ಕಡ್ಡಾಯ, ಭದ್ರತಾ ಸಿದ್ಧತೆ ಹೇಗಿದೆ?

ಮೈಸೂರು ದಸರಾ 2025ರ ಜಂಬೂ ಸವಾರಿಗಾಗಿ ಪೊಲೀಸ್ ಇಲಾಖೆ ಭದ್ರತಾ ಸಿದ್ಧತೆಗಳನ್ನು ಅಂತಿಮಗೊಳಿಸಿದೆ. ಅರಣ್ಯ ಇಲಾಖೆ ಸಹಯೋಗದೊಂದಿಗೆ ಅಂತಿಮ ರಿಹರ್ಸಲ್ ನಡೆಸಲಾಗಿದ್ದು, ನಾಳೆಯಿಂದ ಸಂಪೂರ್ಣ ಬಂದೋಬಸ್ತ್ ಜಾರಿಗೆ ಬರಲಿದೆ. ಸಾರ್ವಜನಿಕರಿಗೆ ಪಾಸ್ ಕಡ್ಡಾಯವಾಗಿದ್ದು, ಭದ್ರತಾ ದೃಷ್ಟಿಯಿಂದ ಕಟ್ಟಡ ಅಥವಾ ಮರ ಏರುವುದನ್ನು ನಿಷೇಧಿಸಲಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on:Sep 30, 2025 | 2:47 PM

Share

ಮೈಸೂರು, ಸೆ.30: ಮೈಸೂರು ದಸರಾ (Mysuru Dasara) ದಂದು ಜಂಬೂ ಸವಾರಿಗಾಗಿ (Jamboo Savari) ಅರಣ್ಯ ಮತ್ತು ಪೊಲೀಸ್ ಇಲಾಖೆಗಳು ಅಂತಿಮ ಹಂತದ ಭದ್ರತಾ ಸಿದ್ಧತೆಗಳನ್ನು ಪೂರ್ಣಗೊಳಿಸಿವೆ. ಸೆ.2ರಂದು ನಡೆಯುವ ಜಂಬೂ ಸವಾರಿಗೆ ಇಂದು ಕೊನೆಯ ತಾಲಿಮು ನಡೆಸಲಾಗಿದ್ದು, ಗನ್ ಶಾಟ್, ಗೌರವ ವಂದನೆ ಹಾಗೂ ಆನೆ, ಬ್ಯಾಂಡ್ ಮತ್ತು ಕುದುರೆಗಳ ಸಮಗ್ರ ತಾಲೀಮು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್​​ ಆಯುಕ್ತರು ಹೇಳಿದ್ದಾರೆ. ನಾಳೆಯಿಂದ ಪೊಲೀಸ್ ಬಂದೋಬಸ್ತ್ ಜಾರಿಗೆ ಬರಲಿದೆ. ಭದ್ರತೆಯನ್ನು ಎರಡು ಹಂತಗಳಲ್ಲಿ ಆಯೋಜಿಸಲಾಗಿದ್ದು, ಎರಡನೇ ಹಂತದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಜಂಬೂ ಸವಾರಿ ಮತ್ತು ಬನ್ನಿಮಂಟಪ ಕಾರ್ಯಕ್ರಮಗಳಿಗೆ ಪ್ರವೇಶಿಸಲು ಪಾಸ್ ಕಡ್ಡಾಯಗೊಳಿಸಲಾಗಿದೆ. ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶವಿದ್ದು, ಕಟ್ಟುನಿಟ್ಟಿನ ಪರಿಶೀಲನೆ ನಡೆಸಲಾಗುತ್ತದೆ. ಪಾಸ್ ಇಲ್ಲದವರಿಗೆ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಅಂಬಾರಿ ಸಾಗುವ ಮಾರ್ಗದಲ್ಲಿರುವ ಕಟ್ಟಡ ಅಥವಾ ಮರಗಳ ಮೇಲೆ ಜನರು ಹತ್ತುವುದನ್ನು ನಿಷೇಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸಾರ್ವಜನಿಕರು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತಕ್ಕೆ ಸಹಕರಿಸಬೇಕೆಂದು ಎಂದು ಜಿಲ್ಲಾ ಪೊಲೀಸ್​​ ಕಮಿಷನರ್​ ಸೀಮಾ ಲಾಟ್ಕರ್ ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Tue, 30 September 25

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ