AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಬೆಳಕಿನ ಹಬ್ಬ; ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ರಾತ್ರಿ 10 ಗಂಟೆಯವರೆಗೆ ಮಾತ್ರ ವಿದ್ಯುತ್ ದೀಪಾಲಂಕಾರ

ಈ ದೀಪಾಲಂಕಾರ ವ್ಯವಸ್ಥೆ 102.9 ಕಿಲೋ ಮೀಟರ್ ಮಾಡಲಾಗಿದೆ. ಬರೋಬ್ಬರಿ 40 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ರಾತ್ರಿ 6.30 ರಿಂದ ರಾತ್ರಿ 10 ಗಂಟೆಯವರೆಗೂ ದೀಪಾಲಂಕಾರ ವ್ಯವಸ್ಥೆ ಇರಲಿದೆ.

ಮೈಸೂರಿನಲ್ಲಿ ಬೆಳಕಿನ ಹಬ್ಬ; ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ರಾತ್ರಿ 10 ಗಂಟೆಯವರೆಗೆ ಮಾತ್ರ ವಿದ್ಯುತ್ ದೀಪಾಲಂಕಾರ
ಮೈಸೂರು ವಿದ್ಯುತ್ ದೀಪಾಲಂಕಾರ
TV9 Web
| Edited By: |

Updated on: Oct 10, 2021 | 2:33 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2021 ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ವಿಶೇಷ ವಿಭಿನ್ನವಾದ ದೀಪಾಲಂಕಾರ ಮಾಡಲಾಗಿದೆ. ರಾತ್ರಿ 10ರವರೆಗೆ ವಿದ್ಯುತ್ ದೀಪಾಲಂಕಾರದ ಸಮಯ ವಿಸ್ತರಿಸಲಾಗಿತ್ತು. 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗುವ ಹಿನ್ನೆಲೆ ರಾತ್ರಿ 10 ಗಂಟೆಯವರೆಗೆ ಮಾತ್ರ ವಿದ್ಯುತ್ ದೀಪಾಲಂಕಾರಕ್ಕೆ ಅನುಮತಿ ನೀಡಲಾಗಿದೆ.

ಈ ದೀಪಾಲಂಕಾರ ವ್ಯವಸ್ಥೆ 102.9 ಕಿಲೋ ಮೀಟರ್ ಮಾಡಲಾಗಿದೆ. ಬರೋಬ್ಬರಿ 40 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ರಾತ್ರಿ 6.30 ರಿಂದ ರಾತ್ರಿ 10 ಗಂಟೆಯವರೆಗೂ ದೀಪಾಲಂಕಾರ ವ್ಯವಸ್ಥೆ ಇರಲಿದೆ. ಮೈಸೂರಿನ ಪ್ರಮುಖ ರಸ್ತೆಗಳಾದ ಜಂಬೂ ಸವಾರಿ ಸಾಗುತ್ತಿದ್ದ ಸಯ್ಯಾಜಿರಾವ್ ರಸ್ತೆ, ದೇವರಾಜ ಅರಸು ರಸ್ತೆ, ಅರಮನೆ ಸುತ್ತಮುತ್ತಲಿನ ರಸ್ತೆ, ಚಾಮುಂಡಿಬೆಟ್ಟದ ರಸ್ತೆ ಸೇರಿ ಹಲವು ರಸ್ತೆಗಳು ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಇದರ ಜೊತೆಗೆ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಗಳಿಂದ ಆಕರ್ಷಕ ಚಿತ್ತಾರವನ್ನು ಮೂಡಿಸಲಾಗಿದೆ. ದಸರಾ ಉದ್ಘಾಟನೆಯಾದ ಅಕ್ಟೋಬರ್ 7 ರಿಂದ ಜಂಬೂಸವಾರಿ ಮೆರವಣಿಗೆ ನಡೆಯುವ ಅಕ್ಟೋಬರ್ 15ರವರೆಗೆ ಈ ವಿದ್ಯುತ್ ದೀಪಾಲಂಕಾರ ಇರಲಿದೆ.

ಮೈಸೂರಿನಲ್ಲಿ ಸಾಂಪ್ರದಾಯಿಕ ಕುಸ್ತಿ ಆಯೋಜನೆ ರಾಜ್ಯ ಸರ್ಕಾರ ಈ ಬಾರಿ ಕುಸ್ತಿ ರದ್ದು ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾ ಭಾರತೀಯ ಶೈಲಿ ಕುಸ್ತಿ ಸಂಘದಿಂದ ಮೈಸೂರಿನಲ್ಲಿ ಸಾಂಪ್ರದಾಯಿಕ ಕುಸ್ತಿ ಆಯೋಜನೆ ಮಾಡಲಾಗಿದೆ. ಮೈಸೂರಿನ ಸಾಹುಕಾರ್ ಎಸ್.ಚನ್ನಯ್ಯ ಕುಸ್ತಿ ಅಖಾಡದಲ್ಲಿ ಆಯೋಜನೆ ಮಾಡಲಾಗಿದೆ. ಕುಸ್ತಿಯ ಅಖಾಡದಲ್ಲಿ‌ ಹಿರಿಯ, ಕಿರಿಯ50 ಜೋಡಿಗಳ ಪೈಲ್ವಾನ್‌ಗಳು ಭಾಗಿಯಾಗಲಿದ್ದಾರೆ. ರಾಜ್ಯ ಸರ್ಕಾರ ಈ ಬಾರಿ ಕುಸ್ತಿ ರದ್ದು ಮಾಡಿದೆ ದಸರಾ ಕುಸ್ತಿ ಪರಂಪರೆ ನಿಲ್ಲಬಾರದು ಎಂದು ಕುಸ್ತಿ ಪಟುಗಳಿಂದ ಕುಸ್ತಿ ಆಯೋಜನೆ ಮಾಡಲಾಗಿದೆ.

mys dasara lightings

ಮೈಸೂರು ವಿದ್ಯುತ್ ದೀಪಾಲಂಕಾರ

mys dasara lightings

ಮೈಸೂರು ವಿದ್ಯುತ್ ದೀಪಾಲಂಕಾರ

mys dasara lightings

ಮೈಸೂರು ವಿದ್ಯುತ್ ದೀಪಾಲಂಕಾರ

ಇದನ್ನೂ ಓದಿ: ಆನ್‌ಲೈನ್ ಜೂಜುಕೋರರಿಗೆ ಸರ್ಕಾರದಿಂದ ಶಾಕ್; ರಾಜ್ಯದಲ್ಲಿ ಇಂದಿನಿಂದ ಆನ್‌ಲೈನ್ ಗ್ಯಾಂಬ್ಲಿಂಗ್ ಬ್ಯಾನ್!

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ