AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಬೆಳಕಿನ ಹಬ್ಬ; ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ರಾತ್ರಿ 10 ಗಂಟೆಯವರೆಗೆ ಮಾತ್ರ ವಿದ್ಯುತ್ ದೀಪಾಲಂಕಾರ

ಈ ದೀಪಾಲಂಕಾರ ವ್ಯವಸ್ಥೆ 102.9 ಕಿಲೋ ಮೀಟರ್ ಮಾಡಲಾಗಿದೆ. ಬರೋಬ್ಬರಿ 40 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ರಾತ್ರಿ 6.30 ರಿಂದ ರಾತ್ರಿ 10 ಗಂಟೆಯವರೆಗೂ ದೀಪಾಲಂಕಾರ ವ್ಯವಸ್ಥೆ ಇರಲಿದೆ.

ಮೈಸೂರಿನಲ್ಲಿ ಬೆಳಕಿನ ಹಬ್ಬ; ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ರಾತ್ರಿ 10 ಗಂಟೆಯವರೆಗೆ ಮಾತ್ರ ವಿದ್ಯುತ್ ದೀಪಾಲಂಕಾರ
ಮೈಸೂರು ವಿದ್ಯುತ್ ದೀಪಾಲಂಕಾರ
TV9 Web
| Edited By: |

Updated on: Oct 10, 2021 | 2:33 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2021 ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ವಿಶೇಷ ವಿಭಿನ್ನವಾದ ದೀಪಾಲಂಕಾರ ಮಾಡಲಾಗಿದೆ. ರಾತ್ರಿ 10ರವರೆಗೆ ವಿದ್ಯುತ್ ದೀಪಾಲಂಕಾರದ ಸಮಯ ವಿಸ್ತರಿಸಲಾಗಿತ್ತು. 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗುವ ಹಿನ್ನೆಲೆ ರಾತ್ರಿ 10 ಗಂಟೆಯವರೆಗೆ ಮಾತ್ರ ವಿದ್ಯುತ್ ದೀಪಾಲಂಕಾರಕ್ಕೆ ಅನುಮತಿ ನೀಡಲಾಗಿದೆ.

ಈ ದೀಪಾಲಂಕಾರ ವ್ಯವಸ್ಥೆ 102.9 ಕಿಲೋ ಮೀಟರ್ ಮಾಡಲಾಗಿದೆ. ಬರೋಬ್ಬರಿ 40 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ರಾತ್ರಿ 6.30 ರಿಂದ ರಾತ್ರಿ 10 ಗಂಟೆಯವರೆಗೂ ದೀಪಾಲಂಕಾರ ವ್ಯವಸ್ಥೆ ಇರಲಿದೆ. ಮೈಸೂರಿನ ಪ್ರಮುಖ ರಸ್ತೆಗಳಾದ ಜಂಬೂ ಸವಾರಿ ಸಾಗುತ್ತಿದ್ದ ಸಯ್ಯಾಜಿರಾವ್ ರಸ್ತೆ, ದೇವರಾಜ ಅರಸು ರಸ್ತೆ, ಅರಮನೆ ಸುತ್ತಮುತ್ತಲಿನ ರಸ್ತೆ, ಚಾಮುಂಡಿಬೆಟ್ಟದ ರಸ್ತೆ ಸೇರಿ ಹಲವು ರಸ್ತೆಗಳು ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಇದರ ಜೊತೆಗೆ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಗಳಿಂದ ಆಕರ್ಷಕ ಚಿತ್ತಾರವನ್ನು ಮೂಡಿಸಲಾಗಿದೆ. ದಸರಾ ಉದ್ಘಾಟನೆಯಾದ ಅಕ್ಟೋಬರ್ 7 ರಿಂದ ಜಂಬೂಸವಾರಿ ಮೆರವಣಿಗೆ ನಡೆಯುವ ಅಕ್ಟೋಬರ್ 15ರವರೆಗೆ ಈ ವಿದ್ಯುತ್ ದೀಪಾಲಂಕಾರ ಇರಲಿದೆ.

ಮೈಸೂರಿನಲ್ಲಿ ಸಾಂಪ್ರದಾಯಿಕ ಕುಸ್ತಿ ಆಯೋಜನೆ ರಾಜ್ಯ ಸರ್ಕಾರ ಈ ಬಾರಿ ಕುಸ್ತಿ ರದ್ದು ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾ ಭಾರತೀಯ ಶೈಲಿ ಕುಸ್ತಿ ಸಂಘದಿಂದ ಮೈಸೂರಿನಲ್ಲಿ ಸಾಂಪ್ರದಾಯಿಕ ಕುಸ್ತಿ ಆಯೋಜನೆ ಮಾಡಲಾಗಿದೆ. ಮೈಸೂರಿನ ಸಾಹುಕಾರ್ ಎಸ್.ಚನ್ನಯ್ಯ ಕುಸ್ತಿ ಅಖಾಡದಲ್ಲಿ ಆಯೋಜನೆ ಮಾಡಲಾಗಿದೆ. ಕುಸ್ತಿಯ ಅಖಾಡದಲ್ಲಿ‌ ಹಿರಿಯ, ಕಿರಿಯ50 ಜೋಡಿಗಳ ಪೈಲ್ವಾನ್‌ಗಳು ಭಾಗಿಯಾಗಲಿದ್ದಾರೆ. ರಾಜ್ಯ ಸರ್ಕಾರ ಈ ಬಾರಿ ಕುಸ್ತಿ ರದ್ದು ಮಾಡಿದೆ ದಸರಾ ಕುಸ್ತಿ ಪರಂಪರೆ ನಿಲ್ಲಬಾರದು ಎಂದು ಕುಸ್ತಿ ಪಟುಗಳಿಂದ ಕುಸ್ತಿ ಆಯೋಜನೆ ಮಾಡಲಾಗಿದೆ.

mys dasara lightings

ಮೈಸೂರು ವಿದ್ಯುತ್ ದೀಪಾಲಂಕಾರ

mys dasara lightings

ಮೈಸೂರು ವಿದ್ಯುತ್ ದೀಪಾಲಂಕಾರ

mys dasara lightings

ಮೈಸೂರು ವಿದ್ಯುತ್ ದೀಪಾಲಂಕಾರ

ಇದನ್ನೂ ಓದಿ: ಆನ್‌ಲೈನ್ ಜೂಜುಕೋರರಿಗೆ ಸರ್ಕಾರದಿಂದ ಶಾಕ್; ರಾಜ್ಯದಲ್ಲಿ ಇಂದಿನಿಂದ ಆನ್‌ಲೈನ್ ಗ್ಯಾಂಬ್ಲಿಂಗ್ ಬ್ಯಾನ್!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ