ಇದೇ ಮೊದಲ ಬಾರಿ ಮೈಸೂರು ದಸರಾ ಮಹೋತ್ಸವದ ಪ್ರಾಯೋಜಕತ್ವಕ್ಕೆ ಆಹ್ವಾನ

Mysuru Dasara sponsorship: ಇದೇ ಮೊದಲ ಬಾರಿಗೆ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಾಯೋಜಕತ್ವಕ್ಕೆ ಆಹ್ವಾನಿಸಲಾಗಿದೆ. 3 ಕೋಟಿ ರೂಪಾಯಿಗೆ ನಾಡಹಬ್ಬ ದಸರೆಯ ಟೈಟಲ್ ಪ್ರಯೋಜಕತ್ವ ನೀಡಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ಇನ್ನು ಈ ಬಗ್ಗೆ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಅವರು ಪ್ರಾಯೋಜಕತ್ವಗಳ ಬಗ್ಗೆ ಎಲ್ಲಾ ಅಂಶಗಳನ್ನು ವಿವರಿಸಿದ್ದು, ವಿವರ ಈ ಕೆಳಗಿನಂತಿದೆ.

ಇದೇ ಮೊದಲ ಬಾರಿ ಮೈಸೂರು ದಸರಾ ಮಹೋತ್ಸವದ ಪ್ರಾಯೋಜಕತ್ವಕ್ಕೆ ಆಹ್ವಾನ
ಮೈಸೂರು ದಸರಾ
Follow us
|

Updated on: Oct 06, 2023 | 8:59 AM

ಮೈಸೂರು, (ಅಕ್ಟೋಬರ್ 06): ಸಿದ್ದರಾಮಯ್ಯ (Siddaramaiah) ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ತವರು ಜಿಲ್ಲೆಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು (Mysore Dasara 2023) ಈ ಬಾರಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದ್ದರು. ಆದ್ರೆ, ಸರಿಯಾದ ಸಮಯಕ್ಕೆ ಮಳೆಯಾಗದಿದ್ದರಿಂದ ಕರ್ನಾಟಕದಲ್ಲಿ ಬರ ಆವರಿಸಿದೆ. ಬರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅದ್ಧೂರಿ ದಸರಾ ಕೈಬಿಟ್ಟು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಿದೆ. ಹೀಗಾಗಿ ಸರ್ಕಾರದಿಂದ ಕಡಿಮೆ ಅನುದಾನ ಸಿಗಬಹುದೆಂದು ಜಿಲ್ಲಾಡಳಿತ ಪ್ರಾಯೋಜಕತ್ವದ ಮೊರೆ ಹೋಗಿದೆ.

ಹೌದು… 3 ಕೋಟಿ ರೂಪಾಯಿಗೆ ನಾಡಹಬ್ಬ ದಸರೆಯ ಟೈಟಲ್ ಪ್ರಾಯೋಜಕತ್ವ ನೀಡಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ಪ್ರಾಯೋಜಕತ್ವ ಸಂಬಂಧ ಲಲಿತ್ ಮಹಲ್ ಹೋಟೆಲ್​ನಲ್ಲಿ ನಡೆದ ವಾಣಿಜ್ಯೋದ್ಯಮಿಗಳೊಂದಿನ ಸಭೆಯಲ್ಲಿ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಅವರು ಪ್ರಾಯೋಜಕತ್ವಗಳ ಬಗ್ಗೆ ಎಲ್ಲಾ ಅಂಶಗಳನ್ನು ವಿವರಿಸಿದ್ದಾರೆ.

ಇದನ್ನೂ ಓದಿ: Mysore Dasara 2023: ಮೈಸೂರು ಅರಮನೆಯಲ್ಲಿ ಯಾವಾಗ-ಯಾವ್ಯಾವ ಪೂಜೆ? ಇಲ್ಲಿದೆ‌ ಕಾರ್ಯಕ್ರಮಗಳ ಪಟ್ಟಿ

ನಾಡಹಬ್ಬ ಟೈಟಲ್​ ಪಡೆದರೆ 3 ಕೋಟಿ ರೂಪಾಯಿ, ಪ್ರಯೋಜಕತ್ವದ ವಿವಿಧ ವಿಭಾಗಗಳಾದ ಪ್ಲಾಟಿನಂಗೆ 1 ಕೋಟಿ ರೂ. ಗೋಲ್ಡ್​ಗೆ 50 ಲಕ್ಷ ರೂ. ಬೆಳ್ಳಿಗೆ 25 ಲಕ್ಷ ರೂ. ಅಸೋಸಿಯೇಟ್ ಮತ್ತು ಈವೆಂಟ್ ಸ್ಪಾನ್ಸರ್​ಗೆ 3 ಲಕ್ಷ ರೂ. ಫಿಕ್ಸ್ ಮಾಡಲಾಗಿದ್ದು, ಪ್ರಾಯೋಜಕತ್ವ ನೀಡುವವರಿಗೆ ದಸರಾ ಕಾರ್ಯಕ್ರಮಗಳಲ್ಲಿ ಅವರ ಕಂಪನಿಯ ಜಾಹೀರಾತುಗಳನ್ನು ಪ್ರದರ್ಶಿಸಲು ಅವಕಾಶ ನೀಡಲಾಗಿದೆ.

ಪ್ರಾಯೋಜಕತ್ವ ನೀಡುವವರು ಇಂದು (ಅಕ್ಟೋಬರ್ 6 ಮಧ್ಯಾಹ್ನ 12ರೊಳಗೆ ಮಾಹಿತಿ ನೀಡಬೇಕೆಂದು ಎಂದು ಜಿಲ್ಲಾಧಿಕಾರಿಗಳು ಸಮಯ ನೀಡಿದ್ದಾರೆ. ಕಂಪನಿಗಳು, ಉದ್ಯಮಿಗಳು ಪ್ರಾಯೋಜಕತ್ವ ವಹಿಸಲು ಅವಕಾಶ ಇದೆ. ಪೂರ್ಣ ಕಾರ್ಯಕ್ರಮ, ಒಂದು ದಿನ ಅಥವಾ ಒಂದು ಕಾರ್ಯಕ್ರಮ ಹೀಗೆ ಯಾವ ರೀತಿಯಾದರೂ ಪ್ರಯೋಜಕತ್ವ ನೀಡಬಹುದಾಗಿದೆ ಎಂದು ಡಿಸಿ ವಿವರಿಸಿದ್ದಾರೆ.

ಕಳೆದ ವರ್ಷ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಒಟ್ಟು 26 ಕೋಟಿ ರೂ. ಖರ್ಚಾಗಿತ್ತು. ಈ ವರ್ಷವೂ 30 ಕೋಟಿ ರೂ. ವೆಚ್ಚದಲ್ಲಿ ದಸರಾ ಮಹೋತ್ಸ ವವನ್ನು ಅದ್ಧೂರಿಯಾಗಿ ಆಚರಿಸಲು ಜಿಲ್ಲಾಡಳಿತ ಮುಂದಾಗಿತ್ತು. ಆದ್ರೆ, ಬರ ಆವರಿಸಿದ್ದರಿಂದ ಸರಳವಾಗಿ ಆಚರಿಸಲು ತೀರ್ಮಾನಿಸಿದೆ.

ಮೈಸೂರು ದಸರಾ ಬಗ್ಗೆ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!