Mysuru Dasara 2021: ಮೈಸೂರು ಅರಮನೆಗೆ ಇಂದು ದಸರಾ ಗಜಪಡೆ ಆಗಮನ, ಅದ್ಧೂರಿ ಸ್ವಾಗತಕ್ಕಾಗಿ ಸಿದ್ಧತೆ

ಕ್ಯಾಪ್ಟನ್ ಅಭಿಮನ್ಯು, ಅಶ್ವತ್ಥಾಮ, ಧನಂಜಯ, ವಿಕ್ರಮ, ಗೋಪಾಲಸ್ವಾಮಿ, ಕಾವೇರಿ, ಚೈತ್ರ, ಲಕ್ಷ್ಮೀ ಆನೆಗಳು ಸದ್ಯ ಅಶೋಕಪುರಂನ ಅರಣ್ಯ ಭವನದಲ್ಲಿದ್ದು ಬೆಳಗ್ಗೆ 7.30ಕ್ಕೆ ಅರಣ್ಯ ಭವನದಿಂದ ಹೊರಡಲಿವೆ. ಕಾಲ್ನಡಿಗೆಯ ಮೂಲಕ ಮೈಸೂರು ಅರಮನೆಗೆ ಆಗಮಿಸಲಿವೆ.

Mysuru Dasara 2021: ಮೈಸೂರು ಅರಮನೆಗೆ ಇಂದು ದಸರಾ ಗಜಪಡೆ ಆಗಮನ, ಅದ್ಧೂರಿ ಸ್ವಾಗತಕ್ಕಾಗಿ ಸಿದ್ಧತೆ
ಸಂಗ್ರಹ ಚಿತ್ರ
Follow us
| Updated By: ಆಯೇಷಾ ಬಾನು

Updated on: Sep 16, 2021 | 7:31 AM

ಮೈಸೂರು: ಐತಿಹಾಸಿಕ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮೈಸೂರು ಅರಮನೆಗೆ ಇಂದು ದಸರಾ ಗಜಪಡೆ ಎಂಟ್ರಿಕೊಡಲಿದ್ದು, ಸಂಭ್ರಮ ಆರಂಭವಾಗಲಿದೆ. ರಾಜ ಬೀದಿಯ ಮೆರವಣಿಗೆಯೇ ಆಗಲಿ.. ಅರಮನೆ ಅಂಗಳಕ್ಕಷ್ಟೇ ಸವಾರಿ ಇರಲಿ.. ಮೈಸೂರು ದಸರಾ ಅಂದ ಮೇಲೆ ಗಜಪಡೆ ಇರಲೇಬೇಕು. ಹೀಗಾಗಿ, ಐತಿಹಾಸಿಕ ದಸರಾದ ಜಂಬೂಸವಾರಿಗಾಗಿ, ಆನೆಗಳ ತಂಡ ಸೆಪ್ಟೆಂಬರ್ 13ರಂದು ಕಾಡಿನಿಂದ ನಾಡಿನತ್ತ ಹೊರಟಿದ್ದು ಇಂದು (ಸೆಪ್ಟೆಂಬರ್ 16) ಮೈಸೂರು ಅರಮನೆಗೆ ಆಗಮಿಸಲಿವೆ.

ಕ್ಯಾಪ್ಟನ್ ಅಭಿಮನ್ಯು, ಅಶ್ವತ್ಥಾಮ, ಧನಂಜಯ, ವಿಕ್ರಮ, ಗೋಪಾಲಸ್ವಾಮಿ, ಕಾವೇರಿ, ಚೈತ್ರ, ಲಕ್ಷ್ಮೀ ಆನೆಗಳು ಸದ್ಯ ಅಶೋಕಪುರಂನ ಅರಣ್ಯ ಭವನದಲ್ಲಿದ್ದು ಬೆಳಗ್ಗೆ 7.30ಕ್ಕೆ ಅರಣ್ಯ ಭವನದಿಂದ ಹೊರಡಲಿವೆ. ಕಾಲ್ನಡಿಗೆಯ ಮೂಲಕ ಮೈಸೂರು ಅರಮನೆಗೆ ಆಗಮಿಸಲಿವೆ. ಜಯಮಾರ್ತಾಂಡ ದ್ವಾರದ ಮೂಲಕ ಅರಮನೆ ಆವರಣಕ್ಕೆ ಗಜಪಡೆ ಪ್ರವೇಶ ಮಾಡಲಿದ್ದು ಬೆಳಗ್ಗೆ 8.36ರಿಂದ 9.11ರ ಶುಭ ಲಗ್ನದಲ್ಲಿ ಗಜಪಡೆಗೆ ಜಿಲ್ಲಾ ಉಸ್ತುವಾರಿ ಸಚಿವ S.T.ಸೋಮಶೇಖರ್‌ರಿಂದ ಪೂಜೆ ಸಲ್ಲಿಸಲಾಗುತ್ತೆ. ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಗಜಪಡೆಯನ್ನು ಗಣ್ಯರು ಸ್ವಾಗತಿಸಲಿದ್ದಾರೆ.

ಸೆ.8ಕ್ಕೆ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆನೆ ಪಟ್ಟಿ ಬಿಡುಗಡೆಯಾಗಿದ್ದು, ಇದೇ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ಕುರಿತಾದ ಬಣ್ಣದ ಚಿತ್ರವುಳ್ಳ ಕೈಪಿಡಿ ತಯಾರಿಸಲಾಗಿದೆ. ಗಜಪಯಣಕ್ಕೆ ಸೆ.13, 15 ಹಾಗೂ 16 ಒಳ್ಳೆ ದಿನವಾಗಿದೆ. ಅದರಲ್ಲೂ ಸೆ.13 ಭಾದ್ರಪದ ಸಪ್ತಮಿ ದಿನ ಆಗಿರುವುದರಿಂದ ಗಜಪಯಣಕ್ಕೆ ಒಳ್ಳೆದಿನ. ಅಂದು ಆನೆಗಳು ಅರಮನೆ ಪ್ರವೇಶಿಸುವುದು ಸೂಕ್ತ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸೆ.13 ರಂದು ಬೆಳಿಗ್ಗೆ 11 ಗಂಟೆ ನಂತರ ಹುಣಸೂರು ತಾಲೂಕಿನ ವೀರನಹೊಸಳ್ಳಿ ಗೇಟ್ ಬಳಿ ಅಭಿಮನ್ಯು ನೇತೃತ್ವದ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಮೈಸೂರಿನ ಅರಣ್ಯ ಭವನಕ್ಕೆ ಕರೆತರಲಾಗುತ್ತದೆ. ಸೆ.16 ರಂದು ಅರಣ್ಯ ಭವನದಲ್ಲಿ ಅರಣ್ಯ ಇಲಾಖೆ ವತಿಯಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ನಂತರ ಅರಮನೆಗೆ ಕರೆದುಕೊಂಡು ಬರಲು ನಿರ್ಧಾರ ಮಾಡಲಾಗಿತ್ತು.

ಇದನ್ನೂ ಓದಿ: Mysuru Dasara 2021: ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ವೀರನಹೊಸಹಳ್ಳಿಯಿಂದ ನಾಳೆ ಗಜಪಯಣ ಆರಂಭ

ತಾಜಾ ಸುದ್ದಿ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ