AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಗಜಪಡೆ, ಮಾವುತರಿಗೆ 2.04 ಕೋಟಿ ರೂ. ಮೊತ್ತದ ವಿಮೆ ಸೌಲಭ್ಯ ನೀಡಿದ ಅರಣ್ಯ ಇಲಾಖೆ

ಮೈಸೂರು ದಸರಾ 2025ರ ಗಜಪಡೆ, ಮಾವುತರು ಮತ್ತು ಸಿಬ್ಬಂದಿಗೆ ಒಟ್ಟು 2.04 ಕೋಟಿ ರೂ ವಿಮಾ ಸೌಲಭ್ಯ ಒದಗಿಸಲಾಗಿದೆ. ಆನೆಗಳಿಗೆ 68 ಲಕ್ಷ ರೂ, ಸಿಬ್ಬಂದಿಗೆ 86 ಲಕ್ಷ ರೂ ಮತ್ತು ಸಾರ್ವಜನಿಕ ಹಾನಿಗೆ 50 ಲಕ್ಷ ರೂ ವಿಮೆ ಒಳಗೊಂಡಿದೆ. ಈ ವಿಮಾ ಪಾಲಿಸಿಯು ಆಗಸ್ಟ್ 4 ರಿಂದ ಅಕ್ಟೋಬರ್ 5 ರವರೆಗೆ ಜಾರಿಯಿರಲಿದೆ.

ಮೈಸೂರು ದಸರಾ ಗಜಪಡೆ, ಮಾವುತರಿಗೆ 2.04 ಕೋಟಿ ರೂ. ಮೊತ್ತದ ವಿಮೆ ಸೌಲಭ್ಯ ನೀಡಿದ ಅರಣ್ಯ ಇಲಾಖೆ
ಗಜಪಡೆ
ರಾಮ್​, ಮೈಸೂರು
| Edited By: |

Updated on: Aug 06, 2025 | 8:53 AM

Share

ಮೈಸೂರು, ಆಗಸ್ಟ್​ 06: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗಜಪಡೆ ಕಲರವ ಜೋರಾಗಿದೆ. ನಾಡಹಬ್ಬ ದಸರಾ (Mysuru Dasara) ಮಹೋತ್ಸವಕ್ಕೆ ಮೈಸೂರಿಗೆ ಬಂದ ಕ್ಯಾಪ್ಟನ್ ಅಭಿಮನ್ಯು ಆ್ಯಂಡ್​ ತಂಡ ರಿಲ್ಯಾಕ್ಸ್ ಮೂಡ್‌ನಲ್ಲಿವೆ. ಗಜಪಡೆ ಅರಣ್ಯ ಭವನದಲ್ಲಿ ವಿಶ್ರಾಂತಿ ಪಡೆಯುತ್ತಿವೆ‌. ಈ ಗಜಪಡೆ ಮೈಸೂರಿನಲ್ಲಿರುವಾಗ ಏನಾದರೂ ಹಾನಿ ಸಂಭವಿಸಿದರೆ ಅದರ ನಷ್ಟ ಪರಿಹರಿಸಲು ಅರಣ್ಯ ಇಲಾಖೆಯಿಂದ ಮಾವುತರು, ಕಾವಾಡಿಗಳು ಮತ್ತು ಉಸ್ತುವಾರಿ ಸಿಬ್ಬಂದಿಗೆ 2.04 ಕೋಟಿ ರೂ. ಮೊತ್ತದ ವಿಮೆ (Insurance) ಸೌಲಭ್ಯ ಒದಗಿಸಲಾಗಿದೆ.

2.04 ಕೋಟಿ ರೂ. ಮೊತ್ತದ ವಿಮೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ದಿನಗಣನೆ ಶುರುವಾಗಿದೆ. ಇತ್ತ ಗಜಪಡೆ ಕೂಡ ಮೈಸೂರಿಗೆ ಬಂದಿದೆ. ಈ ಗಜಪಡೆ ಮೈಸೂರಲ್ಲಿರುವಾಗ ಏನಾದರೂ ಹಾನಿ ಸಂಭವಿಸಿದರೆ ಅದರ ನಷ್ಟ ಪರಿಹರಿಸಲು ಅರಣ್ಯ ಇಲಾಖೆಯಿಂದ ವಿಮಾ ಸೌಲಭ್ಯದ ಮೊರೆ ಹೋಗಲಾಗಿದೆ. ಆಗಸ್ಟ್​ 4ರಿಂದ ಅಕ್ಟೋಬರ್​​ 5ರವರೆಗೆ ಈ ಸುರಕ್ಷತೆ ಚಾಲ್ತಿಯಲ್ಲಿರಲಿದೆ. ಟೆಂಡರ್‌ ಮೂಲಕ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್​ ಕಂಪನಿ ಲಿಮಿಟೆಡ್ ವಿಮೆ ಸೌಲಭ್ಯ ಮಾಡಿಸಲಾಗಿದೆ.

ಇದನ್ನೂ ಓದಿ: ಮೈಸೂರು ದಸರಾ: ಗಜಪಯಣಕ್ಕೆ ವಿಧ್ಯುಕ್ತ ಚಾಲನೆ, ಸಾಂಸ್ಕೃತಿಕ ನಗರಿ ತಲುಪಿದ ಆನೆಗಳ ಮೊದಲ ತಂಡ

ಇದನ್ನೂ ಓದಿ
Image
ದಸರಾ: ಗಜಪಯಣಕ್ಕೆ ವಿಧ್ಯುಕ್ತ ಚಾಲನೆ, ಸಾಂಸ್ಕೃತಿಕ ನಗರಿ ತಲುಪಿದ ಆನೆಗಳ ತಂಡ
Image
ದಸರಾ ಆನೆಗಳಿಗೆ ರಾಜಾತಿಥ್ಯ ನೀಡಲು ಅರಮನೆಯಲ್ಲಿ ಭರ್ಜರಿ ಸಿದ್ಧತೆ
Image
ಮೈಸೂರು ದಸರಾ ಜಂಬೂ ಸವಾರಿಗೆ 9 ಆನೆಗಳ ಆಯ್ಕೆ ಅಂತಿಮ: ಇಲ್ಲಿದೆ ಪಟ್ಟಿ
Image
ಬೆಳಗಿನ ಜಾವದಿಂದಲೇ ದೇವಿದರ್ಶನಕ್ಕಾಗಿ ಸಾಲುಗಟ್ಟಿರುವ ಭಕ್ತರು

ದಸರಾ ಗಜಪಡೆಯ 14 ಆನೆಗಳ ಪೈಕಿ ಈ ಬಾರಿ 10 ಗಂಡಾನೆಗಳಿವೆ. ಈ ಗಂಡಾನೆಗಳಿಗೆ ತಲಾ 5 ಲಕ್ಷ ರೂ, 4 ಹೆಣ್ಣಾನೆಗಳಿಗೆ ತಲಾ 4.5 ಲಕ್ಷ ರೂ. 14 ಆನೆಗಳಿಗೆ ಒಟ್ಟು 68 ಲಕ್ಷ ರೂ. ಮೊತ್ತದ ವಿಮೆ ಮಾಡಿಸಲಾಗಿದೆ. 14 ಮಾವುತರು, 14 ಕಾವಾಡಿಗಳು, ಡಿಸಿಎಫ್, ಇಬ್ಬರು ಆರ್‌ಎಫ್‌ಓ, ಪಶುವೈದ್ಯಾಧಿಕಾರಿ, ಓರ್ವ ಸಹಾಯಕರು, 10 ಮಂದಿ ವಿಶೇಷ ಮಾವುತರು ಸೇರಿ ಒಟ್ಟು 43 ಮಂದಿಗೆ ತಲಾ 2 ಲಕ್ಷ ರೂ.ನಂತೆ 86 ಲಕ್ಷ ರೂ. ಮೊತ್ತದ ವಿಮೆ ಸೌಲಭ್ಯ ನೀಡಲಾಗಿದೆ.

ಮೈಸೂರಿನಲ್ಲಿ ದಸರಾ ಆನೆಗಳಿಂದ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶ ಅಥವಾ ಸಾರ್ವಜನಿಕರಿಗೆ ತೊಂದರೆಯಾದರೆ ನಷ್ಟ ಭರಿಸಲು 50 ಲಕ್ಷ ರೂ. ಒಟ್ಟು 2.04 ಕೋಟಿ ರೂ. ಮೊತ್ತದ ವಿಮೆ ಮಾಡಿಸಿದ್ದು, ಇದಕ್ಕೆ ಅರಣ್ಯ ಇಲಾಖೆಯಿಂದ 67 ಸಾವಿರ ರೂ ಪ್ರಿಮಿಯಂ ಮೊತ್ತ ಪಾವತಿ ಮಾಡಲಾಗುವುದು.

ಇದನ್ನೂ ಓದಿ: ಮೈಸೂರು: ದಸರಾ ಆನೆಗಳಿಗೆ ರಾಜಾತಿಥ್ಯ ನೀಡಲು ಅರಮನೆಯಲ್ಲಿ ಭರ್ಜರಿ ಸಿದ್ಧತೆ

ಅಭಿಮನ್ಯು ನೇತೃತ್ವದ 9 ಆನೆಗಳ ಮೊದಲ ತಂಡ ಮೈಸೂರಿಗೆ ಬರ್ತಿದ್ದಂತೆಯೇ, ರಕ್ತ ಪರೀಕ್ಷೆ ಮಾಡಲಾಗಿದ್ದು, ಎಲ್ಲಾ ಆನೆಗಳು ಆರೋಗ್ಯವಾಗಿವೆ. ಆಗಸ್ಟ್​ 10ರಂದು ದಸರಾ ಗಜಪಡೆ ಮೈಸೂರು ಅರಮನೆಗೆ ಎಂಟ್ರಿ ಕೊಡಲಿವೆ. ಇದೇ ಮೂದಲ ಬಾರಿಗೆ ಸಂಜೆ ವೇಳೆ ಗಜಪಡೆಯನ್ನ ಅರಮನೆಗೆ ಸ್ವಾಗತಿಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು