AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದಯಗಿರಿ ಗಲಭೆ: ಸತೀಶ್ ಗಡಿಪಾರಿಗೆ ಸಿದ್ಧತೆ ನಡೆಸಿದ್ದ ಪೊಲೀಸರಿಗೆ ಹಿನ್ನಡೆ!

ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್​ನಿಂದ ಶುರುವಾದ ಮೈಸೂರು ಉದಯಗಿರಿ ಗಲಾಟೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜಕೀಯ ಸ್ವರೂಪ ಪಡೆದುಕೊಂಡಿತ್ತು. ಅಲ್ಲದೇ ಪರ ವಿರೋಧದ ಆರೋಪಗಳು ಸಹ ತಾರಕ್ಕೇರಿದ್ದು, ಇದರ ಮಧ್ಯೆ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿ ಸತೀಶ್​ನನ್ನು ಗಡಿಪಾರಿಗೆ ಸಿದ್ಧತೆ ನಡೆಸಿದ್ದ ಮೈಸೂರು ಪೊಲೀಸರಿಗೆ ಹಿನ್ನಡೆಯಾಗಿದೆ.

ಉದಯಗಿರಿ ಗಲಭೆ: ಸತೀಶ್ ಗಡಿಪಾರಿಗೆ ಸಿದ್ಧತೆ ನಡೆಸಿದ್ದ ಪೊಲೀಸರಿಗೆ ಹಿನ್ನಡೆ!
Udayagiri Police Station (1)
Follow us
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ

Updated on:Feb 25, 2025 | 9:01 PM

ಮೈಸೂರು, (ಫೆಬ್ರವರಿ 25): ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸತೀಶ್​ ಗಡಿಪಾರು ಪ್ರಕ್ರಿಯೆಗೆ ಕೋರ್ಟ್​ ತಡೆ ನೀಡಿದೆ. ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್​​ ಮಾಡಿ ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟಕ್ಕೆ ಕಾರಣನಾದ ಆರೋಪಿ ಸತೀಶ್​ ಗಡಿಪಾರಿಗೆ ಪೊಲೀಸರು ಸಿದ್ಧತೆ ನಡೆಸಿದ್ದರು. ಆದ್ರೆ, ಪೊಲೀಸರ ಕ್ರಮ ಪ್ರಶ್ನಿಸಿ ಸತೀಶ್ ಪರ ವಕೀಲ ಮೈಸೂರು ಜಿಲ್ಲಾ ಕೋರ್ಟ್​ ಮೆಟ್ಟಿಲೇರಿದ್ದರು. ಇದೀಗ ಕೋರ್ಟ್​ ಸತೀಶ್ ಅರ್ಜಿಯನ್ನು ಪುರಸ್ಕರಿಸಿದ್ದು, ಆರೋಪಿ ಸತೀಶ್​ನನ್ನು ಗಡಿಪಾರು ಮಾಡದಂತೆ ಕೋರ್ಟ್ ಆದೇಶ ಹೊರಡಿಸಿದೆ. ಇದರಿಂದ ಮೈಸೂರು ಪೊಲೀಸರಿಗೆ ಹಿನ್ನಡೆಯಾದಂತಾಗಿದೆ.

ಮುಸ್ಲಿಂ ಧರ್ಮದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್​ ಮಹರಿಬಿಟ್ಟ ಪ್ರಕರಣದ ಆರೋಪಿ ಸತೀಶ್​​ ಗಡಿಪಾರಿಗೆ ಮೈಸೂರು ನಗರ ಪೊಲೀಸರು ಮುಂದಾಗಿದ್ದು, ಈ ಬಗ್ಗೆ ಕಾರಣ ಕೇಳಿ ನೋಟಿಸ್ ನೀಡಿದ್ದರು. ಈ ಬಗ್ಗೆ ಸತೀಶ್ ಪರ ವಕೀಲ ಭಾಸ್ಕರ್​ ಅವರು ನಗರ ಪೊಲೀಸ್​ ಆಯುಕ್ತರ ಕಚೇರಿಯಲ್ಲಿ ವಿಚಾರಣೆಗೆ ಭಾಗಿಯಾಗಿ ಆಕ್ಷೇಪಣೆ ಸಲ್ಲಿಸಿದ್ದರು. ಅದಾದ ಬಳಿಕ ಪೊಲೀಸರ ನಿರ್ಧಾರ ಪ್ರಶ್ನಿಸಿ ಜಿಲ್ಲಾ ನ್ಯಾಯಾಲಯದ ಮೊರೆ ಹೋಗಿದ್ದರು.

ಇದನ್ನೂ ಓದಿ: ಮೈಸೂರು: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ, ಗಲಭೆಗೆ ಪ್ರಚೋದನೆ ನೀಡಿದ ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನ

ದೆಹಲಿ ವಿಧಾನಸಭೆ ಫಲಿತಾಂಶ ಪ್ರಕಟವಾದ ಬಳಿಕ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಿದ ಪೋಸ್ಟ್​ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟ ಪ್ರಕರಣದ ಆರೋಪಿ ಸತೀಶ್. ಈತನ ಪೋಸ್ಟ್​ನಿಂದಾಗಿ ಕೆರಳಿದ ಮುಸ್ಲಿಂ ಸಮುದಾಯ ಸತೀಶ್​ನನ್ನು ಕೂಡಲೇ ಬಂಧಿಸಬೇಕೆಂದು ಪ್ರತಿಭಟನೆಗಿಳಿತು. ಬಳಿಕ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಮುಸ್ಲಿಂ ಸಮುದಾಯದ ನೂರಾರು ಜನರು ಸೇರಿಕೊಂಡು ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದರು. ಪೊಲೀಸರು ಹಾಗೂ ಅವರ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿದ್ದು, ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು.

ಬಳಿಕ ಪೊಲೀಸರು ಆರೋಪಿ ಸತೀಶ್​ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆದ್ರೆ, ಸತೀಶ್​ಗೆ ಮೈಸೂರು 2ನೇ ಹೆಚ್ಚುವರಿ ಜಿಲ್ಲಾ ಸಿವಿಲ್​ ನ್ಯಾಯಾಲಯವು ಜಾಮೀನು ನೀಡಿತ್ತು.

Published On - 8:55 pm, Tue, 25 February 25

‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ