AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಲ್ಲೇ ನಿನ್ನ ಹೆಣ ಬೀಳತ್ತೆ!’ ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಪ್ರಕರಣದ ಬೆನ್ನಲ್ಲೇ ಸಿಎಂ ತವರಿನಲ್ಲೂ ಇಂತದ್ದೇ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಮೈಸೂರಿನ ಮಹಿಳಾ ಅಧಿಕಾರಿಗೆ ವ್ಯಕ್ತಿಯೋರ್ವ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದು ಬೆಳಕಿಗೆ ಬಂದಿದೆ.

'ಇಲ್ಲೇ ನಿನ್ನ ಹೆಣ ಬೀಳತ್ತೆ!' ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!
'ಇಲ್ಲೇ ನಿನ್ನ ಹೆಣ ಬೀಳತ್ತೆ' ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!
ರಾಮ್​, ಮೈಸೂರು
| Edited By: |

Updated on: Jan 17, 2026 | 2:56 PM

Share

ಮೈಸೂರು, ಜನವರಿ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲೇ ಮಹಿಳಾ ಸರ್ಕಾರಿ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ (Mysore) ಗುಡಮಾದನಹಳ್ಳಿ ಗ್ರಾಮದಲ್ಲಿ ಡಿಸೆಂಬರ್ 31ರಂದು ನಡೆದ ಈ ಪ್ರಕರಣದ ವಿಡಿಯೋ ಇತ್ತೀಚೆಗೆ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಜಮೀನು ಪರಿಶೀಲನೆಗೆ ತೆರಳಿದ ಅಧಿಕಾರಿಗಳಿಗೆ ನಿಂದನೆ

ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಮಾದರಿಯ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ವೆ ನಂ. 8ರಲ್ಲಿ 5 ಎಕರೆ 5 ಗುಂಟೆ, ಸರ್ವೆ ನಂ. 60ರಲ್ಲಿ 6 ಎಕರೆ 10 ಗುಂಟೆ ಹಾಗೂ ಸರ್ವೆ ನಂ. 68ರಲ್ಲಿ 8 ಎಕರೆ 25 ಗುಂಟೆ ಸೇರಿ ಒಟ್ಟು 20 ಎಕರೆ ಭೂಮಿಯನ್ನು ಆಸ್ಪತ್ರೆಗಾಗಿ ಮೀಸಲಿಡಲಾಗಿದೆ. ಸಿಎಂ ಸಿದ್ದರಾಮಯ್ಯ ಕನಸಿನ ಯೋಜನೆಯಾಗಿರುವ ಆಸ್ಪತ್ರೆಯ ಜಾಗ ಗುರುತಿಸುವ ಮತ್ತು ಸ್ವಾಧೀನ ಪ್ರಕ್ರಿಯೆಯ ಹಿನ್ನೆಲೆಯಲ್ಲಿ, ಬಂಡೀಪಾಳ್ಯ ವೃತ್ತದ ಗ್ರಾಮ ಆಡಳಿತಾಧಿಕಾರಿ ಜಿ. ಭವ್ಯಾ ಮತ್ತು ಗ್ರಾಮ ಸಹಾಯಕ ನವೀನ್ ಕುಮಾರ್ ಸೇರಿ ಜಮೀನು ಪರಿಶೀಲನೆಗೆ ತೆರಳಿದ್ದರು.

ನಿಂದನೆಯ ದೃಶ್ಯ ಮೊಬೈಲ್​ನಲ್ಲಿ ಸೆರೆ

ಪರಿಶೀಲನೆ ವೇಳೆ ಅನಧಿಕೃತವಾಗಿ ಅಡಕೆ ತೋಟ ನಿರ್ಮಿಸಿಕೊಂಡಿದ್ದ ಜಿ.ಎಂ. ಪುಟ್ಟಸ್ವಾಮಿ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಯಾರನ್ನು ಕೇಳಿ ನಿಮ್ಹಾನ್ಸ್ ಆಸ್ಪತ್ರೆಗೆ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ತಹಶೀಲ್ದಾರ್ ತಲೆ ತೆಗೆಯಬೇಕು ಎಂದು ಧಮ್ಕಿ ಹಾಕಿರುವ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ. ಬಳಿಕ ಪುಟ್ಟಸ್ವಾಮಿ ಮೊಬೈಲ್ ಕಿತ್ತುಕೊಂಡು ವಿಡಿಯೋ ಡಿಲೀಟ್ ಮಾಡಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಪುರಾತನ ವಸ್ತು ಪತ್ತೆ!
ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಪುರಾತನ ವಸ್ತು ಪತ್ತೆ!
ಶ್ರೀ ಮಹಾಕಾಳೇಶ್ವರನಿಗೆ ವಿರಾಟ್ ಕೊಹ್ಲಿ ವಿಶೇಷ ಪೂಜೆ
ಶ್ರೀ ಮಹಾಕಾಳೇಶ್ವರನಿಗೆ ವಿರಾಟ್ ಕೊಹ್ಲಿ ವಿಶೇಷ ಪೂಜೆ
ಬೆಳ್ಳಂಬೆಳಗ್ಗೆ ಗುದ್ದಲಿ, ಪೊರಕೆ ಹಿಡಿದು ಬೀದಿಗಿಳಿದ ಟೆಕ್ಕಿಗಳು!
ಬೆಳ್ಳಂಬೆಳಗ್ಗೆ ಗುದ್ದಲಿ, ಪೊರಕೆ ಹಿಡಿದು ಬೀದಿಗಿಳಿದ ಟೆಕ್ಕಿಗಳು!
ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ? ವಿಡಿಯೋ ನೋಡಿ
ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ? ವಿಡಿಯೋ ನೋಡಿ
ಪೌರಾಯುಕ್ತೆಗೆ ಅವಾಚ್ಯ ಶಬ್ದ ನಿಂದನೆ ಪ್ರಕರಣ; ಕ್ಷಮೆ ಕೇಳಿದ ನಟ ಝೈದ್ ಖಾನ್
ಪೌರಾಯುಕ್ತೆಗೆ ಅವಾಚ್ಯ ಶಬ್ದ ನಿಂದನೆ ಪ್ರಕರಣ; ಕ್ಷಮೆ ಕೇಳಿದ ನಟ ಝೈದ್ ಖಾನ್
ಸ್ಮಿತ್ ಸಿಡಿಲಬ್ಬರ... ಒಂದೇ ಓವರ್​ನಲ್ಲಿ ದಾಖಲೆ ಉಡೀಸ್
ಸ್ಮಿತ್ ಸಿಡಿಲಬ್ಬರ... ಒಂದೇ ಓವರ್​ನಲ್ಲಿ ದಾಖಲೆ ಉಡೀಸ್
ಇವತ್ತು ಫಿನಾಲೆ ಅಲ್ಲ, ಪ್ರೀ ಫಿನಾಲೆ; ಮಾಹಿತಿ ಕೊಟ್ಟ ಕಲರ್ಸ್ ಕನ್ನಡ
ಇವತ್ತು ಫಿನಾಲೆ ಅಲ್ಲ, ಪ್ರೀ ಫಿನಾಲೆ; ಮಾಹಿತಿ ಕೊಟ್ಟ ಕಲರ್ಸ್ ಕನ್ನಡ
ಜಿಬಿಎ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ: ಹೆಚ್​ಡಿಕೆ ಮಹತ್ವದ ಘೋಷಣೆ
ಜಿಬಿಎ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ: ಹೆಚ್​ಡಿಕೆ ಮಹತ್ವದ ಘೋಷಣೆ
ವಯಸ್ಸು ನಂಬರ್ ಮಾತ್ರ; ಸಿಸಿಎಲ್​​ನಲ್ಲಿ ಅದ್ಭುತ ಕ್ಯಾಚ್ ಹಿಡಿದ ಕಿಚ್ಚ
ವಯಸ್ಸು ನಂಬರ್ ಮಾತ್ರ; ಸಿಸಿಎಲ್​​ನಲ್ಲಿ ಅದ್ಭುತ ಕ್ಯಾಚ್ ಹಿಡಿದ ಕಿಚ್ಚ
ಮೊದಲ ಓವರ್​ನಲ್ಲೇ ತೂಫಾನ್... ಹೊಸ ಇತಿಹಾಸ ನಿರ್ಮಾಣ
ಮೊದಲ ಓವರ್​ನಲ್ಲೇ ತೂಫಾನ್... ಹೊಸ ಇತಿಹಾಸ ನಿರ್ಮಾಣ