AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಲ್ಲೇ ನಿನ್ನ ಹೆಣ ಬೀಳತ್ತೆ!’ ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಪ್ರಕರಣದ ಬೆನ್ನಲ್ಲೇ ಸಿಎಂ ತವರಿನಲ್ಲೂ ಇಂತದ್ದೇ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಮೈಸೂರಿನ ಮಹಿಳಾ ಅಧಿಕಾರಿಗೆ ವ್ಯಕ್ತಿಯೋರ್ವ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದು ಬೆಳಕಿಗೆ ಬಂದಿದೆ.

'ಇಲ್ಲೇ ನಿನ್ನ ಹೆಣ ಬೀಳತ್ತೆ!' ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!
'ಇಲ್ಲೇ ನಿನ್ನ ಹೆಣ ಬೀಳತ್ತೆ' ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!
ರಾಮ್​, ಮೈಸೂರು
| Edited By: |

Updated on: Jan 17, 2026 | 2:56 PM

Share

ಮೈಸೂರು, ಜನವರಿ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲೇ ಮಹಿಳಾ ಸರ್ಕಾರಿ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ (Mysore) ಗುಡಮಾದನಹಳ್ಳಿ ಗ್ರಾಮದಲ್ಲಿ ಡಿಸೆಂಬರ್ 31ರಂದು ನಡೆದ ಈ ಪ್ರಕರಣದ ವಿಡಿಯೋ ಇತ್ತೀಚೆಗೆ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಜಮೀನು ಪರಿಶೀಲನೆಗೆ ತೆರಳಿದ ಅಧಿಕಾರಿಗಳಿಗೆ ನಿಂದನೆ

ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಮಾದರಿಯ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ವೆ ನಂ. 8ರಲ್ಲಿ 5 ಎಕರೆ 5 ಗುಂಟೆ, ಸರ್ವೆ ನಂ. 60ರಲ್ಲಿ 6 ಎಕರೆ 10 ಗುಂಟೆ ಹಾಗೂ ಸರ್ವೆ ನಂ. 68ರಲ್ಲಿ 8 ಎಕರೆ 25 ಗುಂಟೆ ಸೇರಿ ಒಟ್ಟು 20 ಎಕರೆ ಭೂಮಿಯನ್ನು ಆಸ್ಪತ್ರೆಗಾಗಿ ಮೀಸಲಿಡಲಾಗಿದೆ. ಸಿಎಂ ಸಿದ್ದರಾಮಯ್ಯ ಕನಸಿನ ಯೋಜನೆಯಾಗಿರುವ ಆಸ್ಪತ್ರೆಯ ಜಾಗ ಗುರುತಿಸುವ ಮತ್ತು ಸ್ವಾಧೀನ ಪ್ರಕ್ರಿಯೆಯ ಹಿನ್ನೆಲೆಯಲ್ಲಿ, ಬಂಡೀಪಾಳ್ಯ ವೃತ್ತದ ಗ್ರಾಮ ಆಡಳಿತಾಧಿಕಾರಿ ಜಿ. ಭವ್ಯಾ ಮತ್ತು ಗ್ರಾಮ ಸಹಾಯಕ ನವೀನ್ ಕುಮಾರ್ ಸೇರಿ ಜಮೀನು ಪರಿಶೀಲನೆಗೆ ತೆರಳಿದ್ದರು.

ನಿಂದನೆಯ ದೃಶ್ಯ ಮೊಬೈಲ್​ನಲ್ಲಿ ಸೆರೆ

ಪರಿಶೀಲನೆ ವೇಳೆ ಅನಧಿಕೃತವಾಗಿ ಅಡಕೆ ತೋಟ ನಿರ್ಮಿಸಿಕೊಂಡಿದ್ದ ಜಿ.ಎಂ. ಪುಟ್ಟಸ್ವಾಮಿ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಯಾರನ್ನು ಕೇಳಿ ನಿಮ್ಹಾನ್ಸ್ ಆಸ್ಪತ್ರೆಗೆ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ತಹಶೀಲ್ದಾರ್ ತಲೆ ತೆಗೆಯಬೇಕು ಎಂದು ಧಮ್ಕಿ ಹಾಕಿರುವ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ. ಬಳಿಕ ಪುಟ್ಟಸ್ವಾಮಿ ಮೊಬೈಲ್ ಕಿತ್ತುಕೊಂಡು ವಿಡಿಯೋ ಡಿಲೀಟ್ ಮಾಡಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ