AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಗ್ಯಾಂಗ್​ ರೇಪ್​ ಪ್ರಕರಣ ಭೇದಿಸಲು 5 ಜಿಲ್ಲೆಗಳ 26 ಕ್ರೈಂ ಎಕ್ಸ್​​ಪರ್ಟ್​ಗಳು ಫೀಲ್ಡ್​​ಗೆ ಇಳಿದಿದ್ದರು! ವಿವರ ಇಲ್ಲಿದೆ

ಸದರಿ ದುಷ್ಕೃತ್ಯದ ಕುರಿತಾದ ತ್ವರಿತ ತನಿಖೆಗೆ ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ ಜಿಲ್ಲೆಗಳ ಪೊಲೀಸರ ಸಹಾಯವನ್ನು ಪಡೆಯಲಾಗಿದ್ದು, ಈ ಹಿಂದೆ ದೊಡ್ಡ ದೊಡ್ಡ ಅಪರಾಧ ಪ್ರಕರಣಗಳನ್ನು ಭೇದಿಸಿದ್ದ ಪೊಲೀಸರನ್ನೇ ಆರಿಸಿ ತಂಡ ರಚಿಸಲಾಗಿದೆ.

ಮೈಸೂರು ಗ್ಯಾಂಗ್​ ರೇಪ್​ ಪ್ರಕರಣ ಭೇದಿಸಲು 5 ಜಿಲ್ಲೆಗಳ 26 ಕ್ರೈಂ ಎಕ್ಸ್​​ಪರ್ಟ್​ಗಳು ಫೀಲ್ಡ್​​ಗೆ ಇಳಿದಿದ್ದರು! ವಿವರ ಇಲ್ಲಿದೆ
ಪೊಲೀಸ್​ ಮಹಾ ನಿರ್ದೇಶಕ ಪ್ರವೀಣ್​ ಸೂದ್​​
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 28, 2021 | 12:12 PM

ಮೈಸೂರು: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಜ್ಞಾನಿಕ ಸಾಕ್ಷ್ಯಗಳ ಮೂಲಕ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮಹತ್ವದ ತನಿಖೆಗಾಗಿ ಪೊಲೀಸ್​ ಇಲಾಖೆ ರಾಜ್ಯದ 5 ಜಿಲ್ಲೆಗಳಿಂದ ಅಪರಾಧ ಕೃತ್ಯಗಳ ತನಿಖೆಯಲ್ಲಿ ಪರಿಣಿತರಾದ ಪೊಲೀಸರನ್ನು ಆರಿಸಿಕೊಂಡಿದ್ದು, 26 ಪರಿಣಿತ ಆರಕ್ಷಕರನ್ನು ಒಳಗೊಂಡ ಒಂದು ತಂಡವನ್ನು ರಚಿಸಿ ರಹಸ್ಯ ಭೇದಿಸುತ್ತಿರುವುದು ತಿಳಿದುಬಂದಿದೆ.

ಸದರಿ ದುಷ್ಕೃತ್ಯದ ಕುರಿತಾದ ತ್ವರಿತ ತನಿಖೆಗೆ ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ ಜಿಲ್ಲೆಗಳ ಪೊಲೀಸರ ಸಹಾಯವನ್ನು ಪಡೆಯಲಾಗಿದ್ದು, ಈ ಹಿಂದೆ ದೊಡ್ಡ ದೊಡ್ಡ ಅಪರಾಧ ಪ್ರಕರಣಗಳನ್ನು ಭೇದಿಸಿದ್ದ ಪೊಲೀಸರನ್ನೇ ಆರಿಸಿ ತಂಡ ರಚಿಸಲಾಗಿದೆ. ಇದಕ್ಕಾಗಿ ಮೈಸೂರು ಜಿಲ್ಲೆಯ 7 ಪೊಲೀಸರು, ಚಾಮರಾಜನಗರ ಜಿಲ್ಲೆಯ 5 ಪೊಲೀಸರು, ಕೊಡಗು ಜಿಲ್ಲೆಯ 4 ಪೊಲೀಸರು, ಹಾಸನ ಜಿಲ್ಲೆಯ 5 ಪೊಲೀಸರು, ಮಂಡ್ಯ ಜಿಲ್ಲೆಯ 5 ಪೊಲೀಸರು ನಿಯೋಜನೆಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳ ಪತ್ತೆಗೆಂದೇ ಒಟ್ಟು 26 ಪರಿಣಿತ ಆರಕ್ಷಕರನ್ನು ಒಳಗೊಂಡ ತಂಡವನ್ನು ರಚಿಸಲಾಗಿದ್ದು, ತಂಡದಲ್ಲಿ ಇನ್ಸ್ಪೆಕ್ಟರ್, ‌ಸಬ್ ಇನ್ಸ್ಪೆಕ್ಟರ್, ಪೋಲಿಸ್ ಕಾನ್ಸ್‌ಟೇಬಲ್​ ಇದ್ದಾರೆ ಎಂದು ಗೊತ್ತಾಗಿದೆ. ದಕ್ಷಿಣ ವಲಯದಲ್ಲಿನ ಪರಿಣಿತ ಪೊಲೀಸರ ಪಟ್ಟಿ ಮಾಡಿಕೊಂಡು ತಂಡ ರಚಿಸಿದ ಇಲಾಖೆ ಈಗ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು ತನಿಖೆ ಮುಂದುವರೆಸಿದೆ.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿಗಳು ತಮಿಳುನಾಡಿನ ಸತ್ಯಮಂಗಲ ಮೂಲದವರು. ವಶಕ್ಕೆ ಪಡೆದಿರುವ ಐವರು ಆರೋಪಿಗಳು ಕೂಲಿಕಾರ್ಮಿಕರು. ಪ್ರಕರಣದಲ್ಲಿ ಇನ್ನೂ ಯಾರಾದರೂ ಇದ್ದಾರಾ ಎಂದೂ ತನಿಖೆ ನಡೆಯುತ್ತಿದೆ. ಏತನ್ಮಧ್ಯೆ, ಮೈಸೂರಿಗೆ ಪೊಲೀಸ್ ಮಹಾ ನಿರ್ದೇಶಕ (ಡಿಜಿ, ಐಜಿಪಿ) ಪ್ರವೀಣ್ ಸೂದ್​ ಆಗಮಿಸಿದ್ದು, ದಕ್ಷಿಣ ವಲಯ ಐಜಿಪಿ ಕಚೇರಿಗೆ ತಲುಪಿದ್ದಾರೆ. ಎಡಿಜಿಪಿ ಪ್ರತಾಪ್ ರೆಡ್ಡಿ, ಪೊಲೀಸ್ ಆಯುಕ್ತ ಚಂದ್ರಗುಪ್ತ, ಎಸ್​ಪಿ ಆರ್.ಚೇತನ್ ಜತೆ ಸಭೆ ನಡೆಸಲಿರುವ ಡಿಜಿ, ಐಜಿಪಿ ಪ್ರವೀಣ್ ಸೂದ್ ಕೆಲವೇ ಹೊತ್ತಿನಲ್ಲಿ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದಂತಹ ಘಟನೆ ಮುಂದೆಂದೂ ನಡೆಯಬಾರದು: ಎಡಿಜಿಪಿ ಪ್ರತಾಪ್ ರೆಡ್ಡಿ 

ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮುಂಬೈಗೆ ತೆರಳಿದ ಸಂತ್ರಸ್ತೆ; ಮೈಸೂರಿನತ್ತ ಹೊರಟ ಡಿಜಿ-ಐಜಿ ಪ್ರವೀಣ್ ಸೂದ್

(Mysuru Gang Rape case Police department formed squad of 26 crime experts from 5 districts)

Published On - 12:03 pm, Sat, 28 August 21

1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ