AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Gang Rape: ಜೇಬಲ್ಲಿ ಸದಾ ಕಾಂಡೋಮ್​ ಇಟ್ಟುಕೊಂಡೇ ಓಡಾಡುತ್ತಿದ್ದ ಆರೋಪಿ; 3 ಯುವತಿಯರು ಕೈಕೊಟ್ಟ ಬಳಿಕ ವಿಕೃತನಾಗಿದ್ದ

ಕಾಮುಕನಾಗಿರುವ ಆತ ಯಾವಾಗಲೂ ಜೇಬಿನಲ್ಲಿ ಕಾಂಡೋಮ್ ಇಟ್ಟುಕೊಂಡೇ ತಿರುಗಾಡುತ್ತಿದ್ದ. ಉಳಿದ ಆರೋಪಿಗಳು ದರೋಡೆ ನಡೆಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದರೆ ಈತ ಹೆಣ್ಣುಮಕ್ಕಳನ್ನು ತನ್ನಿಚ್ಛೆಯಂತೆ ಬಳಸಿಕೊಳ್ಳಲು ಹೊಂಚುಹಾಕುತ್ತಿದ್ದ ಎಂದು ಗೊತ್ತಾಗಿದೆ.

Mysuru Gang Rape: ಜೇಬಲ್ಲಿ ಸದಾ ಕಾಂಡೋಮ್​ ಇಟ್ಟುಕೊಂಡೇ ಓಡಾಡುತ್ತಿದ್ದ ಆರೋಪಿ; 3 ಯುವತಿಯರು ಕೈಕೊಟ್ಟ ಬಳಿಕ ವಿಕೃತನಾಗಿದ್ದ
ದುಷ್ಕೃತ್ಯ ನಡೆದ ಸ್ಥಳ
Follow us
TV9 Web
| Updated By: Skanda

Updated on:Aug 30, 2021 | 8:05 AM

ಮೈಸೂರು: ಮೈಸೂರಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರಕ್ಕೆ (Gang Rape) ಸಂಬಂಧಿಸಿದಂತೆ ತಮಿಳುನಾಡು ಮೂಲದ ಐವರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿರುವ ಪೊಲೀಸರು (Mysuru Police), ತಲೆಮರೆಸಿಕೊಂಡಿರುವ ಇನ್ನಿಬ್ಬರಿಗಾಗಿ ಹುಡಕಾಟ ಮುಂದುವರೆಸಿದ್ದಾರೆ. ಇತ್ತ ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು ಸಾಕಷ್ಟು ಮಾಹಿತಿ ಲಭ್ಯವಾಗುತ್ತಿದೆ. ಅತ್ಯಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ ಓರ್ವ ಭಗ್ನ ಪ್ರೇಮಿಯಾಗಿದ್ದ ಎನ್ನುವುದು ವಿಚಾರಣೆ ವೇಳೆ ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಆತನೇ ಬಾಯಿಬಿಟ್ಟಿದ್ದು, ಈ ಹಿಂದೆ ತಾನು ಮೂವರು ಯುವತಿಯರನ್ನು ಪ್ರೀತಿಸಿದ್ದಾಗಿ ಹಾಗೂ ಅವರೆಲ್ಲರೂ ತನ್ನಿಂದ ದೂರಾಗಿದ್ದಾಗಿ ಹೇಳಿಕೊಂಡಿದ್ದಾನೆ. ಅಲ್ಲದೇ, ಮೂವರು ಯುವತಿಯರು ಕೈಕೊಟ್ಟ ಬಳಿಕ ಆತ ವಿಕೃತನಾಗಿದ್ದು, ಅವಕಾಶ ಸಿಕ್ಕಾಗಲೆಲ್ಲ ಯುವತಿಯರಿಗೆ ಲೈಂಗಿಕ‌ ದೌರ್ಜನ್ಯ (Sexual Harassment) ಎಸಗುತ್ತಿದ್ದ ಎಂದು ತಿಳಿದುಬಂದಿದೆ.

ಅಂತೆಯೇ ಆರೋಪಿಯ ಜೇಬಿನಲ್ಲಿ ಸದಾ ಕಾಂಡೋಮ್ ಪ್ಯಾಕೆಟ್ ಇರುತ್ತಿತ್ತು ಎಂಬ ವಿಚಾರವೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕಾಮುಕನಾಗಿರುವ ಆತ ಯಾವಾಗಲೂ ಜೇಬಿನಲ್ಲಿ ಕಾಂಡೋಮ್ ಇಟ್ಟುಕೊಂಡೇ ತಿರುಗಾಡುತ್ತಿದ್ದ. ಉಳಿದ ಆರೋಪಿಗಳು ದರೋಡೆ ನಡೆಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದರೆ ಈತ ಹೆಣ್ಣುಮಕ್ಕಳನ್ನು ತನ್ನಿಚ್ಛೆಯಂತೆ ಬಳಸಿಕೊಳ್ಳಲು ಹೊಂಚುಹಾಕುತ್ತಿದ್ದ ಎಂದು ಗೊತ್ತಾಗಿದೆ.

ಸದರಿ ಅತ್ಯಾಚಾರಕ್ಕೂ ಮುನ್ನ ಈತ ಅನೇಕ ಯುವತಿಯರು, ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ನಿರ್ಜನ ಪ್ರದೇಶಕ್ಕೆ ಪುರುಷರ ಜೊತೆ ಬರುವ ಮಹಿಳೆಯರು ಹಾಗೂ ಪ್ರೇಮಿಗಳನ್ನು ಟಾರ್ಗೆಟ್ ಮಾಡಿಕೊಂಡು ದರೋಡೆ ನಡೆಸಿ, ದರೋಡೆ ನಂತರ ಹೆಣ್ಣುಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ಗೊತ್ತಾಗಿದೆ. ಉಳಿದವರು ಮದ್ಯಕ್ಕಾಗಿ, ಹಣಕ್ಕಾಗಿ ದರೋಡೆ ನಡೆಸಿದರೆ ಈತನ ಉದ್ದೇಶವೇ ಲೈಗಿಂಕ ದೌರ್ಜನ್ಯವಾಗಿತ್ತು ಎನ್ನಲಾಗಿದೆ.

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅತ್ಯಾಚರ ನಡೆದ ಸ್ಥಳದಲ್ಲೂ ಕಾಂಡೋಮ್​ ಸಿಕ್ಕಿದ್ದು, ಅದು ಈತನದ್ದೇ ಎಂದು ಹೇಳಲಾಗಿದೆ. ಮೂವರು ಯುವತಿಯರು ಕೈ ಕೊಟ್ಟ ಮೇಲೆ ವಿಕೃತನಾಗಿದ್ದ ಆರೋಪಿ ಸದಾ ಕಾಂಡೋಮ್ ಇಟ್ಟುಕೊಂಡು ಅವಕಾಶ ಸಿಕ್ಕಗಾಲೆಲ್ಲಾ ಯುವತಿಯರ ಮೇಲೆ ಲೈಂಗಿಕ‌ ದೌಜ್ಯನ್ಯ ಎಸಗುತ್ತಿದ್ದ ಎಂಬ ಮಾಹಿತಿ ಮೈಸೂರು ಪೊಲೀಸರಿಗೆ ಮಹತ್ವದ ಸಾಕ್ಷ್ಯವಾಗಲಿದೆ.

ಈ ಆರೋಪಿಗಳಿಗೆ ಇಂದು ಪೊಲೀಸರಿಂದ 2ನೇ ದಿನದ ವಿಚಾರಣೆ ನಡೆಯಲಿದ್ದು, ಮೈಸೂರಿನ ಅಜ್ಞಾತ ಸ್ಥಳದಲ್ಲಿ ವಿಚಾರಣೆ ಮುಂದುವರೆಯಲಿದೆ. ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಮಾರ್ಗದರ್ಶನದಲ್ಲಿ ಕಾನೂನು ಸುವ್ಯವಸ್ಥೆ ಡಿಸಿಪಿ ಪ್ರದೀಪ್ ಗುಂಟಿ, ದೇವರಾಜ ವಿಭಾಗದ ಎಸಿಪಿ ಡಾ.ಎಂ.ಎನ್.ಶಶಿಧರ್, ಆಲನಹಳ್ಳಿ ಇನ್ಸ್‌ಪೆಕ್ಟರ್ ರವಿಶಂಕರ್‌ರಿಂದ ವಿಚಾರಣೆ ನಡೆಯಲಿದ್ದು, ಇಂದು ಪೊಲೀಸರು ಸ್ಥಳ ಮಹಜರು ಮಾಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಈ ಹಿಂದೆ ಮೈಸೂರು ಬೆಟ್ಟದ ಬಳಿ ಸುಮಾರು ದರೋಡೆ ಮಾಡಿದ್ವಿ, ಯಾರೂ ದೂರು ಕೊಡಲ್ಲ ಎಂಬ ಧೈರ್ಯವಿತ್ತು: ಆರೋಪಿಗಳು 

ಮದುವೆ ಮಾಡಿಕೊಟ್ಟಿಲ್ಲ ಎಂದು ಹುಡುಗಿಯ ತಂದೆಯನ್ನೇ ಕೊಂದಿದ್ದ; ಮೈಸೂರು ರೇಪ್ ಕೇಸ್ ಆರೋಪಿಯ ಹಿನ್ನೆಲೆ ಬಯಲಿಗೆ

(Mysuru Gang Rape Case Update a culprit used to carry condom with him after breaking up with 3 girls)

Published On - 8:03 am, Mon, 30 August 21

ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ